Homeಕರ್ನಾಟಕಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

- Advertisement -
- Advertisement -

ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟ ದನಿ ‘ಅಕ್ಕಯ್‌ ಪದ್ಮಶಾಲಿ’ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್‌ ನಾಯಕರು ನೇಮಿಸಿದ್ದಾರೆ. ಈ ರೀತಿಯ ರಾಜಕೀಯ ಸ್ಥಾನವಮಾನವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತರಾಗಿಯೂ ‘ಅಕ್ಕಯ್‌’ ಗುರುತಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಅಕ್ಕಯ್‌ ಪದ್ಮಶಾಲಿ ಅವರನ್ನು ‘ನಾ ನಾಯಕಿ’ ಕಾರ್ಯಕ್ರಮದ ರಾಜ್ಯ ಸಂಚಾಲಕರನ್ನಾಗಿ ನೇಮಿಸಿದ್ದರು. ಈಗ ಮತ್ತೊಂದು ಗುರುತರ ಜವಾಬ್ದಾರಿಯನ್ನು ಅಕ್ಕಯ್‌ ಅವರಿಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅಕ್ಕಯ್‌ ಅವರು, ತಮ್ಮ ಮುಂದಿನ ಗುರಿ ಹಾಗೂ ಉದ್ದೇಶಗಳನ್ನು ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಲಿಂಗತ್ವ ಅಲ್ಪಸಂಖ್ಯಾತಳು. ಸಾಮಾಜಿಕ, ರಾಜಕೀಯ ಹಕ್ಕುಗಳ ಹೋರಾಟಗಾರ್ತಿಯಾಗಿ ಹಲವು ಸವಾಲುಗಳು ನನ್ನ ಮುಂದಿವೆ. ಇಂದು ಜಾತಿ, ಧರ್ಮ, ವರ್ಗ, ಜನಾಂಗೀಯ ಆಧಾರದಲ್ಲಿ, ತಿನ್ನುವ ಆಹಾರದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕಲಾಗುತ್ತಿದೆ. ಈ ಅಸಹಿಷ್ಣುತೆಯ ಕಾಲದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸ್ಥಿತಿ ಇನ್ನೂ ಶೋಚನೀಯವಾಗಿದೆ. ಸಮಾಜದ ಎಲ್ಲ ಶೋಷಿತರ ಪರ ಹೋರಾಟ ಮುಂದುವರಿಸುತ್ತೇನೆ” ಎಂದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಅಕ್ಕಯ್ ಪದ್ಮಶಾಲಿಯವರು ಮಾತನಾಡುತ್ತಿರುವುದು.

“ಇತರ ಪಕ್ಷಗಳಿಗಿಂತ ಮೊದಲಿಗೆ ಕಾಂಗ್ರೆಸ್, ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಧನ್ಯವಾದಗಳು” ಎಂದ ಅವರು, “ಶೋಷಿತರಲ್ಲೇ ಶೋಷಿತರಾದ ನಮ್ಮನ್ನು ಕಂಡರೆ ಸಮಾಜದಲ್ಲಿ ತಾತ್ಸಾರದ ಮನೋಭಾವ ಇದೆ, ಮಹಿಳಾ ವಿರೋಧಿ ನೀತಿಗಳು ದೇಶದಲ್ಲಿವೆ. ಅದರ ವಿರುದ್ಧ ಹೋರಾಟಬೇಕಿದೆ” ಎಂದು ತಿಳಿಸಿದರು.

“ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಸ್ಥಾನಮಾನ ಅನುಷ್ಠಾನವಾಗಿಲ್ಲ. ಆದರೆ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಡಿ.ಕೆ.ಶಿವಕುಮಾರ್‌ ಅವರು ‘ನಾ ನಾಯಕಿ’ ಕಾರ್ಯಕ್ರಮ ಆರಂಭಿಸಿದರು. ಅವರ ಕನಸು ನನಸು ಮಾಡುವತ್ತ ಗಮನ ಹರಿಸಿದ್ದೇನೆ. ‘ನಾ ನಾಯಕಿ’ ಕಾರ್ಯಕ್ರಮಕ್ಕೆ ರಾಜ್ಯ ಸಂಯೋಜಕಿಯನ್ನಾಗಿ ನೇಮಿಸಲಾಗಿತ್ತು. ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರೂ ಸಮಾನರೆಂಬ ಸಿದ್ಧಾಂತ ಕಾಂಗ್ರೆಸ್‌ನದ್ದು. ಇದಕ್ಕೆ ನಾನು ಆಭಾರಿಯಾಗಿದ್ದೇನೆ” ಎಂದು ಹೇಳಿದರು.

“ದೇಶದಲ್ಲಿ ಅಸಹಿಷ್ಣುತೆ ಇದೆ. ಮಹಿಳೆಯ ಹಿಜಾಬ್‌, ರೈತ ವಿರೋಧಿ ಕಾಯ್ದೆಗಳು, ಹೆಣ್ಣುಮಕ್ಕಳ ಶಿಕ್ಷಣ, ಮದುವೆ, ಮಕ್ಕಳ ಸಾಗಾಣಿಕೆ, ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ದನಿ ಎತ್ತಬೇಕಿದೆ. ಪಕ್ಷದ ಮೂಲಕ ಏನೆಲ್ಲ ಬದಲಾವಣೆ ತರಲು ಸಾಧ್ಯವಾಗುತ್ತದೆಯೋ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎನ್ನುತ್ತಾರೆ ಅಕ್ಕಯ್‌.

“ನಮ್ಮಂಥ ಅಲ್ಪಸಂಖ್ಯಾತರಲ್ಲೇ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಬಿಟ್ಟರೆ ಬೇರೆಡೆ ಜಾಗವಿಲ್ಲ. ರಾಜಕೀಯಕ್ಕಾಗಿ ಈ ಮಾತು ಹೇಳುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಸಮುದಾಯಕ್ಕೆ ನೀಡಿದ ಬೆಂಬಲವನ್ನು ಅನುಭವಿಸಿ ಹೇಳುತ್ತಿದ್ದಾರೆ. ನಮ್ಮ ಸಮುದಾಯದ ರಾಜಕೀಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಆದರೆ ನಮಗೂ ರಾಜಕೀಯ ಸ್ಥಾನವಿದೆ ಎಂದು ತೋರಿಸಿಕೊಟ್ಟವರು ಡಿ.ಕೆ.ಶಿವಕುಮಾರ್‌. ಹೀಗಾಗಿ ಯುವಕರು, ಮಹಿಳೆಯರು, ಮಕ್ಕಳು, ದಲಿತರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಲೈಂಗಿಕ ಕಾರ್ಮಿಕರು- ಎಲ್ಲರನ್ನೂ ಒಟ್ಟಿಗೆ ತರುವ ಕೆಲಸ ಮಾಡುತ್ತೇನೆ” ಎಂದು ತಮ್ಮ ಗುರಿಯನ್ನು ಹಂಚಿಕೊಂಡರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಅಕ್ಕಯ್ ಪದ್ಮಶಾಲಿ ಹಾಗೂ ಇತರ ಕಾಂಗ್ರೆಸ್ ಮುಖಂಡರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷ ಮೊದಲಿನಿಂದಲೂ ನೀಡಿರುವ ಆದ್ಯತೆಯನ್ನು ಸ್ಮರಿಸಿದ ಅವರು, “ಇಂದಿರಾ ಗಾಂಧಿಯಮ್ಮನ ಫೋಟೋವನ್ನು ಸಮುದಾಯದ ಪ್ರತಿ ಮನೆಯಲ್ಲೂ ಕಾಣಬಹುದು” ಎಂದರು.

“ಇಂದಿರಾ ಗಾಂಧಿಯವರು ಮನೆ ಇಲ್ಲದವರಿಗೆ ಮನೆ ಕೊಟ್ಟರು. ಟ್ರೈನ್‌ನಲ್ಲಿ ಉಚಿತವಾಗಿ ಓಡಾಡುವ ಅವಕಾಶ ನೀಡಿದರು. ಇಂದಿರಾ ಗಾಂಧಿಯಮ್ಮನನ್ನು ಲೈಂಗಿಕ ಅಲ್ಪಸಂಖ್ಯಾತರು ಸದಾ ನೆನೆಯುತ್ತಾರೆ” ಎಂದು ತಮ್ಮ ಹೋರಾಟದ ಬದುಕನ್ನು ಮೆಲುಕು ಹಾಕಿದರು.

ಇದನ್ನೂ ಓದಿರಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

“ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 377 ನಮ್ಮನ್ನು ಅಪರಾಧೀಕರಣಗೊಳಿಸಿತ್ತು. ಈ ಸಮುದಾಯದ ಪರವಾಗಿ ನಿಲ್ಲುವ ನಿರ್ಧಾರವನ್ನು 2005ನೇ ಇಸವಿಯಲ್ಲಿ ಕಾಂಗ್ರೆಸ್‌ ಪಕ್ಷ ಮಾಡಿತು. 2009ನೇ ಇಸವಿಯಲ್ಲಿ ದೆಹಲಿ ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದಾಗ ಕಾಂಗ್ರೆಸ್ ಪಕ್ಷ ನೇರವಾಗಿ ನಮ್ಮ ಸಮುದಾಯಕ್ಕೆ ಸಹಕಾರ ನೀಡಿತು. ಬೇರೆ ಯಾವುದೇ ಪಕ್ಷ ನಮ್ಮೊಂದಿಗೆ ಬಂದು ನಿಲ್ಲಲಿಲ್ಲ. ಸ್ವಲ್ಪ ಸಮಯದ ನಂತರ ಸಿಪಿಐ, ಸಿಪಿಎಂ ಹಾಗೂ ಜೆಡಿಎಸ್‌ ಬೆಂಬಲ ನೀಡಿದವು. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಸಹಾಯವನ್ನು ನೆನೆಯುತ್ತೇನೆ. ಸದಾ ನಮ್ಮೊಂದಿಗಿದ್ದ ಪಕ್ಷ, ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನು ನೀಡಿರುವುದು ಮಹತ್ತರ ಬೆಳವಣಿಗೆ” ಎಂದು ಅಭಿಪ್ರಾಯಪಡುತ್ತಾರೆ ಅಕ್ಕಯ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...