Homeಕರ್ನಾಟಕಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಮಾನತೆಗಾಗಿ ಓಟಕ್ಕೆ ಚಾಲನೆ

- Advertisement -
- Advertisement -

ಇಂದು ದೇಶದಲ್ಲಿ ಅಸಮಾನತೆ ಹೆಚ್ಚಿದ್ದು, ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ, ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕಟಕಿಯಾಡಿದರು. ಭಾರತೀಯ ಪರಿವರ್ತನ ಸಂಘವು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಮುಂಜಾನೆ ಮೈಸೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಆಯೋಜಿಸಿದ್ದ ಸಮಾನತೆಗಾಗಿ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಇಂದು ಅಂಬೇಡ್ಕರ್ ಅವರು ಹುಟ್ಟಿದ ದಿನ. ಈ ನೆನಪಿಗಾಗಿ ‘ಸಮಾನತೆಗಾಗಿ ಓಟ’ ನಡೆಯುತ್ತಿದೆ. ಅದಕ್ಕೆ ಚಾಲನೆ ಕೊಡಲು ಬಂದಿದ್ದೇನೆ. ನೋಡುವುದಕ್ಕೆ ಮಾಜಿ ಆಟಗಾರ, ಹಾಲಿ ಕೋಚ್‌ನಂತೆ ಡ್ರೆಸ್‌ಕೋಡ್‌ನಲ್ಲೇನೋ ಬಂದಿದ್ದೇನೆ. ಕ್ಷಮೆ ಇರಲಿ. ನಾನು ಎಂದೂ ಓಡಿದವನು ಅಲ್ಲ, ನಿಮ್ಮೊಡನೆ ನಿಮ್ಮ ಹಿಂದೆ ಹಿಂದೆಯಾದರೂ ಓಡುವ ಚೈತನ್ಯವೂ ಈಗ ನನಗಿಲ್ಲ. ಓಡುತ್ತಿರುವ ಎಳೆಯರ ಬೆನ್ನು ತಟ್ಟಲು ಬಂದಿದ್ದೇನೆ. ಯಾಕೆಂದರೆ ನೀವು ಇಂದು ಓಡುತ್ತಿರುವುದು ಸಮಾನತೆಗಾಗಿ ಓಟ” ಎಂದು ದೇವನೂರ ಮಹಾದೇವ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಮಾನತೆಗಾಗಿ ಓಡುತ್ತಿರುವ ಎಳೆಯ ಸ್ನೇಹಿತರೆ ಇಂದು ನೀವು ತುಂಬಾ ವೇಗವಾಗಿ ಓಡಬೇಕಾಗಿದೆ. ಯಾಕೆಂದರೆ ಅಸಮಾನತೆ ಇಂದು ಎಂದೂ ಇಲ್ಲದಷ್ಟು ಹುಚ್ಚು ಕುದುರೆಯಂತೆ ಓಡುತ್ತಿದೆ. ಇದಾಗಲೇ ಅದು ತುಂಬ ದೂರ ಓಡಿದೆ. ಈ ದೇಶಕ್ಕೆ ದಿಕ್ಕು ತೋರಿಸುತ್ತಿರುವ ಚಿಂತಕ, ಹೋರಾಟಗಾರ ಯೋಗೇಂದ್ರ ಯಾದವ್ ಮೊನ್ನೆ ಮೊನ್ನೆ ತಾನೇ ಮೈಸೂರಿಗೆ ಬಂದಿದ್ದರು. ಅವರು ಮಾತಾಡುತ್ತ ಒಂದು ನುಡಿಗಟ್ಟು ಹೇಳಿದ್ದರು. ‘ಭಾರತದ ಪ್ರಧಾನಿ ಮೋದಿಯವರ ಬಾಯಲ್ಲಿ ಸೀತಾಪತಿ ಅಂದರೆ- ರಾಮ, ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿ ನೀತಾಪತಿ ಅಂದರೆ- ಅಂಬಾನಿ’” ಎಂದು ಅವರು ನೆನಪಿಸಿಕೊಂಡರು.

ಇದನ್ನೂ ಓದಿ: ಬಾಬಾಸಾಹೇಬರ ಚಿಂತನೆಗಳ ತಳಹದಿಯಲ್ಲಿ ರಾಷ್ಟ್ರವನ್ನು ಕಟ್ಟಿಕೊಳ್ಳದಿದ್ದರ ಪರಿಣಾಮ..

“ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿರುವ ಅಂಬಾನಿ ಲಕ್ಷಾಂತರ ಕೋಟಿಗಳ ಒಡೆಯ. ಭಾರತದಲ್ಲಿ ಇಂತಹ ನೂರಾರು ಬಿಲಿಯರ್ ಕುಟುಂಬಗಳ ಸಂಪತ್ತು ಒಟ್ಟಾದರೆ ಅದು ದೇಶದ ಒಟ್ಟು ಸಂಪತ್ತಿನ ಅರ್ಧಭಾಗದಷ್ಟು ಆಗುತ್ತದಂತೆ. ಬಡವರ ಸಂಖ್ಯೆ ದಿನ ದಿನವೂ ಹೆಚ್ಚುತ್ತಿದೆ. ಇಷ್ಟೊಂದು ಅಸಮಾನತೆ ಇಂದು ದೇಶದಲ್ಲಿದೆ. ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ. ಅಸಮಾನತೆಯ ಹುಚ್ಚು ಕುದುರೆ ಹುಚ್ಚೆದ್ದು ಓಡುತ್ತಿದೆ. ಆದರಿಂದ ಕಚ್ಚಿಸಿಕೊಳ್ಳದೆ ನೀವು ಎಚ್ಚರ ವಹಿಸಿ ಓಡಬೇಕಾಗಿದೆ. ನೀವು ಎಳೆಯರಾದ್ದರಿಂದ ನೀವು ಗೆಲ್ಲುತ್ತೀರಿ ಎಂಬ ನಂಬಿಕೆ ನನಗಿದೆ. ನೀವು ಗೆಲ್ಲಲೇ ಬೇಕು” ಎಂದು ಅವರು ಕರೆ ನೀಡಿದರು.

ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್, ಎಸಿಪಿ ಎಸ್.ಗಂಗಾಧರಸ್ವಾಮಿ, ಕೇಂದ್ರ ಅಬಕಾರ ಮತ್ತು ಸುಂಕ ಇಲಾಖೆಯ ಅಧೀಕ್ಷಕ ಎಂ.ಯೋಗೇಂದ್ರ, ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ, ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಮಲ್ಲಿಕಾರ್ಜುನ್, ಅರವಳಿಕೆ ತಜ್ಞ ಡಾ.ಶ್ಯಾಮ್ ಪ್ರಸಾದ್, ಜಾತ್ಯಾತೀತ ಜನತಾದಳ ಮುಖಂಡ ದೇವರಾಜ್ ಒಡೆಯರ್, ಸಾಹಿತಿ ಸೋಸಲೆ ಗಂಗಾಧರ್, ದುರ್ಗಾಂಬ ಎಂಟರ್‌ಪ್ರೈಸಸ್‌ನ ಎನ್.ಶಂಕರ, ಶ್ರೀಕಂಠೇಶ್ವರ ಎಂಟರ್‌ಪ್ರೈಸಸ್‌ನ ಜಗದೀಶ್, ತೇಜಸ್ವಿನಿ ಎಂಟರ್‌ಪ್ರೈಸಸ್‌ನ ರಾಮಕೃಷ್ಣ, ಬಿಪಿಎಸ್ ಜಿಲ್ಲಾ ಸಂಚಾಲಕ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಭೀಮನಹಲ್ಳಿ ಸೋಮೇಶ್, ಜಿಲ್ಲಾ ಕಾರ್ಯದರ್ಶಿ ಕೆ.ಎನ್.ಪ್ರಭುಸ್ವಾಮಿ, ಜಯಶಂಕರ್ ಮೇಸ್ತ್ರಿ ಮತ್ತಿತರರು ಪಾಲ್ಗೊಂಡಿದ್ದರು.

ಸಮಾನತೆಗಾಗಿ ಓಟದಲ್ಲಿ ಪಾಲ್ಗೊಂಡ ಕಿರಿ-ಹಿರಿಯರು

ಭಾರತೀಯ ಪರಿವರ್ತನ ಸಂಘ ಆಯೋಜಿಸಿದ್ದ ಸಮಾನತೆಗಾಗಿ ಓಟದಲ್ಲಿ ಕಿರಿಯರು- ಹಿರಿಯರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಓಟ ಹಾರ್ಡಿಂಜ್ ವೃತ್ತ, ಗನ್‌ಹೌಸ್, ರಾಮಸ್ವಾಮಿ ವೃತ್ತ, ಆರ್‌ಟಿಓ, ಅಶೋಕ ವೃತ್ತ, ಕೃಷ್ಣ ಬುಲೇವಾರ್ಡ್ ರಸ್ತೆ, ಕಲಾಮಂದಿರ ರಸ್ತೆ, ರೈಲ್ವೆ ವೃತ್ತ, ಇರ್ವಿನ್ ರಸ್ತೆ ಮಾರ್ಗವಾಗಿ ಪುರಭವನದಲ್ಲಿ ಅಂತ್ಯವಾಯಿತು. ಸುಮಾರು 12 ಕಿ.ಮೀ. ಓಟದಲ್ಲಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಪ್ರಲಾಕ್ಷ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ತೇಜಸ್ವಿನಿ ಎಂಟರ್‌ಪ್ರೈಸಸ್‌ನಿಂದ ಟಿ-ಷರ್ಟ್ ವಿತರಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...