Homeಕರ್ನಾಟಕಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

- Advertisement -
- Advertisement -

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಈಶ್ವರಪ್ಪನವರನ್ನು ಸದ್ಯಕ್ಕೆ ಸಚಿವ ಸಂಪುಟದಲ್ಲಿ ಇರುತ್ತಾರೆ. ಪ್ರಾಥಮಿಕ ತನಿಖೆ ಆರಂಭವಾಗಿದೆ. ತನಿಖೆಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಈ ಹಿಂದೆಯೇ ಹೇಳಿದಂತೆ ಯಾರ ಮೇಲೆಯೂ ಈ ಕೂಡಲೇ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಪ್ರಾಥಮಿಕ ತನಿಖೆ ಆರಂಭವಾಗಿದ್ದು ಅದರ ಫಲಿತಾಂಶದ ಮೇಲೆಷ್ಟೆ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈಶ್ವರಪ್ಪನವರ ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಒತ್ತಡ ಹೇರಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೈಕಮಾಂಡ್‌ಗೆ ಪ್ರಕರಣದ ಕುರಿತು ಮಾಹಿತಿ ನೀಡಿದ್ದೇವೆ. ಆದರೆ ಹೈಕಮಾಂಡ್ ಯಾವುದೇ ಸಲಹೆ-ಸೂಚನೆ ನೀಡಿಲ್ಲ, ನನ್ನ ಮೆಲೆ ಯಾವುದೇ ಒತ್ತಡವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹೈಕಮಾಂಡ್‌ಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬರಲು ಸಾಧ್ಯ. ನಂತರವಷ್ಟೇ ಕ್ರಮದ ಬಗ್ಗೆ ಚರ್ಚಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ 40% ಕಮಿಷನ್ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ಗುತ್ತಿಗೆದಾರ ಸಂಘದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವೆಲ್ಲವೂ ಆಧಾರರಹಿತ ಆರೋಪಗಳಾಗಿವೆ. ಭ್ರಷ್ಟಾಚಾರ ನಡೆದುದ್ದರ ಬಗ್ಗೆ ದಾಖಲೆ ಒದಗಿಸಿದರೆ ನಾವು ತನಿಖೆಗೆ ಸಿದ್ದ” ಎಂದಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿಯೇ ಹೆಚ್ಚಿನ ಭ್ರಷ್ಟಾಚಾರಗಳು ನಡೆದಿವೆ. ಹಾಗಾಗಿ ಸಂತೋಷ್ ಸಾವನ್ನು ಇಟ್ಟುಕೊಂಡು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮೃತ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ 

ಇನ್ನೊಂದೆಡೆ ಬೆಳಗಾವಿಯಲ್ಲಿ ಮೃತ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ನೆರವೇರಿದೆ. ಆರಂಭದಲ್ಲಿ ಬಿಜೆಪಿಯ ಹಿರಿಯ ಮುಖಂಡರು ಸ್ಥಳಕ್ಕೆ ಆಗಮಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಸಂಬಂಧಿಗಳು ಪಟ್ಟು ಹಿಡಿದಿದ್ದರು. ಸಚಿವ ಈಶ್ವರಪ್ಪನ ರಾಜೀನಾಮೆ ಪಡೆದು ಬಂಧಿಸಬೇಕೆಂದು ಆಗ್ರಹಿಸಿದ್ದರು. ನಂತರ ಕಾಂಗ್ರೆಸ್ ಮುಖಂಡರಾದ ಅದಿವೇಶ್ ಇಟಗಿ ಮಾತನಾಡಿ ಸಂಬಂಧಿಗಳನ್ನು ಸಮಾಧಾನ ಪಡಿಸಿದರು. ನಂತರ ಅಂತ್ಯಕ್ರಿಯೆ ಜರುಗಿದೆ.


ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೈಕಮಾಂಡ್ ಆಗಿರುವ ಎಲ್ಲಾರೂ ಒಂದೊಲ್ಲ ಒಂದು ಪ್ರಕರಣಗಳಲ್ಲಿ ಭಾಗಿಯಾಗಿರುವವರು ಅದಕ್ಕಾಗಿ ಒತ್ತಡ ಹಾಕಿಲ್ಲ ಏಕೆಂದರೆ ನಾವು ಮಾಡಿದ್ದು ಅವನು ಮಾಡಿದ್ದಾನೆಂದು ಸುಮ್ಮನೆ ಇದ್ದಾರೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...