Homeಕರ್ನಾಟಕಫ್ಯಾಕ್ಟ್ ಚೆಕ್: ಬೆಂಗಳೂರಲ್ಲಿ ‘ಮೋದಿ ಮಸೀದಿ’ ಇದೆಯೇ? ಇಲ್ಲಿದೆ ನೋಡಿ ಅಸಲಿ ಕಹಾನಿ!

ಫ್ಯಾಕ್ಟ್ ಚೆಕ್: ಬೆಂಗಳೂರಲ್ಲಿ ‘ಮೋದಿ ಮಸೀದಿ’ ಇದೆಯೇ? ಇಲ್ಲಿದೆ ನೋಡಿ ಅಸಲಿ ಕಹಾನಿ!

ಈ ಮಸೀದಿಯನ್ನು 175 ವರ್ಷಗಳಿಗೂ ಹಿಂದೆಯೇ ಕಟ್ಟಲಾಗಿದೆ. ಇತ್ತೀಚಿಗೆ ಈ ಮಸೀದಯನ್ನು ನವೀಕರಣ ಮಾಡಿದ ಕಾರಣಕ್ಕಾಗಿ ಈಗ ಅದು ಸುದ್ದಿಯಲ್ಲಿದೆ. ಈ ಮಸೀದಿ ಶಿವಾಜಿ ನಗರದಲ್ಲಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಹೀಗೊಂದು ಫೋಟೊ-ಸುದ್ದಿ ಹರಿದಾಡುತ್ತಿದೆ: ‘ಬೆಂಗಳೂರಿನ ಮುಸ್ಲಿಮರು ಮಸೀದಿಯೊಂದಕ್ಕೆ ನರೇಂದ್ರ ಮೋದಿ ಹೆಸರಿಟ್ಟಿದ್ದಾರೆ… ಇದನ್ನು ನೋಡಿ ಎಷ್ಟು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಾರೋ’ ಎಂಬುದು ಆ ಸುದ್ದಿಯ ಸಾರಾಂಶ.

ಮೇಲಿನ ಸಂದೇಶದ ಪ್ರಕಾರ, ಬೆಂಗಳೂರಿನಲ್ಲಿ ಮಸೀದಿಯೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಹೆಸರಿಟ್ಟಿದ್ದಾರೆ. ಮೋದಿಯವರು ಫಾಲೋ ಮಾಡುವ ಟ್ವೀಟ್ ಖಾತೆ( @mahesh10816 ) ಯಿಂದ ಮೇಲಿನ ಸಂದೇಶವನ್ನು ಟ್ವೀಟ್ ಮಾಡಲಾಗಿದ್ದು, ಈ ಟ್ವೀಟ್ ಜೊತೆ ಎರಡು ಫೋಟೊಗಳೂ ಇವೆ. ಜೂನ್ 20ರ ಈ ಸಂದೇಶ ಅಂದೇ 400ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ. ಪೋಸ್ಟ್‍ನ ಎಡಕ್ಕಿರುವ ಫೋಟೊದಲ್ಲಿ ‘MODI MASJID’ ಎಂಬುದನ್ನು, ಬಲಭಾಗದ ಫೋಟೊದಲ್ಲಿ ಹಿಂಬದಿಯಲ್ಲಿ ಮೋದಿಯ ಪೋಸ್ಟರ್ ಅನ್ನು ಕಾಣಬಹುದು. ವ್ಯಾಟ್ಸಾಪ್ ನಲ್ಲೂ ಈ ಸಂದೇಶ ವಿಪರೀತ ಹರಿದಾಡುತ್ತಿದೆ.

ಕನ್ನಡದ ಶೀರ್ಷಿಕೆ ಇರುವ ಫೋಟೊ ಒಂದು ಕೂಡ ಹರಿದಾಡುತ್ತಿದ್ದು, ‘ಮೋದಿ ಹೆಸರಲ್ಲಿ 12 ಕೋಟಿಯ ಮಸೀದಿ, ಮೋದಿ ಮಸೀದಿಯಲ್ಲಿ ಜಮೀರ ಖಾನ್’ ಎಂಬ ಸಾಲುಗಳಿವೆ. ಇಂಥದ್ದನ್ನು ತೋರಿಸಿ, ನೋಡಿ ಬೆಂಗಳೂರಿನ ಮುಸ್ಲಿಮರೂ ಮೋದಿ ಸಾಧನೆ ಮೆಚ್ಚಿದ್ದಾರೆ ಎಂದು ಸುಳ್ಳನ್ನು ಹರಡುವ ಕುತಂತ್ರವಿದು.

ಸತ್ಯ: ಬೆಂಗಳೂರಿನ ಯಾವ ಮಸಿದಿಗೂ ನರೆಂದ್ರ ಮೋದಿಯ ಹೆಸರನ್ನು ಇಡಲಾಗಿಲ್ಲ. ಮೇಲಿನ ಸಂದೇಶವನ್ನು ಮೋದಿ ಕೆಲವರು ಮುಸ್ಲಿಮರಲ್ಲೂ ಜನಪ್ರಿಯರು ಎಂದು ತೋರಿಸುವ ಭಾಗವಾಗಿ ಹರಡುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದ ಅಮಾಯಕರು ವ್ಯಾಟ್ಸಾಪ್‍ನಲ್ಲಿ ತಮ್ಮ ಸ್ನೇಹಿತರಿಗೆ ಇದನ್ನು ಕಳಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದ ಬಳಕೆದಾರರ ಕೋರಿಕೆಯ ಮೇಲೆ ಮೇಲಿನ ಸಂದೇಶದ ಕುರಿತಾಗಿ ಆಲ್ಟ್‍ನ್ಯೂಸ್ ಫ್ಯಾಕ್ಟ್‍ಚೆಕ್ ಮಾಡಿದೆ. ಬೆಂಗಳೂರಲ್ಲಿ ಮೋದಿ ಮಸೀದಿ ಎಂಬುದು ಇದೆ ಆದರೂ, ಅದು ನರೇಂದ್ರ ಮೋದಿ ಹೆಸರಿನದ್ದಲ್ಲ. ಅದನ್ನು ‘ಮೋದಿ ಅಬ್ದುಲ್ ಗಫೂರ್’ ಎಂಬ ದಾನಿಯ ಸ್ಮರಣಾರ್ಥ ‘ಮೋದಿ ಮಸೀದಿ’ ಎಂದು ಹೆಸರಿಸಲಾಗಿದೆ. ಈ ಮಸೀದಿಯನ್ನು 175 ವರ್ಷಗಳಿಗೂ ಹಿಂದೆಯೇ ಕಟ್ಟಲಾಗಿದೆ. ಇತ್ತೀಚಿಗೆ ಈ ಮಸೀದಯನ್ನು ನವೀಕರಣ ಮಾಡಿದ ಕಾರಣಕ್ಕಾಗಿ ಈಗ ಅದು ಸುದ್ದಿಯಲ್ಲಿದೆ. ಈ ಮಸೀದಿ ಶಿವಾಜಿ ನಗರದಲ್ಲಿದೆ.

ಟ್ವೀಟ್ ಜೊತೆಗಿರುವ ಎಡಭಾಗದ ಫೋಟೊ ‘ಮೋದಿ ಮಸೀದಿ’ಯದ್ದು (ನರೇಂದ್ರ ಮೋದಿಯಲ್ಲ, ಮೋದಿ ಅಬ್ದುಲ್ ಗಫೂರ್)… ಎರಡನೇ ಫೋಟೊದ ಮೂಲ ಗೊತ್ತಾಗಿಲ್ಲವಾದರೂ, ಅದು ‘ಮೋದಿ ಮಸೀದಿ’ಯ ಫೋಟೊವಂತೂ ಅಲ್ಲ. ಮೇಲಿನ ಫೇಕ್ ಆಧರಿಸಿಯೇ ಜಮೀರ್ ನಿಂತಿರುವ ಮಸಿದಿಯ ಫೋಟೊ ಇರುವ ಕನ್ನಡ ವಿಡಿಯೊವನ್ನು ಸೃಷ್ಟಿಸಿ ಯುಟ್ಯೂಬ್‍ಗೆ ಅಪಲೋಡ್ ಮಾಡಲಾಗಿದೆ. ಕಳೆದ ವರ್ಷವಷ್ಟೇ ಈ ಮಸೀದಿ ನಿರ್ಮಸಿಲಾಗಿದೆ ಎಂದು ಸುಳ್ಳು ಬಿತ್ತರಿಸಲಾಗಿದೆ.

ಈ ಮಸೀದಿ ಬಗ್ಗೆ ಗೊತ್ತಾದರೆ ನಮ್ಮ ಚಾನೆಲ್‍ಗಳೂ ಮೋದಿ ಹೆಸರಲ್ಲಿ ಬೆಂಗಳೂರಲ್ಲಿ ಮಸೀದಿ ಎಂದು ವಿಶೇಷ ಕಾರ್ಯಕ್ರಮ ಪ್ರಸಾರ ಮಾಡಬಹುದು, ಎಚ್ಚರವಿರಲಿ…

ಕೃಪೆ: ಆಲ್ಟ್ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...