Homeಕರ್ನಾಟಕಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು, ಇಷ್ಟು ದೊಡ್ಡ ದುರ್ಘಟನೆ ನಡೆದರೂ ಸಂತ್ರಸ್ತರ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಕೂಡಾ ಹೇಳಿಲ್ಲ ಎಂದು ಸ್ಥಳೀಯ ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಮಂಗಳೂರು ಹೊರವಲಯದ ಬಜ್ಪೆಯಲ್ಲಿರುವ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹದ ತೊಟ್ಟಿಯನ್ನು ಸ್ವಚ್ಛ ಮಾಡುತ್ತಿದ್ದಾಗ ದುರಂತ ಸಂಭವಿಸಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ. ಪ್ರಕರಣದ ಸಂಬಂಧ ಸಂಸ್ಥೆಯ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

“ಮೀನು ಸಂಸ್ಕರಣಾ ಘಟಕದ ಮಾಲೀಕರು ಸೇರಿದಂತೆ ನಾಲ್ವರ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯಕ್ಕೆ ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್, ಸೂಪರ್ ವೈಸರ್ ಮುಹಮ್ಮದ್ ಅನ್ವರ್, ಫಾರೂಕ್ ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಶಶಿಕುಮಾರ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳದೇ ಕೆಲಸ ಮಾಡಿಸಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ. ಈ ಬಗ್ಗೆ ಐಪಿಸಿ ಕಲಂ 337, 338, 304 ಹಾಗೂ 34ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

“ಭಾನುವಾರ ಸಂಜೆಯ ವೇಳೆ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹ ತೊಟ್ಟಿಯನ್ನು ಸ್ವಚ್ಛ ಗೊಳಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಕುಸಿದು ಬಿದ್ದ ಕಾರಣ ಅಲ್ಲೇ ಇದ್ದ ಇತರ ಏಳು ಮಂದಿ ಕಾರ್ಮಿಕರು ಆತನ ರಕ್ಷಣೆಗೆ ಧಾವಿಸಿದ್ದಾರೆ. ದುರಂತದಲ್ಲಿ ಮೂರು ಮಂದಿ ಭಾನುವಾರ ತಡ ರಾತ್ರಿಯೇ ಸಾವನ್ನಪ್ಪಿದ್ದರೆ, ಇಬ್ಬರು ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೆ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿ ಪರಿಗಣಿಸಲಾಗಿದೆ” ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸೋಮವಾರ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಕಮಿಷನರ್, ಕಂಪೆನಿಯ ಅಧಿಕಾರಿಗಳನ್ನು ತರಾಟೆಗೈದು ಕಾರ್ಖಾನೆಗೆ ಬೀಗ ಜಡಿಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮುಹಮ್ಮದ್‌ ಸಮೀಯಲ್ಲಾ ಇಸ್ಲಾಂ, ಉಮರ್‌ ಫಾರೂಕ್‌, ನಿಝಾಮುದ್ದೀನ್‌ ಆಲಿಸ್, ಮಿರಾಜುಲ್ ಇಸ್ಲಾಂ ಮತ್ತು ಶರಾಫತ್‌ ಅಲಿ ಎಂದು ಗುರುತಿಸಲಾಗಿದೆ. ಮೃತರಲ್ಲಿ ಒಬ್ಬ ಕಾರ್ಮಿಕ ಅಪ್ರಾಪ್ತ ಎಂದು ಹೇಳಲಾಗುತ್ತಿದೆ ಎಂದು ವಾರ್ತಭಾರತಿ ವರದಿ ಮಾಡಿದೆ. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ಕಂಪೆನಿಯಲ್ಲಿ ಕೆಲಸ ಮಾಡುವವರೆಲ್ಲ ಬಹುತೇಕರು ಯುವಕರಾಗಿದ್ದಾರೆ. ಮುಂಬೈ ಮೂಲದ ರಾಜು ಗೋರಕ್ ಎಂಬವರ ಒಡೆತನದ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸಲಾಗಿಲ್ಲ. ಮೃತದೇಹದ ಮೂಗು ಬಾಯಿಯಲ್ಲೂ ಮೀನಿನ ತ್ಯಾಜ್ಯ ಕಂಡು ಬಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ” ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ 

ಶ್ರೀ ಉಲ್ಕಾ ಎಲ್‌ಎಲ್‌ಪಿ ಕಾರ್ಖಾನೆಯು ಮುಂಬೈ ಮೂಲದ ಮೀನು ಸಂಸ್ಕರಣಾ ಕಾರ್ಖಾನೆಯಾಗಿದ್ದು, ಇಲ್ಲಿಂದ ಮೀನು ಸಂಸ್ಕರಣೆಗೊಂಡು ಏಷ್ಯಾದ ವಿವಿಧ ರಾಷ್ಟ್ರಗಳು, ರಷ್ಯಾ ಸೇರಿದಂತೆ ವಿದೇಶ ಹಾಗೂ ದೇಶದ ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತದೆ. ಕಳೆದ ಮೂರು ವರ್ಷಗಳಿಂದ ಈ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದೆ. ನೇರವಾಗಿ ಮತ್ತು ಪರೋಕ್ಷವಾಗಿ ಸುಮಾರು 100 ಮಂದಿ ಕಾರ್ಮಿಕರು ಕಾರ್ಖಾನೆಯಲ್ಲಿ ದುಡಿಯುತ್ತಿದ್ದಾರೆ ಎಂದು ಕಂಪೆನಿಯ ಆಡಳಿತ ವ್ಯವಸ್ಥಾಪಕಿ ಪ್ರಿಯಾ ಎಂಬವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ

ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ದುರ್ಘಟನೆ ನಡೆದಾಗ ಬಿಜೆಪಿ ಶಾಸಕರೊಬ್ಬರು ಸ್ಥಳಕ್ಕೆ ಭೇಟಿ ಕೊಟ್ಟು ಹೋಗಿದ್ದಾರೆ ಆದರೆ ಈ ಬಗ್ಗೆ ಯಾವುದೆ ಹೇಳಿಕೆ ನೀಡಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜಿಲ್ಲೆಯ ಸಂಸದರಾದ ನಳಿನ್ ಕುಮಾರ್‌ ಕಟೀಲ್‌ ಆಗಲಿ, ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್‌ ಆಗಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ, ಮೃತಪಟ್ಟವರ ಕುಟುಂಬಕ್ಕೆ ಸಾಂತ್ವಾನ ಹೇಳಿಲ್ಲ.  ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಚುನಾವಣೆಯಲ್ಲಿ ಲಾಭ ಇದ್ದರೆ ಮಾತ್ರ ಅವರು ಬರುತ್ತಾರೆ. ಬೇರೆ ರಾಜ್ಯದ ಕಾರ್ಮಿಕರು ಇಲ್ಲಿ ಬಂದು ಮೃತಪಟ್ಟರೆ ಅವರಿಗಾಗಿ ಅಳಲು ಕೂಡಾ ಜನರು ಇರುವುದಿಲ್ಲ” ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಈ ಮಧ್ಯೆ ಕಾರ್ಮಿಕ ಸಂಘಟನೆಗಳ ಮುಖಂಡರು ತಡರಾತ್ರಿಯವರೆಗೆ ಸತತ ಪ್ರಯತ್ನ ನಡೆಸಿ ಮೃತ ಪಟ್ಟ ಐದು ಬಂಗಾಳಿ ಕಾರ್ಮಿಕರ ಕುಟುಂಬಕ್ಕೆ ಕಂಪೆನಿ ಕಡೆಯಿಂದ ತಲಾ ಹದಿನೈದು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ಕೊಡಿಸಲು ಒಪ್ಪಿಸಿದ್ದಾರೆ. ಅಲ್ಲದೆ ಮೃತ ದೇಹಗಳನ್ನು ಬಂಗಾಳಕ್ಕೆ ತಲುಪಿಸುವುದರ ಜೊತೆಗೆ 25 ಕಾರ್ಮಿಕರು ಮೃತ ದೇಹದ ಜೊತೆಗೆ ಊರಿಗೆ ತಲುಪಲು ವಿಮಾನ ಟಿಕೇಟ್ ಒದಗಿಸಲು ಕಂಪೆನಿ ಒಪ್ಪಿಕೊಂಡಿದೆ ಎಂದು ಮಂಗಳೂರು ಸಿಪಿಐಎಂ ಪ್ರಧಾನ ಕಾರ್ಯರ್ಶಿ ಸುನಿಲ್ ಕುಮಾರ್‌ ಬಜಾಲ್‌ ಹೇಳಿದ್ದಾರೆ.

ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ಅನ್ಯರಾಜ್ಯದ ಕಾರ್ಮಿಕರ ಜೀತಗಾರಿಕೆ ಮಾಡಲಾಗುತ್ತಿದೆ: ಮುನೀರ್ ಕಾಟಿಪಳ್ಳ ಆಕ್ರೋಶ

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ಥಳೀಯ ಯುವಜನರಿಗೆ ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿ ಎಂಬ ಭರವಸೆಯೊಂದಿಗೆ ಮಂಗಳೂರು ಎಸ್ಇಝೆಡ್ ಸ್ಥಾಪನೆ ಮಾಡಲಾಗಿತ್ತು. ಆದರೆ ಅಲ್ಲಿ ನಡೆಯುತ್ತಿರುವುದು ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳ ಅಗ್ಗದ ಕಾರ್ಮಿಕರ ಜೀತಗಾರಿಕೆ” ಎಂದು ಕಿಡಿಕಾರಿದ್ದಾರೆ.

“ಸರಕಾರದ ಮೂಗಿನ ನೇರಕ್ಕೆ ನಡೆಯುವ ಇಂತಹ ಜೀತಗಾರಿಕೆಗೆ ಬಡಪಾಯಿಗಳಾದ ಬಂಗಾಳದ ಐದು ಕಾರ್ಮಿಕರ ಬಲಿಯಾಗಿದೆ. ಉಲ್ಕಾ ಎಂಬ ಮೀನು ಉದ್ಯಮದಲ್ಲಿ ನಡೆದ ಇಂತಹ ಕರುಳು ಹಿಂಡುವ ಅವಘಡಕ್ಕೆ ಕಂಪೆನಿಗೆ ತಾತ್ಕಾಲಿಕ ಬೀಗ ಜಡಿದು, ನಾಲ್ಕು ಸೂಪರ್ ವೈಸರ್ ಗಳನ್ನು ವಶಕ್ಕೆ ಪಡೆದರೆ ಸಾಕೇ..? ಕುಟುಂಬಕ್ಕೆ ನೀಡುವ ಜುಜುಬಿ ದುಡ್ಡು ಇದಕ್ಕೆ ಪರಿಹಾರವೇ..? ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ನೀಡಿ ಈಶಾನ್ಯ ರಾಜ್ಯದ ಕಾರ್ಮಿಕರ ಜೀತಗಾರಿಕೆಗೆ ಅವಕಾಶ ಕೊಟ್ಟ ಜಿಲ್ಲೆಯ ಶಾಸಕ, ಸಂಸದರು, ಜಿಲ್ಲಾಡಳಿತದ ಚುಕ್ಕಾಣಿ ಹಿಡಿದಿರುವ ಅಧಿಕಾರಿಗಳು ಹೊಣೆ ಹೊರಬೇಡವೇ..? ಶಿಕ್ಷೆಗೆ ತಮ್ಮನ್ನು ಒಡ್ಡಿಕೊಳ್ಳಬೇಡವೇ..? ತುಳುನಾಡಿನ ಜನ ಸಮೂಹಕ್ಕೆ ಇದೆಲ್ಲಾ ಅರ್ಥ ಆಗುವುದು ಯಾವಾಗ?” ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...