Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

- Advertisement -
- Advertisement -

ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅವರ ಸಮಾನತೆ ಬಗೆಗಿನ, ವೈಚಾರಿಕತೆ ಕುರಿತ ನಿಲುವುಗಳನ್ನು ಸ್ಮರಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಅಂಬೇಡ್ಕರ್ ಅವರು ಶ್ರೀ ಶ್ರೀಧರ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವ ಅಪರೂಪದ ಫೋಟೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಪೋಸ್ಟರ್‌ ಅನ್ನು ಹಂಚುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಸ್ವಾಮೀಜಿಗಳಿಂದ ಆಶಿರ್ವಾದ ಪಡೆದರು ಎಂಬ ಸಂದೇಶ ಹರಡಲು ಯತ್ನಿಸಲಾಗುತ್ತಿದೆ. ಅಂಬೇಡ್ಕರ್ ಅವರು ನಿಜಕ್ಕೂ ಶ್ರೀಧರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡಿದಿದ್ದಾರೆಯೆ ಎಂದು  ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರೀತಿಯ ಚಿತ್ರಗಳನ್ನು ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಹಂಚುತ್ತಿದ್ದಾರೆ. ಅವರುಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ ಚೆಕ್

ಆರ್ಯವಾರ್ತಾ ಎಂಬ  ಫೇಸ್‌ಬುಕ್ ಪೇಜ್‌ನಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವರದಹಳ್ಳಿಯಲ್ಲಿರುವ ಆಶ್ರಮಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿ ಶ್ರೀ ಶ್ರೀಧರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲಿರುವ ಫೋಟೊದಲ್ಲಿ ಕನ್ನಡಕ ಧರಿಸಿರುವ ವ್ಯಕ್ತಿಯೊಬ್ಬರಿಗೆ ಶ್ರೀಧರ ಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದು, ಜೊತೆಯಲ್ಲಿ ಮತ್ತೊಬ್ಬರು ಕುಳಿತಿರುವುದನ್ನು ಕಾಣಬಹುದು.

ಪೋಟೋದಲ್ಲಿರುವ ವ್ಯಕ್ತಿ ಅಂಬೇಡ್ಕರ್ ಅಲ್ಲ

ಅಂಬೇಡ್ಕರ್ ಅವರ ಕರ್ನಾಟಕಕ್ಕೆ ಭೇಟಿ ನೀಡಿರುವ ಸ್ಥಳಗಳ ಬಗ್ಗೆ ಪರಿಶೀಲಿಸಿದಾಗ ಫೋಸ್ಟ್‌ನಲ್ಲಿ ಉಲ್ಲೇಖಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಭೇಟಿ ನೀಡಿರುವ ಯಾವ ಉಲ್ಲೇಖ ಕಂಡುಬಂದಿಲ್ಲ.

ನಾನುಗೌರಿ.ಕಾಂ ವರದಪುರ ಭಗವಾನ್ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಕರೆ ಮಾಡಿ ಈ ಕುರಿತು ವಿಚಾರಿಸಿದಾಗ ಆಶ್ರಮದ ಟ್ರಸ್ಟಿಯೊಬ್ಬರು ಮಾತನಾಡಿ, “ಅಂಬೇಡ್ಕರ್ ಅವರು ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ಫೋಟೋದಲ್ಲಿ ಇರುವುದು ಅಂಬೇಡ್ಕರ್ ಅಲ್ಲ. ಈ ಹಿಂದೆಯೂ ಇದೇ ರೀತಿ ಸುಳ್ಳು ಸುದ್ದಿ ಹರಡಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ಹಾಗಿದ್ದರೆ ಫೋಟೋದಲ್ಲಿ ಕಾಣುವ ವ್ಯಕ್ತಿ ಯಾರು?

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿರುವ ಫೋಟೋದಲ್ಲಿ ಇರುವ ವ್ಯಕ್ತಿ ಅಂಬೇಡ್ಕರ್ ಅಲ್ಲ. ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು. ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಭೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ. ಅದನ್ನು ಇಲ್ಲಿ ನೋಡಬಹುದು.

ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು
ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು

ಅಂಬೇಡ್ಕರ್‌ರವರ ಕರ್ನಾಟಕ ಭೇಟಿ

ಕರ್ನಾಟಕಕ್ಕೆ ಅಂಬೇಡ್ಕರ್ ಮೊದಲ ಬಾರಿಗೆ ಭೇಟಿ ನೀಡಿದ್ದು 1925 ನವೆಂಬರ್ 11 ಮತ್ತು 12 ರಂದು. ಬೆಳಗಾವಿಯಲ್ಲಿ ನಡೆದ ಬಹಿಷ್ಕ್ರತ ಹಿತಕಾರಿಣಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಂತರ ಅವರು ಕರ್ನಾಟಕಕ್ಕೆ ಸುಮಾರು 7 ಬಾರಿ ಭೇಟಿ ನೀಡಿದ್ದಾರೆ (ಭೇಟಿ ನೀಡಿದ್ದ ವಿವರವನ್ನು ಈ ಲೇಖನದಲ್ಲಿ ನೋಡಬಹುದು) ಆದರೆ ಈ ಭೇಟಿಗಳಲ್ಲಿ ಎಲ್ಲಯೂ ಶಿವಮೊಗ್ಗದ ಸಾಗರಕ್ಕೆ ಬಂದಿದ್ದರ ಉಲ್ಲೇಖವಿಲ್ಲ.

ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು
ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದಿದ್ದ ಅಂಬೇಡ್ಕರ್

ಅಂಬೇಡ್ಕರ್‌ರವರು ತಮ್ಮ ಜೀವಮಾನ ಪೂರ್ತಿ ಹಿಂದೂ ಧರ್ಮದ ಜಾತೀಯತೆ, ಅಸಮಾನತೆ, ಕಪಟ ಆಚಾರಗಳನ್ನು ವಿರೋಧಿಸಿದ್ದರು. ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದು ಘೋಷಿಸಿದ್ದರು. ಅದರಂತೆಯೇ ಅವರು ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿ 1956 ರಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸೇರಿದ್ದರು. ಹಾಗಾಗಿ ಅವರು ಯಾವ ಹಿಂದೂ ಸ್ವಾಮೀಜಿಯಿಂದಲೂ ಆರ್ಶಿವಾದ ಪಡೆದಿರಲಿಲ್ಲ.

ಹಾಗಾಗಿ ಈ ಎಲ್ಲಾ ಆಧಾರದಲ್ಲಿ ಫೋಟೋದಲ್ಲಿ ಭಗವಾನ್ ಶ್ರೀ ಶ್ರೀಧರಸ್ವಾಮಿಗಳೊಂದಿಗೆ ಆಶೀರ್ವಾದ ಪಡೆಯುತ್ತಿರುವ ವ್ಯಕ್ತಿಯು ಅಂಬೇಡ್ಕರ್ ಅಲ್ಲ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು ಎಂದು ಖಚಿತವಾಗಿ ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...