Homeಕರ್ನಾಟಕನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ಶಾಸಕ, ಸಚಿವ ಸೇರಿದಂತೆ ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ, ಆದರೆ ನನ್ನನ್ನು ದೇವಸ್ಥಾನದ ಒಳಗೆ ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಾನು ವಿದೇಶ ಸುತ್ತಿ ಬಂದಿದ್ದೇನೆ, ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಉಪಮುಖ್ಯಮಂತ್ರಿಯಾಗಿದ್ದೇನೆ, ಆದರೆ ದಲಿತ ಎಂಬ ಕಾರಣಕ್ಕೆ ನನ್ನನ್ನು ದೇವಸ್ಥಾನದ ಒಳಗಡೆ ಸೇರಿಸುವುದಿಲ್ಲ ಕಾಂಗ್ರೆಸ್ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌‌ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್‌‌ ಜಯಂತಿಯಲ್ಲಿ ಅವರು ಮಾತನಾಡುತ್ತಿದ್ದರು.

ಕೊರಟಗೆರೆಯ ಪಟ್ಟಣ ಪಂಚಾಯಿತಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹಲವು ದೇಶಗಳನ್ನು ಸುತ್ತಿ ಬಂದಿದ್ದೇನೆ. ಆದರೆ ದಲಿತ ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಸೇರಿಸಲಿಲ್ಲ. ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ. ಆದರೆ ನನ್ನನ್ನು ದೇವಸ್ಥಾನಕ್ಕೆ ಸೇರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ದೇವಸ್ಥಾನಕ್ಕೆ ಹೋದಾಗ ಹೊರಗಡೆಯೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ, ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್‌ ಅವರು ಹೇಳಿದ್ದಾರೆ.

“ದೇವಸ್ಥಾನಕ್ಕೆ ಹೋದಾಗ ‘ಸ್ವಲ್ಪ ಅಲ್ಲೇ ನಿಲ್ಲಿ’ ಎಂದು ಹೇಳಿ ಅಲ್ಲೇ ಮಂಗಳಾರತಿ ತಂದು ಬಿಡುತ್ತಾರೆ. ಮಂಗಳಾರತಿಯನ್ನು ನನ್ನ ಬಳಿಯೆ ತರುತ್ತಾರೆ. ನಾನು ದೇವರ ಬಳಿ ಹೋಗಿ ಮಂಗಳಾರತಿ ತೆಗೆದುಕೊಳ್ಳುವ ಹಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ಇವನು ಒಳಗೆ ಬಂದುಬಿಡುತ್ತಾನೆ ಎಂದು ಮಂಗಳಾರತಿಯನ್ನು ಈಚೆಗೆ ಹಿಡಿದುಕೊಂಡು ಓಡಿ ಬರುತ್ತಾರೆ. ಈ ರೀತಿಯಾಗಿ ಇನ್ನೂ ಸಮಾಜದಲ್ಲಿ ನಡೆಯುತ್ತಿದೆ. ಈ ಪರಿಸ್ಥಿತಿಗೆ ನಾವು ಏನು ಹೇಳಬೇಕು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಜಾತಿಯ ಭೂತ ಸಚಿವ, ಉಪ ಮುಖ್ಯಮಂತ್ರಿಗೆ ಬಿಟ್ಟಿಲ್ಲ ಎಂದರೆ ಇನ್ನು ಸಾಮಾನ್ಯರ ಪಾಡು ಹೇಗಿರಬಹುದು. ಸಮುದಾಯದ ನಾಯಕರು, ಯುವಕರು ಇದನ್ನು ಅರಿತುಕೊಳ್ಳಬೇಕು. ಕೋಮುವಾದಿ ಪಕ್ಷಗಳಿಂದ ದೂರ ಇರಬೇಕು. ಅಂದಹಾಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ್ದು ಯಾವಾಗ, ಎಲ್ಲಿ ಎಂಬ ಮಾಹಿತಿ ಇದ್ದರೆ ಸುದ್ದಿ ಪೂರ್ಣವಾಗುತ್ತಿದ್ದು…

  2. ಅಚ್ಚರಿ ಹುಟ್ಟಿಸುವ ಸಂಗತಿ

    ಈ ಸುದ್ದಿ ನಿಜವೇ ಅಥವಾ ಸುಳ್ಳು ಆಗಿರಬಹುದೇ…

    ನಿಜವಾಗಿರುವ ಸಾಧ್ಯತೆ ಕಡಿಮೆ ಎನ್ನುವುದೇ ನನ್ನ ನಂಬಿಕೆ….

  3. ಸರ್ ಒಮ್ಮೆ ಯೋಚಿಸಿ ನಿಮ್ಮಗಳ ಪರಿಸ್ಥಿತಿ ಹೀಗಿರುವಾಗ ಜನ ಸಾಮಾನ್ಯರ ಗತಿ ಏನು…? ಈ ದೇಶಕ್ಕೆ ಸಂವಿಧಾನವಿದ್ದು ಹೀಗಿರುವಾಗ ಬಾಬಾ ಸಾಹೇಬರು ಅಂದು ಅನುಭವಿಸಿದ ನೋವು ಉಹಿಸಿಕೊಂಡರೆ ಭಯವಾಗುತ್ತದೆ.
    ಇವಾಗಾದರು ಈ ಅಸ್ಪೃಶ್ಯತೆಯ ಪಿಡುಗು ತೊಲಗಲಿ ನಿಮ್ಮಂತಹವರು ಇದರ ವಿರುಧ್ದ ಧ್ವನಿ ಎತ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾದರೆ ಅದೆ ನಮ್ಮ ಬಾಬಾ ಸಾಹೇಬರಿಗೆ ಅರ್ಪಿಸುವ ಕೊಡುಗೆ.

  4. ನಿಮ್ಮಂಥ ತಿಳುವಳಿಕೆ ಇರೋರು ರಾಜಕೀಯ ಶಕ್ತಿ ಇರೋರಿಗೆ ಈ ರೀತಿಯ ಅಪಮಾನ ಮಾಡುತ್ತಾರೆ ಎಂದರೆ ಸಾಮಾನ್ಯ ದಲಿತ ವರ್ಗದ ಜನರು ಬದುಕು ಹೇಗೆ ಇರಬೇಕು ಯೋಚಿಸಿ.

    ತಾವು ಬಲವಂತವಾಗಿ ಮಂದಿರ ಪ್ರವೇಶ ಮಾಡಬೇಕಿತ್ತು ಎಂಬುದು ನನ್ನ ಅನಿಸಿಕೆ.

    ದಲಿತರು ಮಂದಿರಕ್ಕೆ ಹೋದರೆ ಅವಮಾನ /ಅಪಮಾನ ಆಗುತ್ತೆ ಆಂತ ಗೊತ್ತಿದ್ರೆ ಆ ಮಂದಿರಕ್ಕೆ ಯಾಕೆ ನಾವು ಹೋಗ್ಬೇಕು?

  5. ನಿಮ್ಮ ಸಮಾಜ ಬಾಂಧವರು ಇಂತಹ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಂಧ ಭಕ್ತರಾಗಿದ್ದಾರ

  6. ಸ್ವತಃ ಯಾದಗಿರಿ ಜಿಲ್ಲಾಧಿಕಾರಿ ರಾಗಪ್ರೀಯ ಮೇಡಂ ದಲಿತರಿಗೆ ದೇವಸ್ಥಾನದ ಒಳಗೆ ಪ್ರವೇಶಿಸಲು ಅನುಮತಿ ನೀಡಲು ಆದೇಶ ನೀಡಿದ್ದರು. ಇಂದು ಸಹ ದಲಿತರಿಗೆ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಗಳನ್ನು ಹೊರತುಪಡಿಸಿ ಉಳಿದ ದೇವಾಲಯಗಳಿಗೆ ಅನುಮತಿ ಇಲ್ಲ ಸರ್. ಸ್ವತಃ ಪತ್ರಿಕೋದ್ಯಮದಲ್ಲಿ ಇರುವ ನನಗೆ ದೇವಸ್ಥಾನದ ಪ್ರವೇಶ ಮಾಡಲು ಬಿಡಲಿಲ್ಲ. ಊರಿನವರ ಎದುರು ಹಾಕಿಕೊಂಡು ಬಾಳಲು ಸಾಧ್ಯವಿಲ್ಲ ಎಂದು ದೇವಸ್ಥಾನಗಳಿಗೆ ಹೋಗುವುದು ಬಿಟ್ಟಿದ್ದೇನೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...