Homeಕರ್ನಾಟಕಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

ಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚುನಾವಣೆ, ಕ್ಯಾಬಿನೆಟ್ ಸಭೆ, ಸಮನ್ವಯ ಸಮಿತಿ ಸಭೆ, ಮೈತ್ರಿಯ ಗೊಂದಲಗಳಲ್ಲೇ ಮುಳುಗಿ ಗ್ರಾಮ ಕರ್ನಾಟಕವನ್ನೇ ಮರೆತಿದ್ದ ಮುಖ್ಯಮಂತ್ರಿ ಮತ್ತು ಆ ಕಾರಣಕ್ಕಾಗಿ ಸರ್ಕಾರಕ್ಕೆ ಎಚ್ಚರವಾದಂತಿದೆ. ಇದು ಬರಪೀಡಿತ ಗ್ರಾಮ ಕರ್ನಾಟಕದ ಜನತೆಗೆ ತನ್ನ ಸಂಕಟಗಳನ್ನು ಮುಖಾಮುಖಿ ತೋರಿಸಲು ಅವಕಾಶವಾಗಿದೆ.

ಈಗ ಯಾದಗಿರಿ ತಾಲೂಕಿನ ಚಂಡರಕಿಯಲ್ಲಿ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ನಡೆದಿದೆ. ಚಂಡರಕಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುತ್ತಿರುವ ಕುಮಾರಸ್ವಾಮಿ, ಇಡೀ ಯಾದಗಿರಿ ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಯಾದಗಿರಿಗೊಂದು 300 ವಾರ್ಡುಗಳ ಆಸ್ಪತ್ರೆ ನಿರ್ಮಾಣದ ಭರವಸೆ ನೀಡಿದ್ದಾರೆ. ಯಾದಗಿರಿಯ ಎಲ್ಲ ಗ್ರಾಮಗಳಿಗೂ ಒಂದೂವರೆ ವರ್ಷದಲ್ಲಿ ನದಿನೀರನ್ನು ತಲುಪಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಇದಕ್ಕೂ ಮೊದಲು ಅವರು ಯಾದಗಿರಿ ಪಟ್ಟಣದಲ್ಲಿ 28 ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಯಾದಗಿರಿಯ ಜಿಲ್ಲೆಯಲ್ಲಿ ಸಾಲಮನ್ನಾ ಕುರಿತಂತೆ ಆಗಿರುವ ಎಡವಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಡಿಸಿಸಿ ಬ್ಯಾಂಕಿನ ತಪ್ಪಿನಿಂದಾಗಿ ಇದು ನಡೆದಿದ್ದು ಅದನ್ನು ಸರಿಪಡಿಸುವ ಭರವಸೆ ನೀಡಿ, ಹೊಸ ಸಾಲ ಪಡೆಯಲು 100 ರೂ ಕೋಟಿ ಒದಗಿಸಲು ಆದೇಶ ನೀಡಿದ್ದಾರೆ. ಸಂಜೆ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಚರ್ಚೆ ನಡೆಸಿ, ರಾತ್ರಿ ಅಲ್ಲಿಯೇ ಊಟ ಮಾಡಿ ವಾಸ್ತವ್ಯ ಮಾಡಲಿದ್ದಾರೆ.

ಹಿಂದುಳಿದ ಭಾಗದ ವಾಸ್ತವತೆ ಅರಿವಾಗಲಿ
ಸದಾ ಬೆಂಗಳೂರಿನಿಂದಲೇ ಆಡಳಿತ ನಿರ್ವಹಿಸುವ ಅಧಿಕಾರಸ್ಥರಿಗೆ ಇಂತಹ ಗ್ರಾಮ ವಾಸ್ತವ್ಯಗಳು ಜನರ ನೈಜ ಸಮಸ್ಯೆಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಸ್ವಾಗತಾರ್ಹ. ಜಿಲ್ಲೆಯಾದ ಮೇಲೂ ಯಾದಗಿರಿಗೆ ಬಹುಪಾಲು ಜಿಲ್ಲಾ ಸೌಕರ್ಯಗಳು ಸಿಕ್ಕಿಲ್ಲ. ಇಂದಿಗೂ ಬಹುಪಾಲು ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲೇ ನಡೆಯುತ್ತಿವೆ. ಎಲ್ಲ ಕಡೆಯಂತೆಯೇ ಸರ್ಕಾರಿ ಶಾಲೆಗಳು ಸಮಸ್ಯೆಯಲ್ಲಿವೆ.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ (ಯುಕೆಪಿ) ನಿರ್ಮಿಸಿದ ಕಳಪೆ ಕಾಲುವೆಗಳಿಂದ ನೀರು ಪೋಲಾಗುತ್ತಿದೆ. ನೀರಾವರಿ ಯೋಜನೆಗಳ ಕೊರತೆಯ ಕಾರಣಕ್ಕೆ ಅಪಾರ ನೀರು ಸುಮ್ಮನೇ ಹರಿದು ತೆಲಂಗಾಣ ತಲುಪುತ್ತಿದೆ. ಕೃಷ್ಣ ಮತ್ತು ಭೀಮಾ ನದಿಗಳು ಪಕ್ಕದಲ್ಲೇ ಹರಿದರೂ ಯಾದಗಿರಿ ಮತ್ತು ಶಹಾಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸಲಾಗಿಲ್ಲ!

ಸರ್ಕಾರಿ ಯೋಜನೆಗಳ ಅನುಷ್ಟಾನ ಸರಿಯಾಗದೇ ಇರುವುದರಿಂದ ಯಾದಗಿರಿಯ ಜಿಲ್ಲೆಯ ಜನ ಕಳೆದ 20 ವರ್ಷಗಳಿಂದ ಬೆಂಗಳೂರು, ಹೈದರಾಬಾದ್‍ಗಳಿಗೆ ಕಟ್ಟಡ, ರಸ್ತೆ ನಿರ್ಮಾಣದ ಕೆಲಸಗಳಿಗೆ ಗುಳೆ ಹೋಗುವುದು ನಡೆದೇ ಇದೆ. ಬೆಂಗಳೂರಿನ ಹೊರವಲಯದ ಖಾಲಿ ಜಾಗಗಳಲ್ಲಿ ಹತ್ತಾರು ‘ಯಾದಗಿರಿ ಕ್ಯಾಂಪ್’ಗಳು ತಲೆಎತ್ತಿವೆ. ಪೋಷಕರೊಂದಿಗೆ ಅಲ್ಲಿಗೆ ಹೋಗಿರುವ ಮಕ್ಕಳ ಶಿಕ್ಷಣ ಮೊಟಕುಗೊಳ್ಳುತ್ತಿದೆ.

ಇಂತಹ ವಾಸ್ತವ್ಯಗಳಿಂದಲಾದರೂ ನೈಜ ಸಮಸ್ಯೆಗಳನ್ನು ಅಧಿಕಾರಸ್ಥರು ಅರಿಯುವಂತಾಗಲಿ. ಜನರು ಕೂಡ ತಮ್ಮ ಹಕ್ಕುಗಳಿಗಾಗಿ ದನಿ ಎತ್ತಿ ನ್ಯಾಯ ಪಡೆಯುವ ಅವಕಾಶ ಸಿಗಲಿ.
ರೆಸಾರ್ಟು, ರಾಜಧಾನಿ ರಾಜಕಾರಣ ಹಿಂದಕ್ಕೆ ಸರಿದು, ಈ ಬಗೆಯಲ್ಲಾದರೂ ಗ್ರಾಮಗಳತ್ತ ಸರ್ಕಾರ ಕಣ್ಣು ತೆರೆಯುಂತಾಗಲಿ.

ಹಿಂದೆ 13 ವರ್ಷಗಳ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಜನರಲ್ಲಿ ಒಳ್ಳೆಯ ಅಭಿಪ್ರಾಯವನ್ನು ಮೂಡಿಸಿತ್ತು. ಈ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...