Homeಕರ್ನಾಟಕ‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಹಗ್ಗದ ಮೇಲೆ ನಡೆದಷ್ಟು ನಾಜೂಕಾಗಿ ತೂಗಾಡುತ್ತಿರುವ ರಾಜ್ಯ ಮೈತ್ರಿ ಸರ್ಕಾರದ ಮೇಲೆ ಇದೀಗ ಇನ್ನೊಂದು ತೂಗುಗತ್ತಿ ಬಿದ್ದಿದೆ. ಸೀರಿಯಸ್ ವಿಷಯ ಅಂದ್ರೆ, ಆ ತೂಗುಗತ್ತಿಯನ್ನು ಗುರಿಯಿಟ್ಟು ಬಿಸಾಡಿರೋದು ಮಾಜಿ ಪ್ರಧಾನಿ ದೇವೇಗೌಡ್ರು. ಇವತ್ತು ಮಾಧ್ಯಮದವರ ಜೊತೆ ಮಾತನಾಡುತ್ತ ಮಧ್ಯಂತರ ಚುನಾವಣೆ ನಡೆಯೋದರ ಬಗ್ಗೆ ಡೌಟೇ ಬೇಡ ಎಂಬ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅದು ಬ್ರೇಕಿಂಗ್ ನ್ಯೂಸ್ ಆಗುವ ಸುಳಿವು ಸಿಗುತ್ತಿದ್ದಂತೆಯೇ ಸ್ಪಷ್ಟೀಕರಣ ಕೊಟ್ಟಿರುವ ಅವರು ಇಲ್ಲ ನನ್ನ ಮಾತನ್ನು ತಪ್ಪಾಗಿ ಅರ್ಥೈಸಬೇಡಿ. ನಾನು ಹೇಳಿದ್ದು ಲೋಕಲ್ ಬಾಡಿ ಎಲೆಕ್ಷನ್ ಬಗ್ಗೆಯೇ ಹೊರತು, ರಾಜ್ಯ ವಿಧಾನಸಭೆ ಕುರಿತಂತೆ ಅಲ್ಲ. ಕುಮಾರಸ್ವಾಮಿಯವರು ಹೇಳಿದಂತೆ ಈ ಸರ್ಕಾರ ಇನ್ನು ನಾಲ್ಕು ವರ್ಷ ನಿರಾತಂಕವಾಗಿ ಮುಂದುವರೆಯಲಿದೆ ಎಂದು ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಆದ್ರೆ, ದೇವೇಗೌಡ್ರು ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುತ್ತಾ ಆಡಿದ್ದ ಸಂಪೂರ್ಣ ಮಾತುಗಳನ್ನು ಕೇಳಿಸಿಕೊಂಡವರಿಗೆ ಅವರು ರಾಜ್ಯ ವಿಧಾನಸಭೆ ಗಮನದಲ್ಲಿಟ್ಟುಕೊಂಡೇ ಹೇಳಿರೋದು ಎಂಬುದು ಖಾತ್ರಿಯಾಗುತ್ತದೆ. ಯಾಕೆಂದರೆ ಮಧ್ಯಂತರ ಚುನಾವಣೆಯ ಮಾತನ್ನು ಮುಂದುವರೆಸುತ್ತಾ ಮಧ್ಯಂತರ ಚುನಾವಣೆ ನಡೆಯೋದ್ರ ಬಗ್ಗೆ ಡೌಟೇ ಬೇಡ. ಅವರು (ಕಾಂಗ್ರೆಸ್) ಐದು ವರ್ಷ ಸಪೋರ್ಟ್ ಮಾಡ್ತೀವಿ ಅಂತ ಹೇಳಿದ್ದ್ರು, ಆದ್ರೆ ಅವರು ಈಗ ಹೇಗೆ ವರ್ತಿಸ್ತಿದಾರೆ ನೋಡಿ. ನಮ್ಮ ಜನ ಬುದ್ದಿವಂತರು. ಎಲ್ಲವನ್ನೂ ಗಮನಿಸ್ತಾ ಇರ್‍ತಾರೆ. ನಾವೇನು ಮೈತ್ರಿ ಮಾಡಿಕೊಳ್ಳಿ ಅಂತ ಕೇಳಿರಲಿಲ್ಲ. ನನ್ನ ಮಗನನ್ನೇ (ಕುಮಾರಸ್ವಾಮಿ) ಮುಖ್ಯಮಂತ್ರಿ ಮಾಡಿ ಅಂತಾನು ಕೇಳಿರಲಿಲ್ಲ. ಅವರೇ (ಕಾಂಗ್ರೆಸ್) ನನ್ನನ್ನು ಕರೆದ್ರು, ಸರ್ಕಾರ ರಚಿಸುವಂತೆ ಹೇಳಿದ್ರು. ನಾನು ನನ್ನ ಕೆಲಸ ಮುಂದುವರೆಸ್ತೀನಿ. ಯಾರನ್ನೂ ದೂಷಿಸೋದಕ್ಕೆ ಹೋಗಲ್ಲ ಎಂದಿದ್ದರು. ಅಲ್ಲಿಗೆ ದೇವೇಗೌಡರು ಯಾವ ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡ್ತಾ ಇದಾರೆ ಅನ್ನೋದು ಖಾತ್ರಿ ಆಯ್ತು. ಅತ್ತ ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಮಾಡಲು ಕಲ್ಬುರ್ಗಿಗೆ ತೆರಳಿರುವ ವೇಳೆಯಲ್ಲಿ ಕ್ಯಾಪಿಟಲ್ ಸಿಟಿಯಲ್ಲಿ ಕೂತು ದೇವೇಗೌಡರು ಈ ಮಾತು ಹೇಳಿರೋದು ಕೇವಲ ಬಾಯಿ ತಪ್ಪಿ ಆಡಿದ ಮಾತಲ್ಲ. ಯಾಕೆಂದರೆ, ದೇವೇಗೌಡರು ಮಾತನಾಡೋದು ಕಮ್ಮಿ. ಆಡುವ ಮಾತನ್ನೂ ಬಲು ತೂಗಿಯೇ ಮಾತನಾಡಿರುತ್ತಾರೆ. ಲೋಕಲ್ ಬಾಡಿ ಎಲೆಕ್ಷನ್‌ಗಳ ಬಗ್ಗೆ ತಾನು ಮಾತನಾಡಿದ್ದು ಎಂಬುದಾಗಿ ದೇವೇಗೌಡರು ಕೊಟ್ಟಿರುವ ಸ್ಪಷ್ಟೀಕರಣರ ನೆಪ ಮಾತ್ರದ್ದಷ್ಟೆ. ಅದರ ಹಿಂದೆ ನಿರ್ದಿಷ್ಟ ಲೆಕ್ಕಾಚಾರಗಳಿವೆ. ಬಸವಳಿದು ಕೂತಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಸಿ ಮುಟ್ಟಿಸುವ ಸ್ಪಷ್ಟ ಇರಾದೆಯಿದೆ.

ಸಿದ್ದರಾಮಯ್ಯನ ದಿಲ್ಲಿ ಭೇಟಿಯ ತರುವಾಯ ಕೆಪಿಸಿಸಿಯನ್ನು ಹೆಚ್ಚೂಕಮ್ಮಿ ವಿಸರ್ಜಿಸಿ ಹೊಸ ಪದಾಧಿಕಾರಿಗಳ ಆಯ್ಕೆಗೆ ಹೈಕಮಾಂಡ್ ಸಿದ್ದುಗೆ ಗ್ರೀನ್ ಸಿಗ್ನಲ್ ಕೊಟ್ಟಿರುವುದರ ಉದ್ದೇಶ ದೇವೇಗೌಡರ ದೂರದೃಷ್ಟಿಗೆ ಸ್ಪಷ್ಟವಾಗಿ ಗೋಚರಿಸಿದೆ. ಪಕ್ಷ ಸಂಘಟನೆ ಅಂದ್ರೆ, ಅದು ಯುದ್ದ ಸನಿಹದ ಶಸ್ತ್ರಾಸ್ತ್ರಾಭ್ಯಾಸವಿದ್ದಂತೆ ಎಂಬುದನ್ನು ಅರ್ಥ ಮಾಡಿಕೊಳ್ಳದಷ್ಟು ದೇವೇಗೌಡರು ದಡ್ಡರೇನಲ್ಲ. ಅದೂ ಅಲ್ಲದೆ ಮೈತ್ರಿಗೆ ಮೊದಲಿಂದಲೂ ಮಗ್ಗುಲ ಮುಳ್ಳಾಗಿ ಇರಿಯುತ್ತಿರುವ ಸಿದ್ರಾಮಯ್ಯ ‘ಮೈತ್ರಿಯಿಂದ ಏನೂ ಪ್ರಯೋಜನವಿಲ್ಲ’ ಎಂಬ ಹೇಳಿಕೆ ನೀಡಿದ್ದು ಅವರ ಅನುಮಾನವನ್ನು ಸ್ಪಷ್ಟವಾಗಿಸಿದೆ. ಒಂದುಕಡೆಯಿಂದ ದಾಳಿ ಶುರುವಾದ ಮೇಲೆ ಮತ್ತೊಂದು ಕಡೆಯಿಂದ ಪ್ರತಿದಾಳಿ ನಡೆಸಲೇಬೇಕಾಗುತ್ತೆ. ಮಧ್ಯಂತರ ಚುನಾವಣೆಗೆ ನೀವಷ್ಟೆ ಅಲ್ಲ, ನಾವೂ ತಯಾರಾಗಿದ್ದೇವೆ ಎಂಬ ಸೂಚ್ಯ ಮೆಸೇಜನ್ನು ದಿಲ್ಲಿ ಕೈ ನಾಯಕರಿಗೆ ರವಾನಿಸುವ ಇರಾದೆಯಿಂದಲೇ ದೇವೇಗೌಡರು ಈ ಬಾಣ ಬಿಟ್ಟಿದ್ದಾರೆ.

ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಕಡೆಗಣಿಸಿರುವ ಒಂದು ವಾಸ್ತವವಿದೆ. ತಾವು ಮೈತ್ರಿ ಮುರಿದುಕೊಂಡು ಸರ್ಕಾರವನ್ನು ಪತನಗೊಳಿಸಿದ ಕೂಡಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದುಬಿಡುತ್ತೆ ಎಂದುಕೊಂಡಂತಿವೆ. ಆದರೆ ಸೆಂಚುರಿ ಮೇಲೆ ಒಂದು ಅದ್ಭುತ ಬೌಂಡರಿ ಮೂಲಕ 104 ನಾಟ್‌ಔಟ್ ಪೊಸೀಷನ್‌ನಲ್ಲಿರುವ; ಅಂಪೈರ್ (ರಾಜ್ಯಪಾಲ), ಥರ್ಡ್ ಅಂಪೈರ್ (ಪ್ರಧಾನಿ), ಮ್ಯಾಚ್ ರೆಫರಿ (ರಾಷ್ಟ್ರಪತಿ) ಸೇರಿದಂತೆ ಸಮಸ್ತ ತನ್ನದೇ ಹೋಮ್‌ಗ್ರೌಂಡ್‌ನಲ್ಲಿ ಸಜ್ಜಾಗಿ ನಿಂತಿರುವ ಬಿಜೆಪಿ ಅಷ್ಟು ಸುಲಭವಾಗಿ ಮಧ್ಯಂತರ ಚುನಾವಣೆ ನಡೆಸಲು ಬಿಡುತ್ತಾ? ಖಂಡಿತ ಇಲ್ಲ. ಅವರೇ ಕಿತ್ತಾಡಿ ಸರ್ಕಾರ ಬೀಳಿಸಿಕೊಳ್ಳುವ ಸನಿಹಕ್ಕೆ ಬರುತ್ತಿದ್ದಾರೆ ಎಂದಕೂಡಲೇ ಅಖಾಡಕ್ಕಿಳಿಯುವ ಬಿಜೆಪಿ ಈಗ ಸಚಿವಗಿರಿ ಸಿಗದೆ ಅತೃಪ್ತರಾಗಿರುವ ಕೈ-ತೆನೆ ಶಾಸಕರನ್ನು ಸೆಳೆದುಕೊಂಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿಬಿಡುತ್ತೆ.

ಮೇಲ್ನೋಟಕ್ಕೆ ಯಡಿಯೂರಪ್ಪನವರು ನಾವು ಆಪರೇಷನ್ ಕಮಲ ಮಾಡಲ್ಲ, ರಚನಾತ್ಮಕ ವಿರೋಧ ಪಕ್ಷವಾಗಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುತ್ತೇವೆ ಎಂದು ಈಗಾಗಲೇ ಅಹೋರಾತ್ರಿ ಧರಣಿಗಳನ್ನು ಶುರು ಮಾಡಿಕೊಂಡಿದ್ದಾರೆ. ಆದರೆ ಸದ್ದಿಲ್ಲದೆ ಬಿಜೆಪಿ ಹೈಕಮಾಂಡ್, ಆಪರೇಷನ್ ಕಮಲ ನಡೆಸಲು ಯಡ್ಯೂರಪ್ಪನವರಿಗೆ ಲಾಸ್ಟ್ ಚಾನ್ಸ್ ನೀಡಿದ್ದು, ನಾವು ನೇರವಾಗಿ ಅಖಾಡಕ್ಕಿಳಿಯದೆ ದೂರದಲ್ಲೆ ನಿಂತು ಗೈಡ್ ಮಾಡುತ್ತೇವೆ, ಸಾಧಕ ಬಾಧಕಗಳನ್ನೆಲ್ಲ ಲೋಕಲ್ ಲೀಡರುಗಳೇ ಹೊತ್ತುಕೊಂಡು ಆಪರೇಷನ್ ನಡೆಸಬೇಕು ಎಂಬ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವರ್ತಮಾನ ಬಿಜೆಪಿ ಮೂಲಗಳಿಂದಲೇ ಬೆಳಕಿಗೆ ಬಂದಿದೆ. ಈಚೆಗೆ ನಡೆದ ಲೋಕಸಭಾ ಎಲೆಕ್ಷನ್‌ನಲ್ಲಿ ಮೈತ್ರಿ ಅಖಾಡದ ಸುಮಾರು ಮೂವತ್ತು ಕಾಂಗ್ರೆಸ್-ಜೆಡಿಎಸ್ ಎಮ್ಮೆಲ್ಲೆಗಳು ಬೇರೆಬೇರೆ ಸ್ಥಳೀಯ ಕಾರಣಗಳಿಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದರಿಂದಲೇ ೨೫ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದದ್ದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆ ಮೂವತ್ತು ಜನರು ಆಪರೇಷನ್ ಕಮಲಕ್ಕೆ ಈಡಾಗುವ ಸಂಭವ ಇಲ್ಲವಾದರು ಅದರಲ್ಲಿ ಅರ್ಧದಷ್ಟು ಜನರಾದರು ಬಿಜೆಪಿಯತ್ತ ಒಲವಿಟ್ಟುಕೊಂಡೇ ಈ ಪಕ್ಷದ್ರೋಹ ಬಗೆದಿರೋದು ಬಿಜೆಪಿಯ ಹುಮ್ಮಸ್ಸನ್ನು ಇನ್ನಷ್ಟು ಹೆಚ್ಚಿಸಿದೆಯಂತೆ.

ಇಂಥಾ ಸಮಯದಲ್ಲಿ ಕಾಂಗ್ರೆಸ್, ಜೆಡಿಎಸ್‌ಗಳು ಮಧ್ಯಂತರ ಚುನಾವಣೆಯ ಕನವರಿಸುತ್ತಾ ಒಬ್ಬರ ಕಾಲು ಮತ್ತೊಬ್ಬರು ಎಳೆದಾಡಿಕೊಳ್ಳುತ್ತಿರೋದು ಬಿಜೆಪಿ ಪಾಲಿಗೆ ‘ಲಡ್ಡು ಬಂದು ಬಾಯಿಗೆ ಬಿತ್ತು’ ಎಂಬಂತಾಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...