HomeಮುಖಪುಟUP: ಪಾಕಿಸ್ತಾನಿ ಹಾಡು ಕೇಳಿದ ಇಬ್ಬರು ಮುಸ್ಲಿಂ ಬಾಲಕರ ಮೇಲೆ ಎಫ್‌ಐಆರ್‌

UP: ಪಾಕಿಸ್ತಾನಿ ಹಾಡು ಕೇಳಿದ ಇಬ್ಬರು ಮುಸ್ಲಿಂ ಬಾಲಕರ ಮೇಲೆ ಎಫ್‌ಐಆರ್‌

- Advertisement -
- Advertisement -

ನವದೆಹಲಿ: ಮೊಬೈಲ್ ಫೋನ್‌ನಲ್ಲಿ ಪಾಕಿಸ್ತಾನಿ ಹಾಡನ್ನು ಆಲಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಬರೇಲಿಯಲ್ಲಿ ಇಬ್ಬರು ಅಪ್ರಾಪ್ತ ಮುಸ್ಲಿಂ ಬಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 13 ರಂದು ಜಿಲ್ಲೆಯ ಭೂತಾ ಪ್ರದೇಶದ ಸಿಂಘೈ ಮುರಾವನ್ ಗ್ರಾಮದ ಇಬ್ಬರು ಬಾಲಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 16 ಮತ್ತು 17ರ ಹರೆಯದ ಸೋದರ ಸಂಬಂಧಿಗಳು ಸಿಂಘೈ ಮುರಾವನ್‌ನಲ್ಲಿ ಕಿರಾಣಿ ಅಂಗಡಿಯನ್ನು ನಡೆಸುತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನೆರೆಯ ದೇಶವನ್ನು ಹೊಗಳಿದ ಹಾಡನ್ನು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿ ಆಶಿಶ್ ಎಂಬವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಕಿಸ್ತಾನಿ ಹಾಡನ್ನು ಪ್ಲೇ ಮಾಡಿದ್ದನ್ನು ವಿರೋಧಿಸಿದ ಆಶಿಶ್, ಬಾಲಕರೊಂದಿಗೆ ಜಗಳವಾಡಿದ್ದಾರೆ. ಘಟನೆಯ ವೀಡಿಯೊವನ್ನು ಚಿತ್ರೀಕರಿಸಿ ಅದನ್ನು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಹಾಡು ಕೇಳುವುದನ್ನು ನಿಲ್ಲಿಸುವಂತೆ ಇಬ್ಬರಿಗೂ ಹೇಳಲಾಯಿತು. ಆದರೆ ನಿಂದನೆ ಮಾಡಿದ ಬಾಲಕರು ಭಾರತದ ಬಗ್ಗೆಯೂ ಕೆಟ್ಟದ್ದಾಗಿ ಮಾತನಾಡಿದರು ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಏಪ್ರಿಲ್ 13 ರ ಬುಧವಾರ ಸಂಜೆ 5 ಗಂಟೆಗೆ ಇಬ್ಬರನ್ನು ಕರೆದುಕೊಂಡು ಹೋಗಲಾಯಿತು. ಇಡೀ ರಾತ್ರಿ ಠಾಣೆಯಲ್ಲಿ ಇರಿಸಿಕೊಳ್ಳಲಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ಸ್ಥಳೀಯ ವರದಿಗಾರನಿಂದ ವಿಡಿಯೊ ಸಂಗ್ರಹಿಸಿದ ‘ದಿ ವೈರ್‌’ ವರದಿ ಮಾಡಿದ್ದು, “ಇವರಿಬ್ಬರ ಸೋದರಸಂಬಂಧಿ ಸದ್ದಾಂ ಹುಸೇನ್ ಪ್ರಕಾರ ಕಿರಿಯ ಸಹೋದರ ಕೇವಲ 40 ಸೆಕೆಂಡ್‌ ಹಾಡು ಹಾಕಿದ್ದಾನೆ. ಬೇಕಂತಲೇ ಪ್ಲೇ ಮಾಡಿಲ್ಲ. ನಂತರ ಕ್ಷಮೆಯಾಚಿಸಿದ್ದಾರೆ. ಆದರೆ ಕ್ಷಮೆಯನ್ನು ಒಪ್ಪಿಕೊಂಡಿಲ್ಲ.”

ಕಿರಿಯ ಹುಡುಗನ ಚಿಕ್ಕಮ್ಮ ಸಹನಾ ಅವರು ಕಿರಾಣಿ ಅಂಗಡಿಯಿಂದ ಕೆಲವು ನಿಮಿಷಗಳ ಕಾಲ ಹೊರಹೋಗಿದ್ದಾಗ ಘಟನೆ ನಡೆದಿದೆ. ಅರಿವಿಗೆ ಬಾರದೆ ಹಾಡು ಪ್ಲೇ ಮಾಡಿ ಬಂಧನಕ್ಕೊಳಗಾದುದನ್ನು ಕಂಡು ಸಹನಾ ಆತಂಕಿತರಾಗಿದ್ದಾರೆ. “ಈ ಬಾಲಕರು ವಿದ್ಯಾವಂತರಲ್ಲ. ಅವರ ಪರವಾಗಿ ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.

ಪಾಕಿಸ್ತಾನಿ ಬಾಲ ಕಲಾವಿದೆ ಆಯತ್ ಆರಿಫ್ ಅವರ ‘ಪಾಕಿಸ್ತಾನ್ ಜಿಂದಾಬಾದ್’ ಹಾಡನ್ನು ಈ ಹುಡುಗರು ಕೇಳುತ್ತಿದ್ದರು ಎನ್ನಲಾಗಿದೆ.

ಬರೇಲಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ), ರಾಜ್‌ಕುಮಾರ್ ಅಗರ್ವಾಲ್ ಪ್ರತಿಕ್ರಿಯೆ ನೀಡಿದ್ದು, ದೂರಿನ ಮೇರಿಗೆ ಎಫ್‌ಐಆರ್ ದಾಖಲಿಸಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಬರೇಲಿಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಅವರು ಟೈಮ್ಸ್‌ ಆಫ್‌ ಇಂಡಿಯಾ ಜೊತೆ ಮಾತನಾಡಿ, “ಯುವಕರನ್ನು ಇಂದು ಬೆಳಿಗ್ಗೆ ವಿಚಾರಣೆಗೆ ಕರೆಯಲಾಗುತ್ತಿದೆ ಎಂದು ನನಗೆ ತಿಳಿಸಿದ್ದರಿಂದ ರಾತ್ರಿಯಿಡೀ ಪೊಲೀಸರು ಅವರನ್ನು ಬಂಧಿಸಿದ್ದಾರೆಯೇ ಎಂದು ನನಗೆ ತಿಳಿದಿಲ್ಲ. ರೆಕಾರ್ಡ್ ಮಾಡಿದ ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸದ ಕಾರಣ ಅಂತಹ ಸಂದರ್ಭಗಳಲ್ಲಿ ನೋಟಿಸ್‌ಗಳನ್ನು ಸಲ್ಲಿಸಲು ಅವಕಾಶವಿದೆ. ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ವರದಿಯನ್ನು ನೀಡಲು ನಾನು ಹಿರಿಯ ಪೊಲೀಸರಲ್ಲಿ ಕೇಳುತ್ತೇನೆ” ಎಂದಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153B, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...