Homeರಾಷ್ಟ್ರೀಯಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ...

ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ ವಾಪಾಸ್!

- Advertisement -
- Advertisement -

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌‌ಪಿ ಭಾಗಿಯಾಗಿದ್ದಾರೆ ಎಂದು ರಾಜ್ಯ ಪೊಲೀಸರು ಸೋಮವಾರ ಮಾಧ್ಯಮಗಳೊಂದಿಗೆ ಅಧೀಕೃತವಾಗಿ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆಯನ್ನು ಕೆಲವೇ ಗಂಟೆಗಳಲ್ಲಿ ಅವರು ಹಿಂಪಡೆದಿದ್ದಾರೆ ಎಂದು DH ವರದಿ ಮಾಡಿದೆ.

ಹನುಮ ಜಯಂತಿ ಮೆರವಣಿಗೆಯ ನಂತರ ವಾಯುವ್ಯ ದೆಹಲಿಯ ಜಹಾಂಗೀರ್‌‌ಪುರಿಯಲ್ಲಿ ಶನಿವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಪ್ರಕರಣವನ್ನು ದಾಖಲಿಸಿದ್ದರು. ಜೊತೆಗೆ ಅನುಮತಿ ಪಡೆಯದೆ ಮೆರವಣಿಗೆ ನಡೆಸಿದ್ದಕ್ಕೆ ಮೂರನೇ ಪ್ರಕರಣವನ್ನು ದಾಖಲಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಲ್ಲಿ, ಅನುಮತಿಯನ್ನು ಪಡೆಯದೆ ಮೆರವಣಿಗೆ ಮಾಡಿದ್ದಕ್ಕಾಗಿ ಮೆರವಣಿಗೆಯ ‘ಆಯೋಜಕರ’ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188 (ಸಾರ್ವಜನಿಕ ಸೇವಕನ ಆದೇಶಗಳನ್ನು ಉಲ್ಲಂಘಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಹೇಳಿಕೆಯಲ್ಲಿ ಸಂಘಟಕರನ್ನು ಬಿಜಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ಎಂದು ಗುರುತಿಸಿತ್ತು.

ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ಪೊಲೀಸ್‌ ಹೇಳಿಕೆಯಲ್ಲಿ, “ದೆಹಲಿ ಪ್ರಾಂತ, ಮುಖರ್ಜಿ ನಗರ ಜಿಲ್ಲಾ, ಝಾಂಡೇವಾಲಾದ ವಿಎಚ್‌ಪಿ ಮತ್ತು ಬಜರಂಗದಳದವರು ಯಾವುದೇ ಅನುಮತಿಯಿಲ್ಲದೆ ಮೆರವಣಿಗೆ ಆಯೋಜಿಸಿದ್ದರು” ಎಂದು ಉಲ್ಲೇಖಿಸಿದ್ದಾರೆ. “ವಿಎಚ್‌ಪಿ ಜಿಲ್ಲಾ ಸೇವಾ ಪ್ರಮುಖ್‌‌ ಎಂಬ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ” ಎಂದೂ ಅದು ಹೇಳಿಕೆಯಲ್ಲಿ ತಿಳಿಸಿತ್ತು.

ಆದರೆ, ಕೆಲವೇ ಗಂಟೆಗಳಲ್ಲಿ, ಪೋಲೀಸರು ಹೇಳಿಕೆಯನ್ನು ಪರಿಷ್ಕರಿಸಿದ್ದು, ಸಂಘಟನೆಗಳು ಮತ್ತು ಬಂಧನದ ಬಗ್ಗೆಗಿನ ಉಲ್ಲೇಖವನ್ನು ಕೈಬಿಟ್ಟಿದ್ದಾರೆ. “ಯಾವುದೇ ಅನುಮತಿಯಿಲ್ಲದೆ (16/04/22 ರಂದು ಸಂಜೆ ಪಿಎಸ್ ಜಹಾಂಗೀರ್ಪುರಿ ಪ್ರದೇಶದಲ್ಲಿ) ಮೆರವಣಿಗೆಯನ್ನು ನಡೆಸಿದ್ದಕ್ಕಾಗಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಹೊಸ ಹೇಳಿಕೆ ತಿಳಿಸಿದೆ. “ಒಬ್ಬ ಆರೋಪಿ ತನಿಖೆಗೆ ಸೇರಿಕೊಂಡಿದ್ದಾನೆ” ಎಂದು ಅದು ಹೇಳಿದೆ.

ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪರಿಷ್ಕೃತ ಹೇಳಿಕೆ ತಿಳಿಸಿದೆ. ಏಪ್ರಿಲ್ 16 ರ ಬೆಳಿಗ್ಗೆ ಮತ್ತು ಮಧ್ಯಾಹ್ನ ಜಹಾಂಗೀರ್‌‌ಪುರಿಯಲ್ಲಿ ಸರಿಯಾದ ಅನುಮತಿಯೊಂದಿಗೆ ನಡೆಸಲಾದ ಇತರ ಎರಡು ಮೆರವಣಿಗೆಗಳನ್ನು ಸಹ ಇದು ಉಲ್ಲೇಖಿಸಿದೆ.

ಇದನ್ನೂ ಓದಿ: ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

ಶನಿವಾರದಂದು ಕಟ್ಟುನಿಟ್ಟಾದ ಸೆಕ್ಷನ್ 307 (ಕೊಲೆಗೆ ಯತ್ನ), 120 ಬಿ (ಕ್ರಿಮಿನಲ್ ಪಿತೂರಿ), 147 (ಗಲಭೆ) ಮತ್ತು ಇತರ ಸಂಬಂಧಿತ ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಮೊದಲ ಪ್ರಕರಣದಲ್ಲಿ 21 ಜನರನ್ನು ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಇಬ್ಬರು ಅಪ್ರಾಪ್ತರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ.

ಅನುಮತಿಯಿಲ್ಲದೆ ಈ ಪ್ರದೇಶದಲ್ಲಿ ಮೆರವಣಿಗೆ ಸಾಗಲು ಹೇಗೆ ಸಾಧ್ಯ ಎಂಬುದಕ್ಕೆ ಪೊಲೀಸರು ಈಗ ಉತ್ತರಿಸಬೇಕಾಗಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಅದರಲ್ಲೂ ಕನಿಷ್ಠ ಎರಡು ಪೋಲೀಸ್ ಜೀಪ್‌ಗಳು ಮೆರವಣಿಗೆಯ ಜೊತೆಯಲ್ಲಿರುತ್ತವೆ, ಒಟ್ಟು ಮೂರು ಮೆರವಣಿಗೆಗಳು ನಡೆದವು, ಮೂರನೆಯದ್ದು, ವಿಎಚ್‌ಪಿ ಮತ್ತು ಬಜರಂಗ ದಳದ ಮೆರವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಮೆರವಣಿಗೆಯಲ್ಲಿದ್ದವರು ಕತ್ತಿ ಮತ್ತು ಬೇಸ್‌ಬಾಲ್ ಬ್ಯಾಟ್‌ಗಳನ್ನು ಹಿಡಿದುಕೊಂಡಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗುತ್ತಿರುವ ವೀಡಿಯೊಗಳಲ್ಲಿ ಬಹಿರಂಗವಾಗಿದೆ. ಕೆಲವರು ನಾಡ ಪಿಸ್ತೂಲ್‌ಗಳನ್ನು ಕೈಯ್ಯಲ್ಲಿ ಹಿಡಿದುಕೊಂಡಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ ಎಂದು ಎಡಪಕ್ಷಗಳ ಸತ್ಯಶೋಧನಾ ತಂಡ ಸೋಮವಾರ ಹೇಳಿದೆ. “ಇದರ ನಂತರ ಅಲ್ಪಸಂಖ್ಯಾತ ಸಮುದಾಯದ ಕೆಲವು ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ತಂದಿದ್ದಾರೆ” ಎಂದು ತಂಡವು ಹೇಳಿದೆ.

ಇದನ್ನೂ ಓದಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಮೂರನೇ ಮೆರವಣಿಗೆಯ ಸದಸ್ಯರು ಪ್ರಾರ್ಥನೆಯ ಸಮಯದಲ್ಲಿ ಮಸೀದಿಯ ಮುಂದೆ ಮೆರವಣಿಗೆಯನ್ನು ನಿಲ್ಲಿಸಿ, ಅವರು ನುಡಿಸುತ್ತಿದ್ದ ಸಂಗೀತದ ಪ್ರಮಾಣವನ್ನು ಹೆಚ್ಚಿಸಿದರು ಎಂದು ಸ್ಥಳೀಯರು ಹೇಳಿದ್ದಾರೆ. ಮಸೀದಿಯ ಗೋಡೆಯ ಮೇಲೆ ಧ್ವಜ ಹಾರಿಸುವ ಯತ್ನ ನಡೆದಿದೆ ಎಂದು ಸ್ಥಳೀಯರು ಹೇಳಿದರೆ, ಪೊಲೀಸರು ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...