Homeಮುಖಪುಟರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ಕಥೆಯಲ್ಲಿ ಬರುವಂತೆ ರಾಮ ಶಬರಿ ಕಚ್ಚಿ ತಿಂದ ಹಣ್ಣನ್ನು ತಿನ್ನುತ್ತಾನೆ. ನೀವು ರಾಮನಲ್ಲಿ ನಂಬಿಕೆಯಿಟ್ಟಿದ್ದರೆ, ನಾವು ಕಚ್ಚಿದ ಹಣ್ಣು ತಿನ್ನುವುದು ಬೇಡ, ಕನಿಷ್ಟ ನಾವು ಮುಟ್ಟಿದ ಹಣ್ಣನಾದರೂ ತಿನ್ನುತ್ತೀರಾ?

- Advertisement -
- Advertisement -

ನನಗೆ ರಾಮನಲ್ಲಿ ನಂಬಿಕೆಯಿಲ್ಲ. ರಾಮ ದೇವರಾಗಿರಲಿಲ್ಲ, ರಾಮ ಎಂಬುದು ತುಳಸಿದಾಸ್ ಮತ್ತು ವಾಲ್ಮೀಕಿಯವರು ಸಮಾಜಕ್ಕೆ ಸಂದೇಶ ನೀಡುವುದಕ್ಕಾಗಿ ಬರೆದ ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ ಎಂದು ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ರಚಿಸಿರುವ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ ಹೇಳಿದ್ದಾರೆ.

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ಅಂಬೇಡ್ಕರ್‌ರವರ ಜನ್ಮದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕಥೆಯಲ್ಲಿ ಬರುವಂತೆ ರಾಮ ಶಬರಿ ಕಚ್ಚಿ ತಿಂದ ಹಣ್ಣನ್ನು ತಿನ್ನುತ್ತಾನೆ. ನೀವು ರಾಮನಲ್ಲಿ ನಂಬಿಕೆಯಿಟ್ಟಿದ್ದರೆ, ನಾವು ಕಚ್ಚಿದ ಹಣ್ಣು ತಿನ್ನುವುದು ಬೇಡ, ಕನಿಷ್ಟ ನಾವು ಮುಟ್ಟಿದ ಹಣ್ಣನಾದರೂ ತಿನ್ನುತ್ತೀರಾ? ಎಂದು ಮಾಂಜಿ ಪ್ರಶ್ನಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಟೀಕಿಸಿದ್ದಾರೆ.

ತುಳಸಿದಾಸ್ ಮತ್ತು ವಾಲ್ಮೀಕಿಯವರು ರಾಮಾಯಣವನ್ನು ಬರೆದಿದ್ದು ಅದರಲ್ಲಿ ಹಲವಾರು ಒಳ್ಳೆಯ ಅಂಶಗಳಿವೆ. ಅವುಗಳನ್ನು ನಾವು ನಂಬುತ್ತೇವೆ. ತುಳಸಿದಾಸ್ ಮತ್ತು ವಾಲ್ಮೀಕಿಯವರನ್ನು ನಾನು ನಂಬುತ್ತೇನೆಯೇ ಹೊರತು ರಾಮನನ್ನಲ್ಲ ಎಂದು ಮಾಂಜಿ ಹೇಳಿದ್ದಾರೆ.

ಪ್ರಪಂಚದಲ್ಲಿ ಶ್ರೀಮಂತರು ಮತ್ತು ಬಡವರು ಎಂಬ ಎರಡು ಜಾತಿಗಳಿವೆ. ಆದರೆ ನಮ್ಮಲ್ಲಿ ನೂರೆಂಟೆ ಜಾತಿಗಳನ್ನು ಮಾಡಿ ಬ್ರಾಹ್ಮಣರು ದಲಿತರ ವಿರುದ್ದ ತಾರತಮ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಮನವಮಿ ಆಚರಣೆ ವೇಳೆ ಹಲವಾರು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಂಜಿಯವರ ಹೇಳಿಕೆಗಳು ಬಂದಿವೆ. ಅವರು ಹಿಂದುಸ್ತಾನ್ ಅವಾಂ ಮೊರ್ಚಾದ ಅಧ್ಯಕ್ಷರಾಗಿದ್ದು, ಪ್ರಸ್ತುತು ಬಿಹಾರದಲ್ಲಿನ ಎನ್‌ಡಿಎ ಸರ್ಕಾರದ ಭಾಗವಾಗಿದ್ದಾರೆ. ಅವರ ಮಗ ಸಂತೋಷ್ ಮಾಂಜಿ ಸರ್ಕಾರದಲ್ಲಿ ಮಂತ್ರಿಯಾಗಿದ್ದಾರೆ.

ಇದನ್ನೂ ಓದಿ: ಜಿತನ್ ರಾಮ್ ಮಾಂಜಿ ಯಾರು?

ಒಂದೆಡೆ ಬಿಜೆಪಿ ರಾಮನನ್ನು ಆರಾಧಿಸುತ್ತಿದ್ದು, ರಾಮನ ಹೆಸರಿನಲ್ಲಿ ಮತರಾಜಕೀಯವನ್ನು ಮಾಡುತ್ತಿದೆ. ಅದೇ ಸಂದರ್ಭದಲ್ಲಿ ಬಿಜೆಪಿಯ ಮಿತ್ರಪಕ್ಷದ ಅಧ್ಯಕ್ಷರು ರಾಮ ಎಂಬುದು ಕಾಲ್ಪನಿಕ ಪಾತ್ರ ಎಂದು ಹೇಳಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...