Homeಕರ್ನಾಟಕಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

- Advertisement -
- Advertisement -

ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟ ದನಿ ‘ಅಕ್ಕಯ್‌ ಪದ್ಮಶಾಲಿ’ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್‌ ನಾಯಕರು ನೇಮಿಸಿದ್ದಾರೆ. ಈ ರೀತಿಯ ರಾಜಕೀಯ ಸ್ಥಾನವಮಾನವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತರಾಗಿಯೂ ‘ಅಕ್ಕಯ್‌’ ಗುರುತಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಅಕ್ಕಯ್‌ ಪದ್ಮಶಾಲಿ ಅವರನ್ನು ‘ನಾ ನಾಯಕಿ’ ಕಾರ್ಯಕ್ರಮದ ರಾಜ್ಯ ಸಂಚಾಲಕರನ್ನಾಗಿ ನೇಮಿಸಿದ್ದರು. ಈಗ ಮತ್ತೊಂದು ಗುರುತರ ಜವಾಬ್ದಾರಿಯನ್ನು ಅಕ್ಕಯ್‌ ಅವರಿಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅಕ್ಕಯ್‌ ಅವರು, ತಮ್ಮ ಮುಂದಿನ ಗುರಿ ಹಾಗೂ ಉದ್ದೇಶಗಳನ್ನು ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಲಿಂಗತ್ವ ಅಲ್ಪಸಂಖ್ಯಾತಳು. ಸಾಮಾಜಿಕ, ರಾಜಕೀಯ ಹಕ್ಕುಗಳ ಹೋರಾಟಗಾರ್ತಿಯಾಗಿ ಹಲವು ಸವಾಲುಗಳು ನನ್ನ ಮುಂದಿವೆ. ಇಂದು ಜಾತಿ, ಧರ್ಮ, ವರ್ಗ, ಜನಾಂಗೀಯ ಆಧಾರದಲ್ಲಿ, ತಿನ್ನುವ ಆಹಾರದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕಲಾಗುತ್ತಿದೆ. ಈ ಅಸಹಿಷ್ಣುತೆಯ ಕಾಲದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸ್ಥಿತಿ ಇನ್ನೂ ಶೋಚನೀಯವಾಗಿದೆ. ಸಮಾಜದ ಎಲ್ಲ ಶೋಷಿತರ ಪರ ಹೋರಾಟ ಮುಂದುವರಿಸುತ್ತೇನೆ” ಎಂದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಅಕ್ಕಯ್ ಪದ್ಮಶಾಲಿಯವರು ಮಾತನಾಡುತ್ತಿರುವುದು.

“ಇತರ ಪಕ್ಷಗಳಿಗಿಂತ ಮೊದಲಿಗೆ ಕಾಂಗ್ರೆಸ್, ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಧನ್ಯವಾದಗಳು” ಎಂದ ಅವರು, “ಶೋಷಿತರಲ್ಲೇ ಶೋಷಿತರಾದ ನಮ್ಮನ್ನು ಕಂಡರೆ ಸಮಾಜದಲ್ಲಿ ತಾತ್ಸಾರದ ಮನೋಭಾವ ಇದೆ, ಮಹಿಳಾ ವಿರೋಧಿ ನೀತಿಗಳು ದೇಶದಲ್ಲಿವೆ. ಅದರ ವಿರುದ್ಧ ಹೋರಾಟಬೇಕಿದೆ” ಎಂದು ತಿಳಿಸಿದರು.

“ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಸ್ಥಾನಮಾನ ಅನುಷ್ಠಾನವಾಗಿಲ್ಲ. ಆದರೆ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಡಿ.ಕೆ.ಶಿವಕುಮಾರ್‌ ಅವರು ‘ನಾ ನಾಯಕಿ’ ಕಾರ್ಯಕ್ರಮ ಆರಂಭಿಸಿದರು. ಅವರ ಕನಸು ನನಸು ಮಾಡುವತ್ತ ಗಮನ ಹರಿಸಿದ್ದೇನೆ. ‘ನಾ ನಾಯಕಿ’ ಕಾರ್ಯಕ್ರಮಕ್ಕೆ ರಾಜ್ಯ ಸಂಯೋಜಕಿಯನ್ನಾಗಿ ನೇಮಿಸಲಾಗಿತ್ತು. ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರೂ ಸಮಾನರೆಂಬ ಸಿದ್ಧಾಂತ ಕಾಂಗ್ರೆಸ್‌ನದ್ದು. ಇದಕ್ಕೆ ನಾನು ಆಭಾರಿಯಾಗಿದ್ದೇನೆ” ಎಂದು ಹೇಳಿದರು.

“ದೇಶದಲ್ಲಿ ಅಸಹಿಷ್ಣುತೆ ಇದೆ. ಮಹಿಳೆಯ ಹಿಜಾಬ್‌, ರೈತ ವಿರೋಧಿ ಕಾಯ್ದೆಗಳು, ಹೆಣ್ಣುಮಕ್ಕಳ ಶಿಕ್ಷಣ, ಮದುವೆ, ಮಕ್ಕಳ ಸಾಗಾಣಿಕೆ, ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ದನಿ ಎತ್ತಬೇಕಿದೆ. ಪಕ್ಷದ ಮೂಲಕ ಏನೆಲ್ಲ ಬದಲಾವಣೆ ತರಲು ಸಾಧ್ಯವಾಗುತ್ತದೆಯೋ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎನ್ನುತ್ತಾರೆ ಅಕ್ಕಯ್‌.

“ನಮ್ಮಂಥ ಅಲ್ಪಸಂಖ್ಯಾತರಲ್ಲೇ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಬಿಟ್ಟರೆ ಬೇರೆಡೆ ಜಾಗವಿಲ್ಲ. ರಾಜಕೀಯಕ್ಕಾಗಿ ಈ ಮಾತು ಹೇಳುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಸಮುದಾಯಕ್ಕೆ ನೀಡಿದ ಬೆಂಬಲವನ್ನು ಅನುಭವಿಸಿ ಹೇಳುತ್ತಿದ್ದಾರೆ. ನಮ್ಮ ಸಮುದಾಯದ ರಾಜಕೀಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಆದರೆ ನಮಗೂ ರಾಜಕೀಯ ಸ್ಥಾನವಿದೆ ಎಂದು ತೋರಿಸಿಕೊಟ್ಟವರು ಡಿ.ಕೆ.ಶಿವಕುಮಾರ್‌. ಹೀಗಾಗಿ ಯುವಕರು, ಮಹಿಳೆಯರು, ಮಕ್ಕಳು, ದಲಿತರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಲೈಂಗಿಕ ಕಾರ್ಮಿಕರು- ಎಲ್ಲರನ್ನೂ ಒಟ್ಟಿಗೆ ತರುವ ಕೆಲಸ ಮಾಡುತ್ತೇನೆ” ಎಂದು ತಮ್ಮ ಗುರಿಯನ್ನು ಹಂಚಿಕೊಂಡರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಅಕ್ಕಯ್ ಪದ್ಮಶಾಲಿ ಹಾಗೂ ಇತರ ಕಾಂಗ್ರೆಸ್ ಮುಖಂಡರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷ ಮೊದಲಿನಿಂದಲೂ ನೀಡಿರುವ ಆದ್ಯತೆಯನ್ನು ಸ್ಮರಿಸಿದ ಅವರು, “ಇಂದಿರಾ ಗಾಂಧಿಯಮ್ಮನ ಫೋಟೋವನ್ನು ಸಮುದಾಯದ ಪ್ರತಿ ಮನೆಯಲ್ಲೂ ಕಾಣಬಹುದು” ಎಂದರು.

“ಇಂದಿರಾ ಗಾಂಧಿಯವರು ಮನೆ ಇಲ್ಲದವರಿಗೆ ಮನೆ ಕೊಟ್ಟರು. ಟ್ರೈನ್‌ನಲ್ಲಿ ಉಚಿತವಾಗಿ ಓಡಾಡುವ ಅವಕಾಶ ನೀಡಿದರು. ಇಂದಿರಾ ಗಾಂಧಿಯಮ್ಮನನ್ನು ಲೈಂಗಿಕ ಅಲ್ಪಸಂಖ್ಯಾತರು ಸದಾ ನೆನೆಯುತ್ತಾರೆ” ಎಂದು ತಮ್ಮ ಹೋರಾಟದ ಬದುಕನ್ನು ಮೆಲುಕು ಹಾಕಿದರು.

ಇದನ್ನೂ ಓದಿರಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

“ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 377 ನಮ್ಮನ್ನು ಅಪರಾಧೀಕರಣಗೊಳಿಸಿತ್ತು. ಈ ಸಮುದಾಯದ ಪರವಾಗಿ ನಿಲ್ಲುವ ನಿರ್ಧಾರವನ್ನು 2005ನೇ ಇಸವಿಯಲ್ಲಿ ಕಾಂಗ್ರೆಸ್‌ ಪಕ್ಷ ಮಾಡಿತು. 2009ನೇ ಇಸವಿಯಲ್ಲಿ ದೆಹಲಿ ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದಾಗ ಕಾಂಗ್ರೆಸ್ ಪಕ್ಷ ನೇರವಾಗಿ ನಮ್ಮ ಸಮುದಾಯಕ್ಕೆ ಸಹಕಾರ ನೀಡಿತು. ಬೇರೆ ಯಾವುದೇ ಪಕ್ಷ ನಮ್ಮೊಂದಿಗೆ ಬಂದು ನಿಲ್ಲಲಿಲ್ಲ. ಸ್ವಲ್ಪ ಸಮಯದ ನಂತರ ಸಿಪಿಐ, ಸಿಪಿಎಂ ಹಾಗೂ ಜೆಡಿಎಸ್‌ ಬೆಂಬಲ ನೀಡಿದವು. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಸಹಾಯವನ್ನು ನೆನೆಯುತ್ತೇನೆ. ಸದಾ ನಮ್ಮೊಂದಿಗಿದ್ದ ಪಕ್ಷ, ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನು ನೀಡಿರುವುದು ಮಹತ್ತರ ಬೆಳವಣಿಗೆ” ಎಂದು ಅಭಿಪ್ರಾಯಪಡುತ್ತಾರೆ ಅಕ್ಕಯ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...