Homeಮುಖಪುಟಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು - ಹಣ್ಣು ತಿನ್ನಿಸಿ ಇಫ್ತಾರ್...

ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲ ಭಕ್ತರು

ನಮ್ಮ ಗ್ರಾಮದಲ್ಲಿ ಹಿಂದಿನಿಂದಲೂ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆಯಿಂದ ಬದುಕಿದ್ದೇವೆ. ಹಾಗಾಗಿ ನಮ್ಮ ಊರಿನ ಜನರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ.

- Advertisement -
- Advertisement -

ರಾಜ್ಯದ ಕೆಲವೆಡೆ ಒಂದು ಕೋಮಿನ ಜನರಿಗೆ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂಬ ಬ್ಯಾನರ್ ಹಾಕಿ ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಡೆದಿತ್ತು. ಅದರ ಬೆನ್ನಿಗೆ ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಂತ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌ ಅವರ ವ್ಯಾಪಾರಕ್ಕೆ ಅಡ್ಡಿಪಡಿಸಿ, ಶ್ರೀರಾಮಸೇನೆಯ ದುಷ್ಕರ್ಮಿಗಳು ಕಲ್ಲಂಗಡಿಗಳನ್ನು ರಸ್ತೆಗೆ ಎಸೆದು ವಿಕೃತಿ ಮೆರೆದಿದ್ದರು. ಈ ಘಟನೆಗಳನ್ನು ನಾಡಿನ ಪ್ರಜ್ಞಾವಂತರು, ಜೀವಪರರೆಲ್ಲರೂ ಖಂಡಿಸಿದ್ದರು. ಈ ಘಟನೆಗಳಿಂದ ನೊಂದ ಬಳ್ಳಾರಿಯ ಗ್ರಾಮವೊಂದರ ಹಿಂದೂ-ಮುಸಲ್ಮಾನ ಗ್ರಾಮಸ್ಥರು ನಾವು ಮತ್ತಷ್ಟು ಒಗ್ಗಟ್ಟಾಗಿದ್ದೇವೆ ಎಂಬ ಸೌಹಾರ್ದ ಸಂದೇಶ ಸಾರಿದ್ದಾರೆ. ಆ ಮೂಲಕ ಒಡೆದು ಆಳುವವರಿಗೆ ಬಂಧುತ್ವದ ಪಾಠ ಹೇಳಲು ಹೊರಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಪ್ರತಿವರ್ಷ ರಾಮನವಮಿಯ ಅಂಗವಾಗಿ ಹಿಂದೂ ಯುವಕರು ರಾಮ ಮಾಲೆ ಹಾಕಿಕೊಂಡು ವ್ರತ ಆಚರಿಸುತ್ತಾರೆ. ಅದೇ ಊರಿನಲ್ಲಿನ ಮುಸ್ಲಿಮರು ರಂಜಾನ್ ಮಾಸದಲ್ಲಿ ಉಪವಾಸವಿದ್ದು ಸಂಜೆ ಪ್ರಾರ್ಥನೆ ಬಳಿಕ ಇಫ್ತಾರ್ ಆಚರಿಸುತ್ತಾರೆ. ಇದನ್ನು ಹಲವು ವರ್ಷಗಳಿಂದ ತಮ್ಮ ಪಾಡಿಗೆ ತಾವು ಮಾಡಿಕೊಂಡು ಬರುತ್ತಿದ್ದರು. ಆದರೆ ಈ ಬಾರಿ ಕರ್ನಾಟಕದಲ್ಲಿನ ಅಶಾಂತ ವಾತವರಣ ಗಮನಿಸಿದ ಊರಿನ ಗ್ರಾಮಸ್ಥರು ಒಟ್ಟಾಗಿ ಸೇರಿ ರಾಮನವಮಿ ಮತ್ತು ಇಫ್ತಾರ್ ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ಏಪ್ರಿಲ್ 09ರ ಕಳೆದ ಶನಿವಾರದಂದು ರಾಮನವಮಿ ಹಬ್ಬದ ಪ್ರಯುಕ್ತ ಮೆರವಣಿಗೆ ಹೊರಟಿದ್ದ ರಾಮ ಭಕ್ತರನ್ನು ಮುಸ್ಲಿಂ ಬಾಂಧವರು ಅಪ್ಪಿಕೊಂಡು, ಅವರಿಗೆ ಕೇಸರಿ ಶಾಲನ್ನು ಹಾಕುವುದರ ಮೂಲಕ ರಾಮನವಮಿಯ ಶುಭಾಶಯಗಳನ್ನು ತಿಳಿಸಿದ್ದರು. ಜೈ ಶ್ರೀರಾಮ್ ಘೋಷಣೆ ಕೂಗಿ ತಾವು ಹಬ್ಬದಲ್ಲಿ ಭಾಗಿಯಾಗಿದ್ದರು.

ಅದಕ್ಕೆ ಪ್ರತಿಯಾಗಿ ಏಪ್ರಿಲ್ 12ರ ಮಂಗಳವಾರದಂದು ಮುಸ್ಲಿಮರು ಸಂಜೆ ಪ್ರಾರ್ಥನೆ ಮುಗಿಸಿದ ಸಮಯದಲ್ಲಿ ರಾಮ ಮಾಲೆ ಹಾಕಿಕೊಂಡಿರುವ ಹಲವು ಭಕ್ತರು ಮಸೀದಿಗೆ ಭೇಟಿ ಕೊಟ್ಟು ಸಿಹಿ, ಹಣ್ಣು ಹಂಪಲುಗಳನ್ನು ಹಂಚಿ ಇಫ್ತಾರ್‌ ಆಚರಿಸುವ ಮೂಲಕ ಕೃತಜ್ಞತೆ ತಿಳಿಸಿದ್ದಾರೆ. ಪರಸ್ಪರ ಹಣ್ಣು ತಿನಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸೌಹಾರ್ದತೆಯನ್ನು ಸಾರುತ್ತಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ರಾಮಸಾಗರ ಗ್ರಾಮದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯ ಭುವನ್ ಕುಮಾರ್, “ನಮ್ಮ ಗ್ರಾಮದಲ್ಲಿ ಹಿಂದಿನಿಂದಲೂ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆಯಿಂದ ಬದುಕಿದ್ದೇವೆ. ಈ ಹಿಂದೆ ರಾಮಭಕ್ತರು ತಮ್ಮ ಪಾಡಿಗೆ ತಾವು ರಾಮನವಮಿ ಆಚರಿಸುತ್ತಿದ್ದಾಗ ಮುಸ್ಲಿಮರು ಶುಭ ಹಾರೈಸುತ್ತಿದ್ದರು. ಆದರೆ ಈ ಬಾರಿ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಅವರನ್ನು ಆಲಂಗಿಸಿ ಕೇಸರಿ ಶಾಲು ಹಾಕಿದ್ದಾರೆ. ಅದೇ ರೀತಿ ಹಿಂದೂ ಯುವಕರು ಸಹ ಮಸೀದಿಗೆ ತೆರಳಿ ಹಣ್ಣು-ಸಿಹಿ ತಿನಿಸಿ ಇಫ್ತಾರ್ ಆಚರಿಸಿದ್ದಾರೆ. ಹಾಗಾಗಿ ನಮ್ಮ ಊರಿನ ಜನರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ. ಇಡೀ ಭಾರತ ಇರಬೇಕಾದ್ದು ಹೀಗೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...