Homeಚಳವಳಿ100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ಶೇ.50 ರಷ್ಟು ಮಹಿಳೆಯರು ಓದಿದ್ದಾರೆ. ಸುಮಾರು 6-7 ಲಕ್ಷ ಜನರು ಕೇಳಿಸಿಕೊಂಡಿದ್ದಾರೆ. ಹಲವರು ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಇದು ಸರಣಿಯ ಯಶಸ್ಸು.

- Advertisement -
- Advertisement -

ಇಂದು ಬಾಬಾ ಸಾಹೇಬ್ ಭೀಮ್‌ರಾವ್ ಅಂಬೇಡ್ಕರ್‌ರವರ 131ನೇ ಜನ್ಮದಿನ. ಅಂಬೇಡ್ಕರ್ ನೆನಪಿನಲ್ಲಿ ಜಗತ್ತಿನಾದ್ಯಂತ ಸಮಾನತೆಯ ದಿನವನ್ನಾಗಿ ಇಂದು ಆಚರಿಸಲಾಗುತ್ತಿದೆ. ಅಂಬೇಡ್ಕರ್ ಬದುಕು, ಬರಹ ಹೋರಾಟದ ಕುರಿತು ಚರ್ಚೆ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ಅಂಬೇಡ್ಕರ್‌ರವರ ಮೂಲ ಬರಹಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿಯು’ 100 ಗಂಟೆಗಳ ಕಾಲ ಪೂರೈಸಿ ಮುನ್ನಡೆಯುತ್ತಿದೆ. ಆ ಮೂಲಕ ಡಿಜಿಟಲ್ ಮಾಧ್ಯಮಗಳಲ್ಲಿಯೂ ಅಂಬೇಡ್ಕರ್ ವಿಚಾರಗಳು ಹರಿದಾಡುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಜಾನಪದ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಅರುಣ್ ಜೋಳದ ಕೂಡ್ಲಿಗಿಯವರು ಸೆಪ್ಟೆಂಬರ್ 7, 2020 ರಂದು ಆರಂಭಿಸಿದ ಈ ಅಂಬೇಡ್ಕರ್ ಓದು ಸರಣಿಯಲ್ಲಿ ಒಟ್ಟು 470 ಸಂಚಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿವೆ. 321 ಜನ ಅಂಬೇಡ್ಕರ್‌ರವರ ಬರಹಗಳನ್ನು ಓದಿಕೊಂಡು ನಂತರ ಆಡಿಯೊ ಮಾಡಿ ಇನ್ನಿತರರು ಕೇಳುವಂತೆ ಮಾಡಿದ್ದಾರೆ. ಅದರಲ್ಲಿ 155 ಮಹಿಳೆಯರು ಸಹ ಸಹಭಾಗಿಗಳಾಗಿರುವುದು ವಿಶೇಷವಾಗಿದೆ.

Arun jolad Kudligi ಯೂಟ್ಯೂಬ್ ಚಾನೆಲ್‌ನಲ್ಲಿ ಈ ಎಲ್ಲಾ 470 ಸಂಚಿಕೆಗಳನ್ನು ಯಾರೂ ಬೇಕಾದರೂ ಉಚಿತವಾಗಿ ಕೇಳಬಹುದಾಗಿದೆ. ಅಂಬೇಡ್ಕರ್‌ರವರು ಬರೆದಿರುವ ‘ಹಿಂದೂ ಧರ್ಮದ ತತ್ವಜ್ಞಾನ, ಬುದ್ಧ ಮತ್ತು ಆತನ ಧಮ್ಮ, ಸ್ಟೇಟ್ಸ್ ಅಂಡ್ ಮೈನಾರೀಟಿಸ್’ ಸೇರಿದಂತೆ ಹಲವಾರು ಪುಸ್ತಕಗಳ ಪ್ರಮುಖ ಭಾಗಗಳನ್ನು ಆಡಿಯೋ ಮಾಡುವ ಮೂಲಕ “ಅಂಬೇಡ್ಕರ್ ಕೇಳು” ಎಂಬುದಾಗಿ ಈ ಅಭಿಯಾನ ನಡೆಯುತ್ತಿದೆ. ಅಲ್ಲದೆ ಈ ಸರಣಿಯಲ್ಲಿ ಅಂಬೇಡ್ಕರ್‌ರವರ ಲೇಖನಗಳು- ಬರಹಗಳು, ಪತ್ರಿಕಾ ಹೇಳಿಕೆಗಳು, ಭಾಷಣಗಳು, ಟಿಪ್ಪಣಿಗಳು ಮತ್ತು ಪತ್ರಗಳು ಸಹ ಇದ್ದು, ಅಂಬೇಡ್ಕರ್‌ರವರ ನಿಲುವುಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತವೆ.

“ಇಂದು ಹೆಚ್ಚಿನ ಜನರು ತಮ್ಮ ಹೆಚ್ಚಿನ ಸಮಯವನ್ನು ಡಿಜಿಟಲ್ ಸ್ಪೇಸ್‌ಗಳಲ್ಲಿ ವ್ಯಯಿಸುತ್ತಿದ್ದಾರೆ. ಅಲ್ಲಿಯೂ ಸಹ ಅಂಬೇಡ್ಕರ್‌ ಬರಹಗಳು ಕೇಳಲು, ಓದಲು ಸಿಗುವಂತೆ ಮಾಡಬೇಕು ಎಂಬ ಉದ್ದೇಶದಿಂದ ಈ ಸರಣಿ ಆರಂಭಿಸಿದೆವು. ಎಲ್ಲರ ಅಂಬೇಡ್ಕರ್ ಎನ್ನುವ ತತ್ವದಡಿ ಸಹಭಾಗಿತ್ವದ ಒಳಗೊಳ್ಳುವಿಕೆಯ ಮೂಲಕ ಇದು ಯಶಸ್ಸು ಗಳಿಸಿದೆ. ಹಾಗಾಗಿ ಇದು ಎಲ್ಲರ ಸಹಭಾಗಿತ್ವದ ಗೆಲುವು ಎಂದು ಕರೆಯಬಹುದು” ಎನ್ನುತ್ತಾರೆ ಸರಣಿಯನ್ನು ಆರಂಭಿಸಿದ ಅರುಣ್ ಜೋಳದ ಕೂಡ್ಲಿಗಿಯವರು.

ಶೇ.50 ರಷ್ಟು ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಸುಮಾರು 6-7 ಲಕ್ಷ ಜನರು ಈ ಬರಹಗಳನ್ನು ಕೇಳಿಸಿಕೊಂಡಿದ್ದಾರೆ. ಇದುವರೆಗೂ ಅಂಬೇಡ್ಕರ್ ಬರಹಗಳನ್ನು ಓದಲು ಸಾಧ್ಯವಾಗದಿದ್ದವರು ಈ ಸರಣಿ ಆರಂಭವಾದ ನಂತರ ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಅಂಬೇಡ್ಕರ್ ಚಿಂತನೆಗೆ ಪ್ರವೇಶ ಮಾಡಲಾಗದಿರುವವರನ್ನು ಗುರುತಿಸಿ ಒಳಗೊಳ್ಳುತ್ತಿದ್ದೇವೆ, ಇದೆಲ್ಲವೂ ಈ ಸರಣಿಯ ಸಾಧನೆ ಎಂದು ಅವರು ಹೇಳುತ್ತಾರೆ.

ಇನ್ನು ಮುಂದೆ ಅಂಬೇಡ್ಕರ್‌ರವರ ಬಹುಮುಖ್ಯವಾದ ದೊಡ್ಡ ಪುಸ್ತಕಗಳನ್ನು ಓದುವ ಯೋಜನೆ ಹಾಕಿಕೊಂಡಿದ್ದೇವೆ. ಹಿಂದೂ ಧರ್ಮದ ತತ್ವಜ್ಞಾನ ಎಂಬ 100 ಪುಟದ ಪುಸ್ತಕವನ್ನು 20 ಜನರು ಓದಲು ಹಂಚಿಕೊಂಡಿದ್ದೇವೆ. ಅಂಬೇಡ್ಕರ್‌ರವರ ಎಲ್ಲಾ ಬರಹಗಳನ್ನು ಇಲ್ಲಿ ತರಲು ಸಾಧ್ಯವಾಗದಿದ್ದರೂ ಅಂಬೇಡ್ಕರ್‌ರವರು ಬರೆದ, ಆಲೋಚಿಸಿದ ನೂರಾರು ಕ್ಷೇತ್ರಗಳ ಪ್ರಮುಖ ಭಾಗಗಳನ್ನು ಇಲ್ಲಿ ತರಲು ಉದ್ದೇಶಿಸಿದ್ದೇವೆ ಎಂದರು.

ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಅದ್ಭುತ ಜ್ಞಾನ ಭಂಡಾರವಾಗಿ ಈ ಅಂಬೇಡ್ಕರ್ ಓದು ಸರಣಿ ರೂಪುಗೊಂಡಿದೆ ಮತ್ತು ಮುಂದುವರೆಯುತ್ತಿದೆ. ನಿಮ್ಮ ಮೊಬೈಲ್‌ಗೆ ಒಂದು ಹೆಡ್‌ಫೋನ್ ಸಿಕ್ಕಿಸಿ ನಿಮ್ಮ ನಿಮ್ಮ ಕೆಲಸ ಮಾಡುತ್ತಲೇ ಅಂಬೇಡ್ಕರ್ ಚಿಂತನೆಗಳನ್ನು ಕೇಳಿಸಿಕೊಂಡು ಮನಸ್ಸಿಗೆ ಇಳಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. ಮುಂದೆಯು ಕೇಳಲು ಚಾನೆಲ್ ಸಬ್‌ಸ್ಕ್ರೈಬ್‌ ಮಾಡಿ. ಅದೇ ರೀತಿಯಾಗಿ ನೀವು ಸಹ ಅಂಬೇಡ್ಕರ್ ಬರಹಗಳನ್ನು ಓದಿ ಸರಣಿಗೆ ಕೊಡುಗೆ ನೀಡಲು ಬಯಸಿದರೆ ಆಯೋಜಕರಾದ ಡಾ. ಅರುಣ್ ಜೋಳದ ಕೂಡ್ಲಿಗಿಯವರನ್ನು (9901445702) ಸಂಪರ್ಕಿಸಬಹುದು.


ಇದನ್ನೂ ಓದಿ: ಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...