Homeಚಳವಳಿ100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ಶೇ.50 ರಷ್ಟು ಮಹಿಳೆಯರು ಓದಿದ್ದಾರೆ. ಸುಮಾರು 6-7 ಲಕ್ಷ ಜನರು ಕೇಳಿಸಿಕೊಂಡಿದ್ದಾರೆ. ಹಲವರು ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಇದು ಸರಣಿಯ ಯಶಸ್ಸು.

- Advertisement -
- Advertisement -

ಇಂದು ಬಾಬಾ ಸಾಹೇಬ್ ಭೀಮ್‌ರಾವ್ ಅಂಬೇಡ್ಕರ್‌ರವರ 131ನೇ ಜನ್ಮದಿನ. ಅಂಬೇಡ್ಕರ್ ನೆನಪಿನಲ್ಲಿ ಜಗತ್ತಿನಾದ್ಯಂತ ಸಮಾನತೆಯ ದಿನವನ್ನಾಗಿ ಇಂದು ಆಚರಿಸಲಾಗುತ್ತಿದೆ. ಅಂಬೇಡ್ಕರ್ ಬದುಕು, ಬರಹ ಹೋರಾಟದ ಕುರಿತು ಚರ್ಚೆ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ಅಂಬೇಡ್ಕರ್‌ರವರ ಮೂಲ ಬರಹಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿಯು’ 100 ಗಂಟೆಗಳ ಕಾಲ ಪೂರೈಸಿ ಮುನ್ನಡೆಯುತ್ತಿದೆ. ಆ ಮೂಲಕ ಡಿಜಿಟಲ್ ಮಾಧ್ಯಮಗಳಲ್ಲಿಯೂ ಅಂಬೇಡ್ಕರ್ ವಿಚಾರಗಳು ಹರಿದಾಡುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಜಾನಪದ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಅರುಣ್ ಜೋಳದ ಕೂಡ್ಲಿಗಿಯವರು ಸೆಪ್ಟೆಂಬರ್ 7, 2020 ರಂದು ಆರಂಭಿಸಿದ ಈ ಅಂಬೇಡ್ಕರ್ ಓದು ಸರಣಿಯಲ್ಲಿ ಒಟ್ಟು 470 ಸಂಚಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿವೆ. 321 ಜನ ಅಂಬೇಡ್ಕರ್‌ರವರ ಬರಹಗಳನ್ನು ಓದಿಕೊಂಡು ನಂತರ ಆಡಿಯೊ ಮಾಡಿ ಇನ್ನಿತರರು ಕೇಳುವಂತೆ ಮಾಡಿದ್ದಾರೆ. ಅದರಲ್ಲಿ 155 ಮಹಿಳೆಯರು ಸಹ ಸಹಭಾಗಿಗಳಾಗಿರುವುದು ವಿಶೇಷವಾಗಿದೆ.

Arun jolad Kudligi ಯೂಟ್ಯೂಬ್ ಚಾನೆಲ್‌ನಲ್ಲಿ ಈ ಎಲ್ಲಾ 470 ಸಂಚಿಕೆಗಳನ್ನು ಯಾರೂ ಬೇಕಾದರೂ ಉಚಿತವಾಗಿ ಕೇಳಬಹುದಾಗಿದೆ. ಅಂಬೇಡ್ಕರ್‌ರವರು ಬರೆದಿರುವ ‘ಹಿಂದೂ ಧರ್ಮದ ತತ್ವಜ್ಞಾನ, ಬುದ್ಧ ಮತ್ತು ಆತನ ಧಮ್ಮ, ಸ್ಟೇಟ್ಸ್ ಅಂಡ್ ಮೈನಾರೀಟಿಸ್’ ಸೇರಿದಂತೆ ಹಲವಾರು ಪುಸ್ತಕಗಳ ಪ್ರಮುಖ ಭಾಗಗಳನ್ನು ಆಡಿಯೋ ಮಾಡುವ ಮೂಲಕ “ಅಂಬೇಡ್ಕರ್ ಕೇಳು” ಎಂಬುದಾಗಿ ಈ ಅಭಿಯಾನ ನಡೆಯುತ್ತಿದೆ. ಅಲ್ಲದೆ ಈ ಸರಣಿಯಲ್ಲಿ ಅಂಬೇಡ್ಕರ್‌ರವರ ಲೇಖನಗಳು- ಬರಹಗಳು, ಪತ್ರಿಕಾ ಹೇಳಿಕೆಗಳು, ಭಾಷಣಗಳು, ಟಿಪ್ಪಣಿಗಳು ಮತ್ತು ಪತ್ರಗಳು ಸಹ ಇದ್ದು, ಅಂಬೇಡ್ಕರ್‌ರವರ ನಿಲುವುಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತವೆ.

“ಇಂದು ಹೆಚ್ಚಿನ ಜನರು ತಮ್ಮ ಹೆಚ್ಚಿನ ಸಮಯವನ್ನು ಡಿಜಿಟಲ್ ಸ್ಪೇಸ್‌ಗಳಲ್ಲಿ ವ್ಯಯಿಸುತ್ತಿದ್ದಾರೆ. ಅಲ್ಲಿಯೂ ಸಹ ಅಂಬೇಡ್ಕರ್‌ ಬರಹಗಳು ಕೇಳಲು, ಓದಲು ಸಿಗುವಂತೆ ಮಾಡಬೇಕು ಎಂಬ ಉದ್ದೇಶದಿಂದ ಈ ಸರಣಿ ಆರಂಭಿಸಿದೆವು. ಎಲ್ಲರ ಅಂಬೇಡ್ಕರ್ ಎನ್ನುವ ತತ್ವದಡಿ ಸಹಭಾಗಿತ್ವದ ಒಳಗೊಳ್ಳುವಿಕೆಯ ಮೂಲಕ ಇದು ಯಶಸ್ಸು ಗಳಿಸಿದೆ. ಹಾಗಾಗಿ ಇದು ಎಲ್ಲರ ಸಹಭಾಗಿತ್ವದ ಗೆಲುವು ಎಂದು ಕರೆಯಬಹುದು” ಎನ್ನುತ್ತಾರೆ ಸರಣಿಯನ್ನು ಆರಂಭಿಸಿದ ಅರುಣ್ ಜೋಳದ ಕೂಡ್ಲಿಗಿಯವರು.

ಶೇ.50 ರಷ್ಟು ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಸುಮಾರು 6-7 ಲಕ್ಷ ಜನರು ಈ ಬರಹಗಳನ್ನು ಕೇಳಿಸಿಕೊಂಡಿದ್ದಾರೆ. ಇದುವರೆಗೂ ಅಂಬೇಡ್ಕರ್ ಬರಹಗಳನ್ನು ಓದಲು ಸಾಧ್ಯವಾಗದಿದ್ದವರು ಈ ಸರಣಿ ಆರಂಭವಾದ ನಂತರ ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಅಂಬೇಡ್ಕರ್ ಚಿಂತನೆಗೆ ಪ್ರವೇಶ ಮಾಡಲಾಗದಿರುವವರನ್ನು ಗುರುತಿಸಿ ಒಳಗೊಳ್ಳುತ್ತಿದ್ದೇವೆ, ಇದೆಲ್ಲವೂ ಈ ಸರಣಿಯ ಸಾಧನೆ ಎಂದು ಅವರು ಹೇಳುತ್ತಾರೆ.

ಇನ್ನು ಮುಂದೆ ಅಂಬೇಡ್ಕರ್‌ರವರ ಬಹುಮುಖ್ಯವಾದ ದೊಡ್ಡ ಪುಸ್ತಕಗಳನ್ನು ಓದುವ ಯೋಜನೆ ಹಾಕಿಕೊಂಡಿದ್ದೇವೆ. ಹಿಂದೂ ಧರ್ಮದ ತತ್ವಜ್ಞಾನ ಎಂಬ 100 ಪುಟದ ಪುಸ್ತಕವನ್ನು 20 ಜನರು ಓದಲು ಹಂಚಿಕೊಂಡಿದ್ದೇವೆ. ಅಂಬೇಡ್ಕರ್‌ರವರ ಎಲ್ಲಾ ಬರಹಗಳನ್ನು ಇಲ್ಲಿ ತರಲು ಸಾಧ್ಯವಾಗದಿದ್ದರೂ ಅಂಬೇಡ್ಕರ್‌ರವರು ಬರೆದ, ಆಲೋಚಿಸಿದ ನೂರಾರು ಕ್ಷೇತ್ರಗಳ ಪ್ರಮುಖ ಭಾಗಗಳನ್ನು ಇಲ್ಲಿ ತರಲು ಉದ್ದೇಶಿಸಿದ್ದೇವೆ ಎಂದರು.

ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಅದ್ಭುತ ಜ್ಞಾನ ಭಂಡಾರವಾಗಿ ಈ ಅಂಬೇಡ್ಕರ್ ಓದು ಸರಣಿ ರೂಪುಗೊಂಡಿದೆ ಮತ್ತು ಮುಂದುವರೆಯುತ್ತಿದೆ. ನಿಮ್ಮ ಮೊಬೈಲ್‌ಗೆ ಒಂದು ಹೆಡ್‌ಫೋನ್ ಸಿಕ್ಕಿಸಿ ನಿಮ್ಮ ನಿಮ್ಮ ಕೆಲಸ ಮಾಡುತ್ತಲೇ ಅಂಬೇಡ್ಕರ್ ಚಿಂತನೆಗಳನ್ನು ಕೇಳಿಸಿಕೊಂಡು ಮನಸ್ಸಿಗೆ ಇಳಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. ಮುಂದೆಯು ಕೇಳಲು ಚಾನೆಲ್ ಸಬ್‌ಸ್ಕ್ರೈಬ್‌ ಮಾಡಿ. ಅದೇ ರೀತಿಯಾಗಿ ನೀವು ಸಹ ಅಂಬೇಡ್ಕರ್ ಬರಹಗಳನ್ನು ಓದಿ ಸರಣಿಗೆ ಕೊಡುಗೆ ನೀಡಲು ಬಯಸಿದರೆ ಆಯೋಜಕರಾದ ಡಾ. ಅರುಣ್ ಜೋಳದ ಕೂಡ್ಲಿಗಿಯವರನ್ನು (9901445702) ಸಂಪರ್ಕಿಸಬಹುದು.


ಇದನ್ನೂ ಓದಿ: ಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...