Homeಕರ್ನಾಟಕಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

ಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌‌ ಪಾಟೀಲ್‌‌ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದಲ್ಲಿ ಗುರುವಾರ ಘೋಷಿಸಿದ್ದಾರೆ. “ಪ್ರಕರಣದಲ್ಲಿ ನನ್ನದೇನಾದರೂ ಒಂದು ಶೇಖಡ ತಪ್ಪಿದ್ದರೂ ನನ್ನ ಮನೆ ದೇವರು ನನಗೆ ಶಿಕ್ಷೆ ನೀಡಲಿ. ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ತಮ್ಮ ಕಾರ್ಯಕ್ಷೇತ್ರವಾದ ಶಿವಮೊಗ್ಗದಲ್ಲಿ ದಿಢೀರ್‌‌ ಸುದ್ದಿಗೋಷ್ಠಿ ಕರೆದು ಮಾತನಾಡಿರುವ ಈಶ್ವರಪ್ಪ, “ಪ್ರಕರಣದ ವಿಚಾರದಲ್ಲಿ ಪಕ್ಷದ ಹಿರಿಯರಿಗೆ, ಮುಖ್ಯಮಂತ್ರಿಗಳಿಗೆ, ರಾಷ್ಟ್ರೀಯ ನಾಯಕರುಗಳಿಗೆ ಇರುಸುಮುರುಸು ಆಗಬಾರದು. ಈ ಒಂದೇ ಕಾರಣಕ್ಕೆ ನಾನು ರಾಜೀನಾಮೆ ಕೊಡುತ್ತಿದ್ದೇನೆ. ಈ ವಿಷಯದ ಬಗ್ಗೆ ನಾನು ಮುಖ್ಯಮಂತ್ರಿಗೆ ಈಗಾಗಲೇ ಹೇಳಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಳೆ ಸಂಜೆ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತಾ ಇದ್ದೇನೆ. ಇಲ್ಲಿ ತನಕ ಸಹಕಾರ ಕೊಟ್ಟಂತಹ ಮುಖ್ಯಮಂತ್ರಿಗಳಿಗೆ ಹಾಗೂ ಎಲ್ಲಾ ಸ್ನೇಹಿತರಿಗೆ ಅಭಿನಂಧನೆ ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

“ನಾನು ದೇವರನ್ನು ನಂಬುವವನು, ಪ್ರಕರಣದ ಬಗ್ಗೆ ನನಗೆ ಪೂರ್ಣ ವಿಶ್ವಾವಿದೆ.  ಈ ಇಡೀ ಎಪಿಸೋಡಲ್ಲಿ ಒಂದೇ ಒಂದು ಪರ್ಸೆಂಟ್ ನನ್ನದೇನಾದರೂ ತಪ್ಪಿದ್ದರೆ, ಆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ. ಪ್ರಕರಣದಲ್ಲಿ ನಾನು ಮುಕ್ತವಾಗಿ ಹೊರಬರುತ್ತೇನೆ ಎಂದು ನನಗೆ ಪೂರ್ಣ ನಂಬಿಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಾನು ಮುಖ್ಯಮಂತ್ರಿಗೆ ಹೇಳಿದಾಗ ಅವರು ಕೂಡಾ ಸಂತೋಷದಿಂದ ತನಿಖೆ ಮಾಡುತ್ತೇನೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನನ್ನ ಮನೆ ದೇವರಾದ ಚೌಡೇಶ್ವರಿ ನಾನು ತಪ್ಪಿತಸ್ಥ ಅಲ್ಲ ಎಂದು ನಿರ್ದೋಷಿಯಾಗಿ ನನ್ನನ್ನು ಹೊರ ತರುತ್ತಾಳೆ” ಎಂದು ಈಶ್ವರಪ್ಪ ಹೇಳಿದ್ದಾರೆ.

“ನನಗೆ ಸಹಕಾರ ಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ಅಭಿನಂಧನೆ ಅರ್ಪಿಸುತ್ತೇನೆ. ಗ್ರಾಮೀಣಾಭಿವೃದ್ದಿ ಇಲಾಖೆ ಸಿಕ್ಕಿದ್ದು ನನ್ನ ಸೌಭಾಗ್ಯ. ಇಲಾಖೆಯಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಪ್ರಕರಣದಲ್ಲಿ ಯಾರಿಗೂ ಇರಿಸುಮುರಿಸು ಮಾಡಲು ಇಷ್ಟವಿಲ್ಲ. ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಸಾಬೀತಾಗಲಿ” ಎಂದು ಹೇಳಿದ್ದಾರೆ.

ಈಶ್ವರಪ್ಪ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌‌, “ಸುಳ್ಳು ಕಂಪೆನಿಯ ಚೇರ್ಮನ್ ಆಗಿರುವ ಈಶ್ವರಪ್ಪ ರಾಜೀನಾಮೆ ನೀಡಿದರೆ ಸಾಲದು. ಸಂತೋಷ್ ಸಾವು ಪ್ರಕರಣದಲ್ಲಿ ಅವರನ್ನು ಬಂಧಿಸಿ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು” ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆಗೆ ಸಿದ್ದರಾಮಯ್ಯ ಜೊತೆಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂತೋಷ್ 40% ಕಮಿಷನ್ ಆರೋಪ ಮಾಡಿದ ದಿನದಿಂದ ಆತ ಯಾರು ಎಂದೇ ನನಗೆ ಗೊತ್ತಿಲ್ಲ ಎಂದು ಈಶ್ವರಪ್ಪ ಸುಳ್ಳು ಹೇಳುತ್ತಲೇ ಇದ್ದರು. ಇಂದು ತಮ್ಮ ವಿರುದ್ಧ ಪ್ರತಿಭಟನೆ ಚುರುಕಾಗಿದೆ ಎಂಬುದು ತಿಳಿದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದರೆ ಸಾಲದು ಅವರನ್ನು ಕೂಡಲೇ ಬಂಧಿಸಿ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಸಿದ್ದರಾಮಯ್ಯ, ಡಿ.ಕೆ.ಶಿ, ಸುರ್ಜೇವಾಲರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...