Homeರಾಜಕೀಯಉಪಚುನಾವಣೆ: 5 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಹೀನಾಯ ಸೋಲು - ಗೆಲುವಿನ ನಗೆ ಬೀರಿದ TMC, RJD,...

ಉಪಚುನಾವಣೆ: 5 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಹೀನಾಯ ಸೋಲು – ಗೆಲುವಿನ ನಗೆ ಬೀರಿದ TMC, RJD, ಕಾಂಗ್ರೆಸ್

- Advertisement -
- Advertisement -

ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರ ಮತ್ತು ಚತ್ತೀಸ್‌ಘಡ ರಾಜ್ಯಗಳಲ್ಲಿನ ನಾಲ್ಕು ವಿಧಾನಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಐದು ಕಡೆಗಳಲ್ಲಿಯೂ ಬಿಜೆಪಿ ಹೀನಾಯ ಸೋಲು ಕಂಡಿದೆ.

ಪಶ್ಚಿಮ ಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರ ಎರಡೂ ಕಡೆ ಟಿಎಂಸಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಉತ್ತರ ಮತ್ತು ಚತ್ತೀಸ್‌ಘಡದ ಖೈರಾಘರ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಬಿಹಾರದ ಬೋಛಾಹ ವಿಧಾನಸಭಾ ಕ್ಷೇತ್ರದಲ್ಲಿ ಆರ್‌ಜೆಡಿ ಅಭ್ಯರ್ಥಿ ಜಯಗಳಿಸಿದ್ದಾರೆ.

ಅಸಾನ್ಸೋಲ್ ಲೋಕಸಭಾ ಕ್ಷೇತ್ರ

ಪಶ್ಚಿಮ ಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿತ್ತು. 2019ರ ಚುನಾವಣೆಯಲ್ಲಿ ಬಿಜೆಪಿಯಿಂದ ಬಬುಲ್ ಸುಪ್ರಿಯೋ ಗೆಲುವು ಸಾಧಿಸಿದ್ದರು. ಆದರೆ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯದಿಂದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದು ಅವರು ಟಿಎಂಸಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಹಾಗಾಗಿ ತೆರವಾದ ಸ್ಥಾನಕ್ಕೆ ಟಿಎಂಸಿಯು ಹಿರಿಯ ನಾಯಕ ಶತ್ರುಘ್ನ ಸಿನ್ಹರನ್ನು ಕಣಕ್ಕಿಳಿಸಿತ್ತು. ಅವರು ಬಿಜೆಪಿ ಅಭ್ಯರ್ಥಿ ಅಗ್ನಿಮಿತ್ರ ಪೌಲ್ ವಿರುದ್ದ 1.5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಟಿಎಂಸಿ ಜಯಗಳಿಸಿದೆ.

ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರ

ಪಶ್ಚಿಮ ಬಂಗಾಳದ ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯ ಬಬುಲ್ ಸುಪ್ರಿಯೋ ಜಯಗಳಿಸಿದ್ದಾರೆ. ಸಚಿವರಾಗಿದ್ದ ಸುಬ್ರತ ಮುಖರ್ಜಿಯವರ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಇಲ್ಲಿ ಬಿಜಪಿಯು ಖೆಯಾ ಘೋಷ್ ಎಂಬುವವರನ್ನು ಕಣಕ್ಕಿಳಿಸಿತ್ತು. ಆದರೆ ಅವರು ಸೋಲನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಖೈರಾಘರ್‌ ವಿಧಾನಸಭಾ ಕ್ಷೇತ್ರ

ಚತ್ತೀಸ್‌ಘಡದ ಖೈರಾಘರ್‌ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಜನತ ಕಾಂಗ್ರೆಸ್‌ನ ದೇವ್ರತ್ ಸಿಂಗ್ ಎಂಬುವವರು ನಿಧನರಾಗಿದ್ದರು. ಹಾಗಾಗಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಶೋದ ನಿಲಂಬರ್ ವರ್ಮಾರವರು 20,000 ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ.

ಕೊಲ್ಲಾಪುರ ಉತ್ತರ

ಮಹಾರಾಷ್ಟ್ರದ ಕೊಲ್ಲಾಪುರ ಉತ್ತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಶ್ರೀ ಜಾಧವ್‌ರವರು ಬಿಜೆಪಿಯ ಸತ್ಯಜಿತ್ ಕದಮ್ ವಿರುದ್ಧ 18,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಬೋಛಾಹ ವಿಧಾನಸಭಾ ಕ್ಷೇತ್ರ

ಬಿಹಾರದ ಬೋಛಾಹ ವಿಧಾನಸಭಾ ಕ್ಷೇತ್ರವು ಎಸ್‌ಸಿ ಮೀಸಲು ಕ್ಷೇತ್ರವಾಗಿದೆ. ಇಲ್ಲಿ ವಿಕಾಸಶೀಲ ಇನ್ಸಾನ್ ಪಾರ್ಟಿಯಿಂದ ಶಾಸಕರಾಗಿದ್ದ ಮುಖೇಶ್ ಸಹಾನಿಯವರು ಸಾವನಪ್ಪಿದ್ದರು. ಹಾಗಾಗಿ ನಡೆದ ಉಪಚುನಾವಣೆಯಲ್ಲಿ ಆರ್‌ಜೆಡಿಯ ಅಮರ್ ಕುಮಾರ್ ಪಾಸ್ವಾನ್‌ರವರು ಜಯಗಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....