Homeಕರ್ನಾಟಕಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

- Advertisement -
- Advertisement -

ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟ ದನಿ ‘ಅಕ್ಕಯ್‌ ಪದ್ಮಶಾಲಿ’ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್‌ ನಾಯಕರು ನೇಮಿಸಿದ್ದಾರೆ. ಈ ರೀತಿಯ ರಾಜಕೀಯ ಸ್ಥಾನವಮಾನವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತರಾಗಿಯೂ ‘ಅಕ್ಕಯ್‌’ ಗುರುತಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಅಕ್ಕಯ್‌ ಪದ್ಮಶಾಲಿ ಅವರನ್ನು ‘ನಾ ನಾಯಕಿ’ ಕಾರ್ಯಕ್ರಮದ ರಾಜ್ಯ ಸಂಚಾಲಕರನ್ನಾಗಿ ನೇಮಿಸಿದ್ದರು. ಈಗ ಮತ್ತೊಂದು ಗುರುತರ ಜವಾಬ್ದಾರಿಯನ್ನು ಅಕ್ಕಯ್‌ ಅವರಿಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅಕ್ಕಯ್‌ ಅವರು, ತಮ್ಮ ಮುಂದಿನ ಗುರಿ ಹಾಗೂ ಉದ್ದೇಶಗಳನ್ನು ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಲಿಂಗತ್ವ ಅಲ್ಪಸಂಖ್ಯಾತಳು. ಸಾಮಾಜಿಕ, ರಾಜಕೀಯ ಹಕ್ಕುಗಳ ಹೋರಾಟಗಾರ್ತಿಯಾಗಿ ಹಲವು ಸವಾಲುಗಳು ನನ್ನ ಮುಂದಿವೆ. ಇಂದು ಜಾತಿ, ಧರ್ಮ, ವರ್ಗ, ಜನಾಂಗೀಯ ಆಧಾರದಲ್ಲಿ, ತಿನ್ನುವ ಆಹಾರದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕಲಾಗುತ್ತಿದೆ. ಈ ಅಸಹಿಷ್ಣುತೆಯ ಕಾಲದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸ್ಥಿತಿ ಇನ್ನೂ ಶೋಚನೀಯವಾಗಿದೆ. ಸಮಾಜದ ಎಲ್ಲ ಶೋಷಿತರ ಪರ ಹೋರಾಟ ಮುಂದುವರಿಸುತ್ತೇನೆ” ಎಂದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಅಕ್ಕಯ್ ಪದ್ಮಶಾಲಿಯವರು ಮಾತನಾಡುತ್ತಿರುವುದು.

“ಇತರ ಪಕ್ಷಗಳಿಗಿಂತ ಮೊದಲಿಗೆ ಕಾಂಗ್ರೆಸ್, ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಧನ್ಯವಾದಗಳು” ಎಂದ ಅವರು, “ಶೋಷಿತರಲ್ಲೇ ಶೋಷಿತರಾದ ನಮ್ಮನ್ನು ಕಂಡರೆ ಸಮಾಜದಲ್ಲಿ ತಾತ್ಸಾರದ ಮನೋಭಾವ ಇದೆ, ಮಹಿಳಾ ವಿರೋಧಿ ನೀತಿಗಳು ದೇಶದಲ್ಲಿವೆ. ಅದರ ವಿರುದ್ಧ ಹೋರಾಟಬೇಕಿದೆ” ಎಂದು ತಿಳಿಸಿದರು.

“ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಸ್ಥಾನಮಾನ ಅನುಷ್ಠಾನವಾಗಿಲ್ಲ. ಆದರೆ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಡಿ.ಕೆ.ಶಿವಕುಮಾರ್‌ ಅವರು ‘ನಾ ನಾಯಕಿ’ ಕಾರ್ಯಕ್ರಮ ಆರಂಭಿಸಿದರು. ಅವರ ಕನಸು ನನಸು ಮಾಡುವತ್ತ ಗಮನ ಹರಿಸಿದ್ದೇನೆ. ‘ನಾ ನಾಯಕಿ’ ಕಾರ್ಯಕ್ರಮಕ್ಕೆ ರಾಜ್ಯ ಸಂಯೋಜಕಿಯನ್ನಾಗಿ ನೇಮಿಸಲಾಗಿತ್ತು. ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರೂ ಸಮಾನರೆಂಬ ಸಿದ್ಧಾಂತ ಕಾಂಗ್ರೆಸ್‌ನದ್ದು. ಇದಕ್ಕೆ ನಾನು ಆಭಾರಿಯಾಗಿದ್ದೇನೆ” ಎಂದು ಹೇಳಿದರು.

“ದೇಶದಲ್ಲಿ ಅಸಹಿಷ್ಣುತೆ ಇದೆ. ಮಹಿಳೆಯ ಹಿಜಾಬ್‌, ರೈತ ವಿರೋಧಿ ಕಾಯ್ದೆಗಳು, ಹೆಣ್ಣುಮಕ್ಕಳ ಶಿಕ್ಷಣ, ಮದುವೆ, ಮಕ್ಕಳ ಸಾಗಾಣಿಕೆ, ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ದನಿ ಎತ್ತಬೇಕಿದೆ. ಪಕ್ಷದ ಮೂಲಕ ಏನೆಲ್ಲ ಬದಲಾವಣೆ ತರಲು ಸಾಧ್ಯವಾಗುತ್ತದೆಯೋ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎನ್ನುತ್ತಾರೆ ಅಕ್ಕಯ್‌.

“ನಮ್ಮಂಥ ಅಲ್ಪಸಂಖ್ಯಾತರಲ್ಲೇ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಬಿಟ್ಟರೆ ಬೇರೆಡೆ ಜಾಗವಿಲ್ಲ. ರಾಜಕೀಯಕ್ಕಾಗಿ ಈ ಮಾತು ಹೇಳುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಸಮುದಾಯಕ್ಕೆ ನೀಡಿದ ಬೆಂಬಲವನ್ನು ಅನುಭವಿಸಿ ಹೇಳುತ್ತಿದ್ದಾರೆ. ನಮ್ಮ ಸಮುದಾಯದ ರಾಜಕೀಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಆದರೆ ನಮಗೂ ರಾಜಕೀಯ ಸ್ಥಾನವಿದೆ ಎಂದು ತೋರಿಸಿಕೊಟ್ಟವರು ಡಿ.ಕೆ.ಶಿವಕುಮಾರ್‌. ಹೀಗಾಗಿ ಯುವಕರು, ಮಹಿಳೆಯರು, ಮಕ್ಕಳು, ದಲಿತರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಲೈಂಗಿಕ ಕಾರ್ಮಿಕರು- ಎಲ್ಲರನ್ನೂ ಒಟ್ಟಿಗೆ ತರುವ ಕೆಲಸ ಮಾಡುತ್ತೇನೆ” ಎಂದು ತಮ್ಮ ಗುರಿಯನ್ನು ಹಂಚಿಕೊಂಡರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಅಕ್ಕಯ್ ಪದ್ಮಶಾಲಿ ಹಾಗೂ ಇತರ ಕಾಂಗ್ರೆಸ್ ಮುಖಂಡರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷ ಮೊದಲಿನಿಂದಲೂ ನೀಡಿರುವ ಆದ್ಯತೆಯನ್ನು ಸ್ಮರಿಸಿದ ಅವರು, “ಇಂದಿರಾ ಗಾಂಧಿಯಮ್ಮನ ಫೋಟೋವನ್ನು ಸಮುದಾಯದ ಪ್ರತಿ ಮನೆಯಲ್ಲೂ ಕಾಣಬಹುದು” ಎಂದರು.

“ಇಂದಿರಾ ಗಾಂಧಿಯವರು ಮನೆ ಇಲ್ಲದವರಿಗೆ ಮನೆ ಕೊಟ್ಟರು. ಟ್ರೈನ್‌ನಲ್ಲಿ ಉಚಿತವಾಗಿ ಓಡಾಡುವ ಅವಕಾಶ ನೀಡಿದರು. ಇಂದಿರಾ ಗಾಂಧಿಯಮ್ಮನನ್ನು ಲೈಂಗಿಕ ಅಲ್ಪಸಂಖ್ಯಾತರು ಸದಾ ನೆನೆಯುತ್ತಾರೆ” ಎಂದು ತಮ್ಮ ಹೋರಾಟದ ಬದುಕನ್ನು ಮೆಲುಕು ಹಾಕಿದರು.

ಇದನ್ನೂ ಓದಿರಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

“ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 377 ನಮ್ಮನ್ನು ಅಪರಾಧೀಕರಣಗೊಳಿಸಿತ್ತು. ಈ ಸಮುದಾಯದ ಪರವಾಗಿ ನಿಲ್ಲುವ ನಿರ್ಧಾರವನ್ನು 2005ನೇ ಇಸವಿಯಲ್ಲಿ ಕಾಂಗ್ರೆಸ್‌ ಪಕ್ಷ ಮಾಡಿತು. 2009ನೇ ಇಸವಿಯಲ್ಲಿ ದೆಹಲಿ ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದಾಗ ಕಾಂಗ್ರೆಸ್ ಪಕ್ಷ ನೇರವಾಗಿ ನಮ್ಮ ಸಮುದಾಯಕ್ಕೆ ಸಹಕಾರ ನೀಡಿತು. ಬೇರೆ ಯಾವುದೇ ಪಕ್ಷ ನಮ್ಮೊಂದಿಗೆ ಬಂದು ನಿಲ್ಲಲಿಲ್ಲ. ಸ್ವಲ್ಪ ಸಮಯದ ನಂತರ ಸಿಪಿಐ, ಸಿಪಿಎಂ ಹಾಗೂ ಜೆಡಿಎಸ್‌ ಬೆಂಬಲ ನೀಡಿದವು. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಸಹಾಯವನ್ನು ನೆನೆಯುತ್ತೇನೆ. ಸದಾ ನಮ್ಮೊಂದಿಗಿದ್ದ ಪಕ್ಷ, ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನು ನೀಡಿರುವುದು ಮಹತ್ತರ ಬೆಳವಣಿಗೆ” ಎಂದು ಅಭಿಪ್ರಾಯಪಡುತ್ತಾರೆ ಅಕ್ಕಯ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...