Homeಚಳವಳಿ100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ಶೇ.50 ರಷ್ಟು ಮಹಿಳೆಯರು ಓದಿದ್ದಾರೆ. ಸುಮಾರು 6-7 ಲಕ್ಷ ಜನರು ಕೇಳಿಸಿಕೊಂಡಿದ್ದಾರೆ. ಹಲವರು ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಇದು ಸರಣಿಯ ಯಶಸ್ಸು.

- Advertisement -
- Advertisement -

ಇಂದು ಬಾಬಾ ಸಾಹೇಬ್ ಭೀಮ್‌ರಾವ್ ಅಂಬೇಡ್ಕರ್‌ರವರ 131ನೇ ಜನ್ಮದಿನ. ಅಂಬೇಡ್ಕರ್ ನೆನಪಿನಲ್ಲಿ ಜಗತ್ತಿನಾದ್ಯಂತ ಸಮಾನತೆಯ ದಿನವನ್ನಾಗಿ ಇಂದು ಆಚರಿಸಲಾಗುತ್ತಿದೆ. ಅಂಬೇಡ್ಕರ್ ಬದುಕು, ಬರಹ ಹೋರಾಟದ ಕುರಿತು ಚರ್ಚೆ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ಅಂಬೇಡ್ಕರ್‌ರವರ ಮೂಲ ಬರಹಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿಯು’ 100 ಗಂಟೆಗಳ ಕಾಲ ಪೂರೈಸಿ ಮುನ್ನಡೆಯುತ್ತಿದೆ. ಆ ಮೂಲಕ ಡಿಜಿಟಲ್ ಮಾಧ್ಯಮಗಳಲ್ಲಿಯೂ ಅಂಬೇಡ್ಕರ್ ವಿಚಾರಗಳು ಹರಿದಾಡುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಜಾನಪದ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಅರುಣ್ ಜೋಳದ ಕೂಡ್ಲಿಗಿಯವರು ಸೆಪ್ಟೆಂಬರ್ 7, 2020 ರಂದು ಆರಂಭಿಸಿದ ಈ ಅಂಬೇಡ್ಕರ್ ಓದು ಸರಣಿಯಲ್ಲಿ ಒಟ್ಟು 470 ಸಂಚಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿವೆ. 321 ಜನ ಅಂಬೇಡ್ಕರ್‌ರವರ ಬರಹಗಳನ್ನು ಓದಿಕೊಂಡು ನಂತರ ಆಡಿಯೊ ಮಾಡಿ ಇನ್ನಿತರರು ಕೇಳುವಂತೆ ಮಾಡಿದ್ದಾರೆ. ಅದರಲ್ಲಿ 155 ಮಹಿಳೆಯರು ಸಹ ಸಹಭಾಗಿಗಳಾಗಿರುವುದು ವಿಶೇಷವಾಗಿದೆ.

Arun jolad Kudligi ಯೂಟ್ಯೂಬ್ ಚಾನೆಲ್‌ನಲ್ಲಿ ಈ ಎಲ್ಲಾ 470 ಸಂಚಿಕೆಗಳನ್ನು ಯಾರೂ ಬೇಕಾದರೂ ಉಚಿತವಾಗಿ ಕೇಳಬಹುದಾಗಿದೆ. ಅಂಬೇಡ್ಕರ್‌ರವರು ಬರೆದಿರುವ ‘ಹಿಂದೂ ಧರ್ಮದ ತತ್ವಜ್ಞಾನ, ಬುದ್ಧ ಮತ್ತು ಆತನ ಧಮ್ಮ, ಸ್ಟೇಟ್ಸ್ ಅಂಡ್ ಮೈನಾರೀಟಿಸ್’ ಸೇರಿದಂತೆ ಹಲವಾರು ಪುಸ್ತಕಗಳ ಪ್ರಮುಖ ಭಾಗಗಳನ್ನು ಆಡಿಯೋ ಮಾಡುವ ಮೂಲಕ “ಅಂಬೇಡ್ಕರ್ ಕೇಳು” ಎಂಬುದಾಗಿ ಈ ಅಭಿಯಾನ ನಡೆಯುತ್ತಿದೆ. ಅಲ್ಲದೆ ಈ ಸರಣಿಯಲ್ಲಿ ಅಂಬೇಡ್ಕರ್‌ರವರ ಲೇಖನಗಳು- ಬರಹಗಳು, ಪತ್ರಿಕಾ ಹೇಳಿಕೆಗಳು, ಭಾಷಣಗಳು, ಟಿಪ್ಪಣಿಗಳು ಮತ್ತು ಪತ್ರಗಳು ಸಹ ಇದ್ದು, ಅಂಬೇಡ್ಕರ್‌ರವರ ನಿಲುವುಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತವೆ.

“ಇಂದು ಹೆಚ್ಚಿನ ಜನರು ತಮ್ಮ ಹೆಚ್ಚಿನ ಸಮಯವನ್ನು ಡಿಜಿಟಲ್ ಸ್ಪೇಸ್‌ಗಳಲ್ಲಿ ವ್ಯಯಿಸುತ್ತಿದ್ದಾರೆ. ಅಲ್ಲಿಯೂ ಸಹ ಅಂಬೇಡ್ಕರ್‌ ಬರಹಗಳು ಕೇಳಲು, ಓದಲು ಸಿಗುವಂತೆ ಮಾಡಬೇಕು ಎಂಬ ಉದ್ದೇಶದಿಂದ ಈ ಸರಣಿ ಆರಂಭಿಸಿದೆವು. ಎಲ್ಲರ ಅಂಬೇಡ್ಕರ್ ಎನ್ನುವ ತತ್ವದಡಿ ಸಹಭಾಗಿತ್ವದ ಒಳಗೊಳ್ಳುವಿಕೆಯ ಮೂಲಕ ಇದು ಯಶಸ್ಸು ಗಳಿಸಿದೆ. ಹಾಗಾಗಿ ಇದು ಎಲ್ಲರ ಸಹಭಾಗಿತ್ವದ ಗೆಲುವು ಎಂದು ಕರೆಯಬಹುದು” ಎನ್ನುತ್ತಾರೆ ಸರಣಿಯನ್ನು ಆರಂಭಿಸಿದ ಅರುಣ್ ಜೋಳದ ಕೂಡ್ಲಿಗಿಯವರು.

ಶೇ.50 ರಷ್ಟು ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಸುಮಾರು 6-7 ಲಕ್ಷ ಜನರು ಈ ಬರಹಗಳನ್ನು ಕೇಳಿಸಿಕೊಂಡಿದ್ದಾರೆ. ಇದುವರೆಗೂ ಅಂಬೇಡ್ಕರ್ ಬರಹಗಳನ್ನು ಓದಲು ಸಾಧ್ಯವಾಗದಿದ್ದವರು ಈ ಸರಣಿ ಆರಂಭವಾದ ನಂತರ ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಅಂಬೇಡ್ಕರ್ ಚಿಂತನೆಗೆ ಪ್ರವೇಶ ಮಾಡಲಾಗದಿರುವವರನ್ನು ಗುರುತಿಸಿ ಒಳಗೊಳ್ಳುತ್ತಿದ್ದೇವೆ, ಇದೆಲ್ಲವೂ ಈ ಸರಣಿಯ ಸಾಧನೆ ಎಂದು ಅವರು ಹೇಳುತ್ತಾರೆ.

ಇನ್ನು ಮುಂದೆ ಅಂಬೇಡ್ಕರ್‌ರವರ ಬಹುಮುಖ್ಯವಾದ ದೊಡ್ಡ ಪುಸ್ತಕಗಳನ್ನು ಓದುವ ಯೋಜನೆ ಹಾಕಿಕೊಂಡಿದ್ದೇವೆ. ಹಿಂದೂ ಧರ್ಮದ ತತ್ವಜ್ಞಾನ ಎಂಬ 100 ಪುಟದ ಪುಸ್ತಕವನ್ನು 20 ಜನರು ಓದಲು ಹಂಚಿಕೊಂಡಿದ್ದೇವೆ. ಅಂಬೇಡ್ಕರ್‌ರವರ ಎಲ್ಲಾ ಬರಹಗಳನ್ನು ಇಲ್ಲಿ ತರಲು ಸಾಧ್ಯವಾಗದಿದ್ದರೂ ಅಂಬೇಡ್ಕರ್‌ರವರು ಬರೆದ, ಆಲೋಚಿಸಿದ ನೂರಾರು ಕ್ಷೇತ್ರಗಳ ಪ್ರಮುಖ ಭಾಗಗಳನ್ನು ಇಲ್ಲಿ ತರಲು ಉದ್ದೇಶಿಸಿದ್ದೇವೆ ಎಂದರು.

ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಅದ್ಭುತ ಜ್ಞಾನ ಭಂಡಾರವಾಗಿ ಈ ಅಂಬೇಡ್ಕರ್ ಓದು ಸರಣಿ ರೂಪುಗೊಂಡಿದೆ ಮತ್ತು ಮುಂದುವರೆಯುತ್ತಿದೆ. ನಿಮ್ಮ ಮೊಬೈಲ್‌ಗೆ ಒಂದು ಹೆಡ್‌ಫೋನ್ ಸಿಕ್ಕಿಸಿ ನಿಮ್ಮ ನಿಮ್ಮ ಕೆಲಸ ಮಾಡುತ್ತಲೇ ಅಂಬೇಡ್ಕರ್ ಚಿಂತನೆಗಳನ್ನು ಕೇಳಿಸಿಕೊಂಡು ಮನಸ್ಸಿಗೆ ಇಳಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. ಮುಂದೆಯು ಕೇಳಲು ಚಾನೆಲ್ ಸಬ್‌ಸ್ಕ್ರೈಬ್‌ ಮಾಡಿ. ಅದೇ ರೀತಿಯಾಗಿ ನೀವು ಸಹ ಅಂಬೇಡ್ಕರ್ ಬರಹಗಳನ್ನು ಓದಿ ಸರಣಿಗೆ ಕೊಡುಗೆ ನೀಡಲು ಬಯಸಿದರೆ ಆಯೋಜಕರಾದ ಡಾ. ಅರುಣ್ ಜೋಳದ ಕೂಡ್ಲಿಗಿಯವರನ್ನು (9901445702) ಸಂಪರ್ಕಿಸಬಹುದು.


ಇದನ್ನೂ ಓದಿ: ಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...