Homeಮುಖಪುಟಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟರ ಬರೆಹಗಳ ಸಂಕಲನ 'ಬೇರೆಯೇ ಮಾತು' ಪುಸ್ತಕ ಬಿಡುಗಡೆ

ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟರ ಬರೆಹಗಳ ಸಂಕಲನ ‘ಬೇರೆಯೇ ಮಾತು’ ಪುಸ್ತಕ ಬಿಡುಗಡೆ

- Advertisement -
- Advertisement -

ಓದುಗರ ಸಂಪಾದಕ ಎಂದು ಖ್ಯಾತಿ ಗಳಿಸಿದ್ದ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಬರೆಹಗಳ ಸಂಕಲನವಾದ ‘ಬೇರೆಯೇ ಮಾತು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 16ರ ಶನಿವಾರ ಬೆಂಗಳೂರಿನ ಗಾಂಧಿಭವನದಲ್ಲಿ ಜರುಗಲಿದೆ.

ಪ್ರಜಾವಾಣಿ ಪತ್ರಿಕೆಯಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದ ವಡ್ಡರ್ಸೆ ರಘುರಾಮ ಶೆಟ್ಟಿಯವರು ತದನಂತರ ‘ಓದುಗರ ಒಡೆತನದ ಪತ್ರಿಕೆ’ ಕಟ್ಟುವ ಆಶಯದಲ್ಲಿ ‘ಮುಂಗಾರು’ ಎಂಬ ಪತ್ರಿಕೆ ಸ್ಥಾಪಿಸಿದ್ದರು. ಸ್ಥಾಪಿತ ಮೇಲ್ವರ್ಗದ ಹಿತಾಸಕ್ತಿಯುಳ್ಳ ಪತ್ರಿಕೆಗಳಿಗೆ ಎದುರಾಗಿ ಜನಪರ ಉದ್ದೇಶ ಮತ್ತು ಕಾಳಜಿ ಹೊಂದಿದ್ದ ಮುಂಗಾರು ಪತ್ರಿಕೆ ಅಲ್ಪಕಾಲದಲ್ಲಿಯೇ ಖ್ಯಾತಿ ಗಳಿಸಿತ್ತು. ಹಾಗಾಗಿ ವಡ್ಡರ್ಸೆಯವರು ಓದುಗರ ಸಂಪಾದಕ ಎಂದೇ ಕರೆಯಲ್ಪಡುತ್ತಿದ್ದರು. ಅವರ ಅಮೂಲ್ಯ ಬರೆಹಗಳನ್ನು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟುರವರು ಸಂಪಾದಿಸಿ ‘ಬೇರೆಯೇ ಮಾತು’ ಕೃತಿ ರೂಪ ನೀಡಿದ್ದಾರೆ. ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಪ್ರಕಟಿಸಿದೆ.

ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಜನನುಡಿ ಬಳಗ ಮತ್ತು ಅಹರ್ನಿಶಿ ಪ್ರಕಾಶನ ಜೊತೆಗೂಡಿ ಆಯೋಜಿಸಿವೆ. ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಿಎಂ ಮತ್ತು ಹಾಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಚಿಂತಕರಾದ ಡಾ.ಕೆ.ಮರುಳಸಿದ್ದಪ್ಪ, ಲೇಖಕರಾದ ಕೆ.ಪುಟ್ಟಸ್ವಾಮಿ, ಪುಸ್ತಕದ ಸಂಪಾದಕರಾದ ದಿನೇಶ್ ಅಮಿನ್ ಮಟ್ಟು, ಜನನುಡಿ ಬಳಗದ ಮುನೀರ್ ಕಾಟಿಪಳ್ಳ ಮತ್ತು ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆಯವರು ಉಪಸ್ಥಿತರಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...