Homeಚಳವಳಿಮಂಡ್ಯದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ: ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

ಮಂಡ್ಯದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ: ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

- Advertisement -
- Advertisement -

ಮಂಡ್ಯದಲ್ಲಿ ಮಹಾನ್ ಮಾನವತಾವಾದಿ ಅಂಬೇಡ್ಕರ್ ರವರ 131ನೇ ಜಯಂತಿ ಅಂಗವಾಗಿ 75 ಹೆಚ್ಚು ಜನರು ರಕ್ತದಾನ ಮಾಡುವ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸಿದ್ದಾರೆ.

ಮಿಮ್ಸ್ ನ ಎಸ್ಸಿ ಎಸ್ಟಿ ನೌಕರರು, ರಕ್ತನಿಧಿ ಕೇಂದ್ರ ಮೀಮ್ಸ್, ನೆಲದನಿ ಬಳಗ ಮಂಗಲ ಮಂಡ್ಯ ಇವುರುಗಳ ಸಂಯುಕ್ತಾಶ್ರಯದಲ್ಲಿ ಮಂಡ್ಯದ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಭಾಂಗಣದಲ್ಲಿ ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನ ಆಚರಿಸಲಾಯಿತು.

ಮಿಮ್ಸ್ ನಿರ್ದೇಶಕ ಡಾ. ಹರೀಶ್‌ಕುಮಾರ್‌ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಶಿಕ್ಷಣದಿಂದ ಮಾತ್ರವೇ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದು ಇಂದು ಸತ್ಯವಾಗುತ್ತಿದೆ. ಹಾಗಾಗಿ ನಾವು ಶಿಕ್ಷಣಕ್ಕೆ ಹೆಚ್ಚು ಹೆಚ್ಚು ಒತ್ತುಕೊಡಬೇಕು. ಆ ಮೂಲಕ ಸಂವಿಧಾನ ಶಿಲ್ಪಿಯ ಆಶಯ ನೆರವೇರಿಸಲು ಮುಂದಾಗಬೇಕು” ಎಂದು ಕರೆ ನೀಡಿದರು.

ಸುಶಿಕ್ಷಿತರಾದಾಗ ಅಸಮಾನತೆ, ಅಸ್ಪೃಷ್ಯತೆ ಆಚರಣೆ ವಿರುದ್ಧ ಹೋರಾಡಲು ಮತ್ತು ಸಮಸಮಾಜ ನಿರ್ಮಾಣದತ್ತ ಮುನ್ನಡೆಯಬಹುದು. ಶಿಕ್ಷಣದಿಂದ ಮಾತ್ರ ಪ್ರಗತಿಯತ್ತ ಸಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು

ಮಿಮ್ಸ್‌ ಸಿಇಓ ವೆಂಟಕಲಕ್ಷ್ಮಿಯವರು ಮಾತನಾಡಿ, “ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರ ಮೇಲೆ ಆ ಸಮಾಜದ ಪ್ರಗತಿಯನ್ನು ಅಳೆಯುತ್ತೇನೆ ಎಂದು ಅಂಬೇಡ್ಕರ್ ಹೇಳಿದ್ದರು. ಹಾಗಾಗಿ ಮಹಿಳೆರನ್ನು ಸಮಾನತೆಯಿಂದ ಕಾಣುವುದು ಮತ್ತು ಪ್ರಗತಿಯಲ್ಲಿ ಅವರಿಗೂ ಸಮಪಾಲು ನೀಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ಮತ್ತು ಕಾನೂನುಗಳ ಮೂಲಕ ಮಹಿಳೆಯರಿಗೆ ಸಮನಾಗಿ ಹಕ್ಕುಗಳನ್ನು ನೀಡಿದ್ದರ ಪ್ರತಿಫಲದಿಂದ ಉದ್ಯೋಗ, ಉದ್ಯಮಗಳಲ್ಲಿ ಪ್ರಗತಿ ಸಾಧಿಸಲು ಸಾದ್ಯವಾಗುತ್ತಿದೆ” ಎಂದರು.

ನೆಲದನಿ ಬಳಗದ ಅಧ್ಯಕ್ಷ ಮಂಗಲ ಲಂಕೇಶ್ ಮಾತನಾಡಿ “ನಮ್ಮ ಸಂವಿಧಾನ ಸತ್ತವರ ಬಗ್ಗೆ ಬರೆದಿರುವ ಜೀವನ ಚರಿತ್ರೆಯಲ್ಲ. ಅದು ಜನರ ಬದುಕು ಕಟ್ಟುವ ಮಹಾನ್ ಗ್ರಂಥವಾಗಿದೆ. ಇಂತಹ ಸಂವಿಧಾನ ರಚಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ. ಅವರು ಜೀವನದುದ್ದಕ್ಕೂ ಜಾತೀಯತೆಯ ವಿರುದ್ಧ ಹೋರಾಡಿದವರು. ರಕ್ತಕ್ಕೆ ಯಾವುದೇ ಜಾತಿ ಧರ್ಮವಿಲ್ಲ, ಜೀವ ಉಳಿವಿಗಾಗಿ ರಕ್ತದಾನ ಅತ್ಯವಶ್ಯಕವಿದೆ ಎಂದರು.

ಇದೇ ಸಂದರ್ಭದಲ್ಲಿ ಮಿಮ್ಸ್ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ. ಯೋಗೇಂದ್ರಕುಮಾರ್ ಮತ್ತು ರಕ್ತದಾನಿಗಳಾದ ಪ್ರಕಾಶ್, ರಾಕೇಶ್, ನಂದೀಶ್, ಮನೋಜ್‌ಕುಮಾರ್, ಪದವಿ ಕಾಲೇಜು ವಿದ್ಯಾರ್ಥಿನಿಯರಾದ ದಿವ್ಯ, ಸಹನಾ, ರೇವತಿ, ಆರ್ ಸಹನಾ, ಪ್ರೀತಿ, ವಾಣಿಶ್ರೀ ಸೇರಿದಂತೆ 75ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷ ರವಿಕುಮಾರ್, ಮಿಮ್ಸ್ ಸ್ಥಾನಿಯ ವೈದ್ಯಾಧಿಕಾರಿ ಡಾ.ವೆಂಕಟೇಶ್, ನೇತ್ರತಜ್ಞೆ ಡಾ.ಪೂರ್ಣಿಮಾ, ರೋಗ ಲಕ್ಷಣ ಶಾಸ್ತ್ರ ತಜ್ಞ ಡಾ. ಸಿದ್ದೇಗೌಡ, ಡಾ.ಮುರಳಿಧರಭಟ್, ಪ್ರಗತಿಪರ ಚಿಂತಕ ಪ್ರೊ.ಹುಲ್ಕೆರೆ ಮಹದೇವು, ನೆಲದನಿ ಬಳಗದ ಗೌ. ಅಧ್ಯಕ್ಷೆ ರುಕ್ಮುಣಿ ಡಾ.ಶಂಕರೇಗೌಡ, ರಕ್ತನಿಧಿ ಕೇಂದ್ರ ಡಾ.ಸುಹಾಸಿನಿ, ಶುಶ್ರೂಷಕರಾದ ಪ್ರಸನ್ನ, ರವಿ, ಮೋಹನ್, ತುಳಸಿಯಮ್ಮ, ಶಿವಮ್ಮ, ನೆಲದನಿ ಬಳಗದ ಪದಾಧಿಕಾರಿಗಳಾದ ಕುಮಾರ್‌ಗೌಡ, ನಂಜುಂಡ, ಯೋಗೇಶ್, ಉಮಾಪತಿ, ಪ್ರತಾಪ್, ವಿಜಿ ಮತ್ತಿತರರಿದ್ದರು.


ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...