Homeಕರ್ನಾಟಕSSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿ

SSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿ

- Advertisement -
- Advertisement -

ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ (SSLC Result) ಪ್ರಕಟಿಸಲು ರಾಜ್ಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ದವಾಗಿದೆ. ಕಳೆದ ಮಂಗಳವಾರದಂದು ಕೀ ಉತ್ತರಗಳನ್ನು ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿತ್ತು. ಮಂಡಳಿಯು ಫಲಿತಾಂಶವನ್ನು ಮೇ ತಿಂಗಳ ಎರಡನೇ ವಾರದಲ್ಲಿ ಪ್ರಕಟಿಸಲಿದೆ ಎಂದು ವರದಿಯಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸೋಮವಾರವಷ್ಟೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಕ್ತಾಯಗೊಂಡಿದ್ದವು.

ಕೀ ಉತ್ತರಗಳನ್ನು ಪ್ರಕಟಿಸಿದ ನಂತರ ಪರೀಕ್ಷಾ ಮಂಡಳಿಯು ಅದೇ ದಿನದಿಂದ ಆಕ್ಷೇಪಣೆಗಳನ್ನು ಕೂಡಾ ಕೇಳಿತ್ತು. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಆರಂಭವಾಗಲಿದ್ದು, ಮೇ ತಿಂಗಳ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಜೂನ್ ನಾಲ್ಕನೇ ವಾರದಲ್ಲಿ ಪೂರಕ ಪರೀಕ್ಷೆಗಳು ನಡೆಯಲಿದೆ.

ಈ ಬಾರಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ದುಷ್ಕೃತ್ಯಕ್ಕಾಗಿ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಮೊದಲ ಬಾರಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಹಾಜರಾತಿ 98% ಕ್ಕಿಂತ ಹೆಚ್ಚಿದೆ ಎಂದು ಸಚಿವ ನಾಗೇಶ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳು ರೋಲ್‌ ನಂಬರ್‌‌ ಅಥವಾ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್‌ ಒಳಗೆ ತುಂಬಿಸಬೇಕು.
    (ಗಮನಿಸಿ: ಜನ್ಮ ದಿನಾಂಕವು ಅಡ್ಮಿಷನ್ ಟಿಕೆಟ್‌ನಲ್ಲಿ ಇರುವುದನ್ನೇ ತುಂಬಿಸಬೇಕು)
  • ಅದರ ನಂತರ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
  • ಅಲ್ಲಿಂದ ನೀವು ಅದನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಬಹುದಾಗಿದೆ.

ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮೂಲಕ ಕೂಡಾ ಪಡೆಯಬಹುದಾಗಿದೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...