Homeಕರ್ನಾಟಕಸಂತೋಷ್‌ ಸಾವು: ಸಚಿವ ಈಶ್ವರಪ್ಪರನ್ನು ಬಂಧಿಸುವಂತೆ ಬೆಂಗಳೂರಿನಲ್ಲಿ ದೂರು

ಸಂತೋಷ್‌ ಸಾವು: ಸಚಿವ ಈಶ್ವರಪ್ಪರನ್ನು ಬಂಧಿಸುವಂತೆ ಬೆಂಗಳೂರಿನಲ್ಲಿ ದೂರು

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ದ ಆಮ್‌ ಆದ್ಮಿ ಪಾರ್ಟಿ‌ ದೂರು ನೀಡಿದೆ. ಸಚಿವರನ್ನು ಕೂಡಲೇ ಬಂಧಿಸಬೇಕು ಎಂದು ಎಎಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಸಂತೋಷ್ ಅವರು ಈಶ್ವರಪ್ಪ ವಿರುದ್ಧ 40%ದಷ್ಟು ಕಮಿಷನ್‌ ಆರೋಪ ಮಾಡಿ ಈ ಹಿಂದೆಯೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡಿದ್ದರು. ಆಗಲೇ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದರೆ, ಇಂದು ಸಂತೋಷ್ ಅವರನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಆದರೆ ಆ ಸಂಬಂಧ ಯಾವುದೇ ತನಿಖೆ ನಡೆಯಲಿಲ್ಲ. ಭ್ರಷ್ಟ ಬಿಜೆಪಿಯ ಆಡಳಿತದಲ್ಲಿ ಪ್ರಾಮಾಣಿಕರ ಧ್ವನಿಗೆ ಬೆಲೆ ಇಲ್ಲವಾಗಿದೆ” ಎಂದು ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತೋಷ್ ಸಾವಿಗೆ ಸಂಬಂಧಪಟ್ಟಂತೆ ಬುಧವಾರದಂದು ಉಡುಪಿ ನಗರ ಪೊಲೀಸರು ಈಶ್ವರಪ್ಪ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದಾರೆ. ಅವರ ಸಹೋದರ ಪ್ರಶಾಂತ್‌ ಪಾಟೀಲ್‌ ದೂರಿನ ಮೇರೆಗ ಈ ಎಫ್‌ಐಆರ್‌ ದಾಖಲಾಗಿದ್ದು, ಅವರ ಇಬ್ಬರು ಆಪ್ತರನ್ನೂ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ಉಡುಪಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಒಂದನೇ ಆರೋಪಿಯಾಗಿ ಸಚಿವ ಕೆ.ಎಸ್. ಈಶ್ವರಪ್ಪ, ಎರಡನೇ ಆರೋಪಿಯಾಗಿ ಅವರ ಆಪ್ತ ಬಸವರಾಜ ಮತ್ತು ಮೂರನೇ ಆರೋಪಿಯಾಗಿ ಅವರ ಮತ್ತೊಬ್ಬ ಆಪ್ತ ರಮೇಶ್‌ ಸೇರಿದಂತೆ ಇತರರನ್ನು ಹೆಸರಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ತಾವು ಕೈಗೊಂಡಿರುವ 4 ಕೋಟಿ ರೂ.ಗಳ ಕಾಮಗಾರಿಯಲ್ಲಿ 40% ದಷ್ಟು ಕಮಿಷನ್ ನೀಡುವಂತೆ ಸಚಿವರ ಸಂಗಡಿಗರು ಒತ್ತಾಯಿಸಿದ್ದಾರೆ ಎಂದು ಪ್ರಶಾಂತ್‌ ಪಾಟೀಲ್‌ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಈಶ್ವರಪ್ಪ ಅವರು, “ಪ್ರಕರಣ ಹೈಕಮಾಂಡ್‌ ತನಕ ಹೋಗಿಲ್ಲ. ಇಂತಹ ನೂರು ಕೇಸ್‌ಗಳನ್ನು ನೋಡಿದ್ದೇನೆ. ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಸಂತೋಷ್ ಪಾಟೀಲ್ ಮುಖ ಕೂಡಾ ನೋಡಿಲ್ಲ. ಅಂತದ್ದರಲ್ಲಿ ಅವರು ನನ್ನನ್ನು 80 ಬಾರಿ ಭೇಟಿ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅವರು ಡೆತ್‌ ನೋಟ್‌ ಬರೆದಿಲ್ಲ, ವಾಟ್ಸಪ್‌ನಲ್ಲಿ ಟೈಪ್‌ ಮಾಡಿದ್ದಾರೆ, ಅದು ಡೆತ್‌ ನೋಟ್‌ ಅಲ್ಲ. ಅವರು ಅವರಿಗೆ ದೆಹಲಿಗೆ ಫ್ಲೈಟ್‌ ಟಿಕೆಟ್‌ ಕೊಟ್ಟಿದ್ದು ಯಾರು. ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ತನಿಖೆ ಆಗಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಸಿಎಂ ದೂರು ನೀಡುತ್ತೇನೆ. ಮುಖ್ಯಮಂತ್ರಿಯನ್ನು ಭೇಟಿಯಾಗಿ ಎಲ್ಲಾ ಮಾಹಿತಿಯನ್ನು ನೀಡಲಿದ್ದೇನೆ. ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಅವರಿಗೆ ಈಗಾಗಲೆ ಎಲ್ಲಾ ಮಾಹಿತಿಯನ್ನು ನೀಡಿದ್ದೇನೆ. ಈ ವಿಚಾರ ಹೈಕಮಾಂಡ್‌ ತನಕ ಹೋಗಿಲ್ಲ. ಘಟನೆಯ ಬಗ್ಗೆ ತನಿಖೆಯಾದರೆ ಅಸಲಿ ಸತ್ಯ ಹೊರಬರುತ್ತದೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ.

“ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರು ಯಾವುದೆ ದಾಖಲೆಯಿಲ್ಲದೆ ಆರೋಪ ಮಾಡುತ್ತಿದ್ದಾರೆ. ಇಲ್ಲಿ ರಾಜೀನಾಮೆ ಪ್ರಶ್ನೆ ಉದ್ಭವ ಆಗುವುದಿಲ್ಲ. ಇಂತಹ ನೂರು ಕೇಸ್‌ಗಳನ್ನು ನೋಡಿದ್ದೇನೆ. ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ‌ ಸಂತೋಷ್‌ ಸಾವು: ಎಫ್‌ಐಆರ್‌‌ ದಾಖಲು; ಸಚಿವ ಈಶ್ವರಪ್ಪ ಆರೋಪಿ ನಂ. 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...