Homeಚಳವಳಿ100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ಶೇ.50 ರಷ್ಟು ಮಹಿಳೆಯರು ಓದಿದ್ದಾರೆ. ಸುಮಾರು 6-7 ಲಕ್ಷ ಜನರು ಕೇಳಿಸಿಕೊಂಡಿದ್ದಾರೆ. ಹಲವರು ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಇದು ಸರಣಿಯ ಯಶಸ್ಸು.

- Advertisement -
- Advertisement -

ಇಂದು ಬಾಬಾ ಸಾಹೇಬ್ ಭೀಮ್‌ರಾವ್ ಅಂಬೇಡ್ಕರ್‌ರವರ 131ನೇ ಜನ್ಮದಿನ. ಅಂಬೇಡ್ಕರ್ ನೆನಪಿನಲ್ಲಿ ಜಗತ್ತಿನಾದ್ಯಂತ ಸಮಾನತೆಯ ದಿನವನ್ನಾಗಿ ಇಂದು ಆಚರಿಸಲಾಗುತ್ತಿದೆ. ಅಂಬೇಡ್ಕರ್ ಬದುಕು, ಬರಹ ಹೋರಾಟದ ಕುರಿತು ಚರ್ಚೆ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ಅಂಬೇಡ್ಕರ್‌ರವರ ಮೂಲ ಬರಹಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿಯು’ 100 ಗಂಟೆಗಳ ಕಾಲ ಪೂರೈಸಿ ಮುನ್ನಡೆಯುತ್ತಿದೆ. ಆ ಮೂಲಕ ಡಿಜಿಟಲ್ ಮಾಧ್ಯಮಗಳಲ್ಲಿಯೂ ಅಂಬೇಡ್ಕರ್ ವಿಚಾರಗಳು ಹರಿದಾಡುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಜಾನಪದ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಅರುಣ್ ಜೋಳದ ಕೂಡ್ಲಿಗಿಯವರು ಸೆಪ್ಟೆಂಬರ್ 7, 2020 ರಂದು ಆರಂಭಿಸಿದ ಈ ಅಂಬೇಡ್ಕರ್ ಓದು ಸರಣಿಯಲ್ಲಿ ಒಟ್ಟು 470 ಸಂಚಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿವೆ. 321 ಜನ ಅಂಬೇಡ್ಕರ್‌ರವರ ಬರಹಗಳನ್ನು ಓದಿಕೊಂಡು ನಂತರ ಆಡಿಯೊ ಮಾಡಿ ಇನ್ನಿತರರು ಕೇಳುವಂತೆ ಮಾಡಿದ್ದಾರೆ. ಅದರಲ್ಲಿ 155 ಮಹಿಳೆಯರು ಸಹ ಸಹಭಾಗಿಗಳಾಗಿರುವುದು ವಿಶೇಷವಾಗಿದೆ.

Arun jolad Kudligi ಯೂಟ್ಯೂಬ್ ಚಾನೆಲ್‌ನಲ್ಲಿ ಈ ಎಲ್ಲಾ 470 ಸಂಚಿಕೆಗಳನ್ನು ಯಾರೂ ಬೇಕಾದರೂ ಉಚಿತವಾಗಿ ಕೇಳಬಹುದಾಗಿದೆ. ಅಂಬೇಡ್ಕರ್‌ರವರು ಬರೆದಿರುವ ‘ಹಿಂದೂ ಧರ್ಮದ ತತ್ವಜ್ಞಾನ, ಬುದ್ಧ ಮತ್ತು ಆತನ ಧಮ್ಮ, ಸ್ಟೇಟ್ಸ್ ಅಂಡ್ ಮೈನಾರೀಟಿಸ್’ ಸೇರಿದಂತೆ ಹಲವಾರು ಪುಸ್ತಕಗಳ ಪ್ರಮುಖ ಭಾಗಗಳನ್ನು ಆಡಿಯೋ ಮಾಡುವ ಮೂಲಕ “ಅಂಬೇಡ್ಕರ್ ಕೇಳು” ಎಂಬುದಾಗಿ ಈ ಅಭಿಯಾನ ನಡೆಯುತ್ತಿದೆ. ಅಲ್ಲದೆ ಈ ಸರಣಿಯಲ್ಲಿ ಅಂಬೇಡ್ಕರ್‌ರವರ ಲೇಖನಗಳು- ಬರಹಗಳು, ಪತ್ರಿಕಾ ಹೇಳಿಕೆಗಳು, ಭಾಷಣಗಳು, ಟಿಪ್ಪಣಿಗಳು ಮತ್ತು ಪತ್ರಗಳು ಸಹ ಇದ್ದು, ಅಂಬೇಡ್ಕರ್‌ರವರ ನಿಲುವುಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತವೆ.

“ಇಂದು ಹೆಚ್ಚಿನ ಜನರು ತಮ್ಮ ಹೆಚ್ಚಿನ ಸಮಯವನ್ನು ಡಿಜಿಟಲ್ ಸ್ಪೇಸ್‌ಗಳಲ್ಲಿ ವ್ಯಯಿಸುತ್ತಿದ್ದಾರೆ. ಅಲ್ಲಿಯೂ ಸಹ ಅಂಬೇಡ್ಕರ್‌ ಬರಹಗಳು ಕೇಳಲು, ಓದಲು ಸಿಗುವಂತೆ ಮಾಡಬೇಕು ಎಂಬ ಉದ್ದೇಶದಿಂದ ಈ ಸರಣಿ ಆರಂಭಿಸಿದೆವು. ಎಲ್ಲರ ಅಂಬೇಡ್ಕರ್ ಎನ್ನುವ ತತ್ವದಡಿ ಸಹಭಾಗಿತ್ವದ ಒಳಗೊಳ್ಳುವಿಕೆಯ ಮೂಲಕ ಇದು ಯಶಸ್ಸು ಗಳಿಸಿದೆ. ಹಾಗಾಗಿ ಇದು ಎಲ್ಲರ ಸಹಭಾಗಿತ್ವದ ಗೆಲುವು ಎಂದು ಕರೆಯಬಹುದು” ಎನ್ನುತ್ತಾರೆ ಸರಣಿಯನ್ನು ಆರಂಭಿಸಿದ ಅರುಣ್ ಜೋಳದ ಕೂಡ್ಲಿಗಿಯವರು.

ಶೇ.50 ರಷ್ಟು ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಸುಮಾರು 6-7 ಲಕ್ಷ ಜನರು ಈ ಬರಹಗಳನ್ನು ಕೇಳಿಸಿಕೊಂಡಿದ್ದಾರೆ. ಇದುವರೆಗೂ ಅಂಬೇಡ್ಕರ್ ಬರಹಗಳನ್ನು ಓದಲು ಸಾಧ್ಯವಾಗದಿದ್ದವರು ಈ ಸರಣಿ ಆರಂಭವಾದ ನಂತರ ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಅಂಬೇಡ್ಕರ್ ಚಿಂತನೆಗೆ ಪ್ರವೇಶ ಮಾಡಲಾಗದಿರುವವರನ್ನು ಗುರುತಿಸಿ ಒಳಗೊಳ್ಳುತ್ತಿದ್ದೇವೆ, ಇದೆಲ್ಲವೂ ಈ ಸರಣಿಯ ಸಾಧನೆ ಎಂದು ಅವರು ಹೇಳುತ್ತಾರೆ.

ಇನ್ನು ಮುಂದೆ ಅಂಬೇಡ್ಕರ್‌ರವರ ಬಹುಮುಖ್ಯವಾದ ದೊಡ್ಡ ಪುಸ್ತಕಗಳನ್ನು ಓದುವ ಯೋಜನೆ ಹಾಕಿಕೊಂಡಿದ್ದೇವೆ. ಹಿಂದೂ ಧರ್ಮದ ತತ್ವಜ್ಞಾನ ಎಂಬ 100 ಪುಟದ ಪುಸ್ತಕವನ್ನು 20 ಜನರು ಓದಲು ಹಂಚಿಕೊಂಡಿದ್ದೇವೆ. ಅಂಬೇಡ್ಕರ್‌ರವರ ಎಲ್ಲಾ ಬರಹಗಳನ್ನು ಇಲ್ಲಿ ತರಲು ಸಾಧ್ಯವಾಗದಿದ್ದರೂ ಅಂಬೇಡ್ಕರ್‌ರವರು ಬರೆದ, ಆಲೋಚಿಸಿದ ನೂರಾರು ಕ್ಷೇತ್ರಗಳ ಪ್ರಮುಖ ಭಾಗಗಳನ್ನು ಇಲ್ಲಿ ತರಲು ಉದ್ದೇಶಿಸಿದ್ದೇವೆ ಎಂದರು.

ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಅದ್ಭುತ ಜ್ಞಾನ ಭಂಡಾರವಾಗಿ ಈ ಅಂಬೇಡ್ಕರ್ ಓದು ಸರಣಿ ರೂಪುಗೊಂಡಿದೆ ಮತ್ತು ಮುಂದುವರೆಯುತ್ತಿದೆ. ನಿಮ್ಮ ಮೊಬೈಲ್‌ಗೆ ಒಂದು ಹೆಡ್‌ಫೋನ್ ಸಿಕ್ಕಿಸಿ ನಿಮ್ಮ ನಿಮ್ಮ ಕೆಲಸ ಮಾಡುತ್ತಲೇ ಅಂಬೇಡ್ಕರ್ ಚಿಂತನೆಗಳನ್ನು ಕೇಳಿಸಿಕೊಂಡು ಮನಸ್ಸಿಗೆ ಇಳಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. ಮುಂದೆಯು ಕೇಳಲು ಚಾನೆಲ್ ಸಬ್‌ಸ್ಕ್ರೈಬ್‌ ಮಾಡಿ. ಅದೇ ರೀತಿಯಾಗಿ ನೀವು ಸಹ ಅಂಬೇಡ್ಕರ್ ಬರಹಗಳನ್ನು ಓದಿ ಸರಣಿಗೆ ಕೊಡುಗೆ ನೀಡಲು ಬಯಸಿದರೆ ಆಯೋಜಕರಾದ ಡಾ. ಅರುಣ್ ಜೋಳದ ಕೂಡ್ಲಿಗಿಯವರನ್ನು (9901445702) ಸಂಪರ್ಕಿಸಬಹುದು.


ಇದನ್ನೂ ಓದಿ: ಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...