Homeಕರ್ನಾಟಕ40% ಕಮಿಷನ್‌ ಸರ್ಕಾರದ ವಿರುದ್ಧ ಜನಜಾಗೃತಿಗೆ ರಾಜ್ಯ ಪ್ರವಾಸ: ಸಿದ್ದರಾಮಯ್ಯ ಘೋಷಣೆ

40% ಕಮಿಷನ್‌ ಸರ್ಕಾರದ ವಿರುದ್ಧ ಜನಜಾಗೃತಿಗೆ ರಾಜ್ಯ ಪ್ರವಾಸ: ಸಿದ್ದರಾಮಯ್ಯ ಘೋಷಣೆ

‘40% ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಪತ್ರ ಬರೆದಿತ್ತು. ನರೇಂದ್ರ ಮೋದಿಯವರು ಸುಮ್ಮನಿರುವುದು ಏಕೆ? 40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ?’

- Advertisement -
- Advertisement -

ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಬಲಿ ಪಡೆದ ಭ್ರಷ್ಟ 40% ಕಮಿಷನ್ ಸರ್ಕಾರದ ವಿರುದ್ಧ ಜನ ಜಾಗೃತಿ ಮೂಡಿಸಲು ನಾವು 5 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಗೂ ನಮ್ಮ ಪಕ್ಷದ ನಾಯಕರ ನೇತೃತ್ವದಲ್ಲಿ ತಂಡಗಳಾಗಿ ತೆರಳಿ, ಜನರ ಜೀವ ಮತ್ತು ರಾಜ್ಯದ ಮಾನ ಕಾಪಾಡಲು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವಂತೆ ಮನವಿ ಮಾಡುತ್ತೇವೆ ಎಂದು ಅವರು ಘೋಷಿಸಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕುತ್ತೇವೆ. ಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂಬರ್ 2 ಸ್ಥಾನಕ್ಕೇರಿಸಿದ್ದ ಮುಖ್ಯಮಂತ್ರಿಯೂ ಸೇರಿದಂತೆ ಸಾಲು ಸಾಲು ಸಚಿವರು ಜೈಲು ಸೇರಿದ್ದನ್ನು ದೇಶ ಕಂಡಿದೆ. ಈಗ ಈ ಭ್ರಷ್ಟರ ಎರಡನೇ‌ ಅಂಕ ಶುರುವಾಗಿದೆ. ಮತ್ತೆ ದೇಶದ ಮುಂದೆ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದಿದ್ದಾರೆ.

ಜಬಾಬ್ದಾರಿಯುತ ವಿರೋಧ ಪಕ್ಷವಾಗಿ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡುತ್ತೇವೆ. ಇದು ನಮ್ಮ ಕರ್ತವ್ಯ. ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಇನ್ನಷ್ಟು ಜೀವಗಳು ಬಲಿಯಾಗಬಾರದು ಎಂದು ಎಚ್ಚರಿಸಿದ್ದಾರೆ.

ಇದು ಕೇವಲ ಕಾಂಗ್ರೆಸ್ ಪಕ್ಷದ ರಾಜಕೀಯ ಪ್ರತಿಭಟನೆಯಾಗಬಾರದು. ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಲೂಟಿ‌ ಮಾಡುತ್ತಿರುವ ಮತ್ತು ರಾಷ್ಟಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕುತ್ತಿರುವ ಭ್ರಷ್ಟ ಬಿಜೆಪಿ‌ ಸರ್ಕಾರದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಬೀದಿಗಿಳಿಯಬೇಕಾಗಿದೆ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಸಚಿವ ಈಶ್ವರಪ್ಪ ಮೇಲೆ ನಿನ್ನೆಯೇ ಎಫ್.ಐ.ಆರ್ ದಾಖಲಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿರುವ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಬರೆದಿದ್ದಾರೆ. ರಾಜೀನಾಮೆ ಕೊಡುವುದಿಲ್ಲ ಎಂದು ಹಟ ಹಿಡಿದಿರುವ ಈಶ್ವರಪ್ಪನವರಿಗೆ ನರೇಂದ್ರ ಮೋದಿಯಾದಿಯಾಗಿ ಎಲ್ಲಾ ನಾಯಕರು ಮತ್ತು ಸರ್ಕಾರ ಹೆದರುತ್ತಿರುವುದು ಯಾಕೆ? 40% ಕಮಿಷನ್ ನಲ್ಲಿ ಪಾಲು‌ಪಡೆದವರೆಲ್ಲರ ಹೆಸರು ಬಯಲು ಮಾಡುತ್ತೇನೆ ಎಂದು ಈಶ್ವರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ 40% ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದೆ ಪ್ರಧಾನಿ ನರೇಂದ್ರ ಮೋದಿ ಸುಮ್ಮನಿರುವುದು ಏಕೆ? 40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ? ಎಂದು ಕೇಳಿದ್ದಾರೆ.

ಸಚಿವ ಈಶ್ವರಪ್ಪ ಅವರ ಮೇಲೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದ ಜೊತೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ -13 ರಡಿ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಬೇಕು. ಇದೊಂದು ಗಂಭೀರ ಸ್ವರೂಪದ ಅಪರಾಧ, ಕೂಡಲೇ ಅವರ ಬಂಧನವಾಗಬೇಕು ಎಂದು ಒತ್ತಾಯಿಸುತ್ತೇನೆ. ಈಶ್ವರಪ್ಪ ಅವರನ್ನು ಅನೇಕ ಬಾರಿ ಭೇಟಿ ಮಾಡಿದರೂ ಪ್ರಯೋಜನವಾಗದ ಕಾರಣಕ್ಕೆ ಸಂತೋಷ್ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಮಾಡಿ ಮನವಿ ಮಾಡಿದ್ದರು. ಇವರ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಉದ್ದೇಶದಿಂದ ಸಂತೋಷ್ ಪಾಟೀಲ್ ಉಡುಪಿಗೆ ಹೋಗಿದ್ದರು. ತಮ್ಮ ಕೊನೆ ಪ್ರಯತ್ನವೂ ಫಲ ನೀಡದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.‌‌ ಇದರಿಂದ ಕಮಿಷನ್ ಗಾಗಿ ಕಿರುಕುಳ ನೀಡಿದ ಸಚಿವರು ಮಾತ್ರವಲ್ಲ‌ ಮುಖ್ಯಮಂತ್ರಿಗಳೂ ಈ ಸಾವಿಗೆ ಹೊಣೆಗಾರರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಪತ್ರ ಕೊಟ್ಟಿದೆ. ರಾಜ್ಯಪಾಲರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮತ್ತು ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತಾರೆ ಎಂಬ ಭರವಸೆ ನಮಗಿದೆ ಎಂದಿದ್ದಾರೆ.


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...