Homeಕರ್ನಾಟಕಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ದುರಂತ; 5 ಕಾರ್ಮಿಕರ ಸಾವು

ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು, ಇಷ್ಟು ದೊಡ್ಡ ದುರ್ಘಟನೆ ನಡೆದರೂ ಸಂತ್ರಸ್ತರ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಕೂಡಾ ಹೇಳಿಲ್ಲ ಎಂದು ಸ್ಥಳೀಯ ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಮಂಗಳೂರು ಹೊರವಲಯದ ಬಜ್ಪೆಯಲ್ಲಿರುವ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹದ ತೊಟ್ಟಿಯನ್ನು ಸ್ವಚ್ಛ ಮಾಡುತ್ತಿದ್ದಾಗ ದುರಂತ ಸಂಭವಿಸಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ. ಪ್ರಕರಣದ ಸಂಬಂಧ ಸಂಸ್ಥೆಯ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

“ಮೀನು ಸಂಸ್ಕರಣಾ ಘಟಕದ ಮಾಲೀಕರು ಸೇರಿದಂತೆ ನಾಲ್ವರ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯಕ್ಕೆ ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್, ಸೂಪರ್ ವೈಸರ್ ಮುಹಮ್ಮದ್ ಅನ್ವರ್, ಫಾರೂಕ್ ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಶಶಿಕುಮಾರ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳದೇ ಕೆಲಸ ಮಾಡಿಸಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ. ಈ ಬಗ್ಗೆ ಐಪಿಸಿ ಕಲಂ 337, 338, 304 ಹಾಗೂ 34ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

“ಭಾನುವಾರ ಸಂಜೆಯ ವೇಳೆ ಮೀನು ಸಂಸ್ಕರಣಾ ಘಟಕದ ತ್ಯಾಜ್ಯ ಸಂಗ್ರಹ ತೊಟ್ಟಿಯನ್ನು ಸ್ವಚ್ಛ ಗೊಳಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಕುಸಿದು ಬಿದ್ದ ಕಾರಣ ಅಲ್ಲೇ ಇದ್ದ ಇತರ ಏಳು ಮಂದಿ ಕಾರ್ಮಿಕರು ಆತನ ರಕ್ಷಣೆಗೆ ಧಾವಿಸಿದ್ದಾರೆ. ದುರಂತದಲ್ಲಿ ಮೂರು ಮಂದಿ ಭಾನುವಾರ ತಡ ರಾತ್ರಿಯೇ ಸಾವನ್ನಪ್ಪಿದ್ದರೆ, ಇಬ್ಬರು ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೆ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿ ಪರಿಗಣಿಸಲಾಗಿದೆ” ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸೋಮವಾರ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಕಮಿಷನರ್, ಕಂಪೆನಿಯ ಅಧಿಕಾರಿಗಳನ್ನು ತರಾಟೆಗೈದು ಕಾರ್ಖಾನೆಗೆ ಬೀಗ ಜಡಿಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮುಹಮ್ಮದ್‌ ಸಮೀಯಲ್ಲಾ ಇಸ್ಲಾಂ, ಉಮರ್‌ ಫಾರೂಕ್‌, ನಿಝಾಮುದ್ದೀನ್‌ ಆಲಿಸ್, ಮಿರಾಜುಲ್ ಇಸ್ಲಾಂ ಮತ್ತು ಶರಾಫತ್‌ ಅಲಿ ಎಂದು ಗುರುತಿಸಲಾಗಿದೆ. ಮೃತರಲ್ಲಿ ಒಬ್ಬ ಕಾರ್ಮಿಕ ಅಪ್ರಾಪ್ತ ಎಂದು ಹೇಳಲಾಗುತ್ತಿದೆ ಎಂದು ವಾರ್ತಭಾರತಿ ವರದಿ ಮಾಡಿದೆ. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ಕಂಪೆನಿಯಲ್ಲಿ ಕೆಲಸ ಮಾಡುವವರೆಲ್ಲ ಬಹುತೇಕರು ಯುವಕರಾಗಿದ್ದಾರೆ. ಮುಂಬೈ ಮೂಲದ ರಾಜು ಗೋರಕ್ ಎಂಬವರ ಒಡೆತನದ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸಲಾಗಿಲ್ಲ. ಮೃತದೇಹದ ಮೂಗು ಬಾಯಿಯಲ್ಲೂ ಮೀನಿನ ತ್ಯಾಜ್ಯ ಕಂಡು ಬಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ” ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ 

ಶ್ರೀ ಉಲ್ಕಾ ಎಲ್‌ಎಲ್‌ಪಿ ಕಾರ್ಖಾನೆಯು ಮುಂಬೈ ಮೂಲದ ಮೀನು ಸಂಸ್ಕರಣಾ ಕಾರ್ಖಾನೆಯಾಗಿದ್ದು, ಇಲ್ಲಿಂದ ಮೀನು ಸಂಸ್ಕರಣೆಗೊಂಡು ಏಷ್ಯಾದ ವಿವಿಧ ರಾಷ್ಟ್ರಗಳು, ರಷ್ಯಾ ಸೇರಿದಂತೆ ವಿದೇಶ ಹಾಗೂ ದೇಶದ ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತದೆ. ಕಳೆದ ಮೂರು ವರ್ಷಗಳಿಂದ ಈ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದೆ. ನೇರವಾಗಿ ಮತ್ತು ಪರೋಕ್ಷವಾಗಿ ಸುಮಾರು 100 ಮಂದಿ ಕಾರ್ಮಿಕರು ಕಾರ್ಖಾನೆಯಲ್ಲಿ ದುಡಿಯುತ್ತಿದ್ದಾರೆ ಎಂದು ಕಂಪೆನಿಯ ಆಡಳಿತ ವ್ಯವಸ್ಥಾಪಕಿ ಪ್ರಿಯಾ ಎಂಬವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ

ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ದುರ್ಘಟನೆ ನಡೆದಾಗ ಬಿಜೆಪಿ ಶಾಸಕರೊಬ್ಬರು ಸ್ಥಳಕ್ಕೆ ಭೇಟಿ ಕೊಟ್ಟು ಹೋಗಿದ್ದಾರೆ ಆದರೆ ಈ ಬಗ್ಗೆ ಯಾವುದೆ ಹೇಳಿಕೆ ನೀಡಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜಿಲ್ಲೆಯ ಸಂಸದರಾದ ನಳಿನ್ ಕುಮಾರ್‌ ಕಟೀಲ್‌ ಆಗಲಿ, ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್‌ ಆಗಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ, ಮೃತಪಟ್ಟವರ ಕುಟುಂಬಕ್ಕೆ ಸಾಂತ್ವಾನ ಹೇಳಿಲ್ಲ.  ಜಿಲ್ಲೆಯಲ್ಲಿ ಹೆಣ ಬಿದ್ದಕೂಡಲೇ ಬರುತ್ತಿದ್ದ ಯಾವುದೆ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಚುನಾವಣೆಯಲ್ಲಿ ಲಾಭ ಇದ್ದರೆ ಮಾತ್ರ ಅವರು ಬರುತ್ತಾರೆ. ಬೇರೆ ರಾಜ್ಯದ ಕಾರ್ಮಿಕರು ಇಲ್ಲಿ ಬಂದು ಮೃತಪಟ್ಟರೆ ಅವರಿಗಾಗಿ ಅಳಲು ಕೂಡಾ ಜನರು ಇರುವುದಿಲ್ಲ” ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಈ ಮಧ್ಯೆ ಕಾರ್ಮಿಕ ಸಂಘಟನೆಗಳ ಮುಖಂಡರು ತಡರಾತ್ರಿಯವರೆಗೆ ಸತತ ಪ್ರಯತ್ನ ನಡೆಸಿ ಮೃತ ಪಟ್ಟ ಐದು ಬಂಗಾಳಿ ಕಾರ್ಮಿಕರ ಕುಟುಂಬಕ್ಕೆ ಕಂಪೆನಿ ಕಡೆಯಿಂದ ತಲಾ ಹದಿನೈದು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ಕೊಡಿಸಲು ಒಪ್ಪಿಸಿದ್ದಾರೆ. ಅಲ್ಲದೆ ಮೃತ ದೇಹಗಳನ್ನು ಬಂಗಾಳಕ್ಕೆ ತಲುಪಿಸುವುದರ ಜೊತೆಗೆ 25 ಕಾರ್ಮಿಕರು ಮೃತ ದೇಹದ ಜೊತೆಗೆ ಊರಿಗೆ ತಲುಪಲು ವಿಮಾನ ಟಿಕೇಟ್ ಒದಗಿಸಲು ಕಂಪೆನಿ ಒಪ್ಪಿಕೊಂಡಿದೆ ಎಂದು ಮಂಗಳೂರು ಸಿಪಿಐಎಂ ಪ್ರಧಾನ ಕಾರ್ಯರ್ಶಿ ಸುನಿಲ್ ಕುಮಾರ್‌ ಬಜಾಲ್‌ ಹೇಳಿದ್ದಾರೆ.

ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ಅನ್ಯರಾಜ್ಯದ ಕಾರ್ಮಿಕರ ಜೀತಗಾರಿಕೆ ಮಾಡಲಾಗುತ್ತಿದೆ: ಮುನೀರ್ ಕಾಟಿಪಳ್ಳ ಆಕ್ರೋಶ

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ಥಳೀಯ ಯುವಜನರಿಗೆ ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿ ಎಂಬ ಭರವಸೆಯೊಂದಿಗೆ ಮಂಗಳೂರು ಎಸ್ಇಝೆಡ್ ಸ್ಥಾಪನೆ ಮಾಡಲಾಗಿತ್ತು. ಆದರೆ ಅಲ್ಲಿ ನಡೆಯುತ್ತಿರುವುದು ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳ ಅಗ್ಗದ ಕಾರ್ಮಿಕರ ಜೀತಗಾರಿಕೆ” ಎಂದು ಕಿಡಿಕಾರಿದ್ದಾರೆ.

“ಸರಕಾರದ ಮೂಗಿನ ನೇರಕ್ಕೆ ನಡೆಯುವ ಇಂತಹ ಜೀತಗಾರಿಕೆಗೆ ಬಡಪಾಯಿಗಳಾದ ಬಂಗಾಳದ ಐದು ಕಾರ್ಮಿಕರ ಬಲಿಯಾಗಿದೆ. ಉಲ್ಕಾ ಎಂಬ ಮೀನು ಉದ್ಯಮದಲ್ಲಿ ನಡೆದ ಇಂತಹ ಕರುಳು ಹಿಂಡುವ ಅವಘಡಕ್ಕೆ ಕಂಪೆನಿಗೆ ತಾತ್ಕಾಲಿಕ ಬೀಗ ಜಡಿದು, ನಾಲ್ಕು ಸೂಪರ್ ವೈಸರ್ ಗಳನ್ನು ವಶಕ್ಕೆ ಪಡೆದರೆ ಸಾಕೇ..? ಕುಟುಂಬಕ್ಕೆ ನೀಡುವ ಜುಜುಬಿ ದುಡ್ಡು ಇದಕ್ಕೆ ಪರಿಹಾರವೇ..? ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ನೀಡಿ ಈಶಾನ್ಯ ರಾಜ್ಯದ ಕಾರ್ಮಿಕರ ಜೀತಗಾರಿಕೆಗೆ ಅವಕಾಶ ಕೊಟ್ಟ ಜಿಲ್ಲೆಯ ಶಾಸಕ, ಸಂಸದರು, ಜಿಲ್ಲಾಡಳಿತದ ಚುಕ್ಕಾಣಿ ಹಿಡಿದಿರುವ ಅಧಿಕಾರಿಗಳು ಹೊಣೆ ಹೊರಬೇಡವೇ..? ಶಿಕ್ಷೆಗೆ ತಮ್ಮನ್ನು ಒಡ್ಡಿಕೊಳ್ಳಬೇಡವೇ..? ತುಳುನಾಡಿನ ಜನ ಸಮೂಹಕ್ಕೆ ಇದೆಲ್ಲಾ ಅರ್ಥ ಆಗುವುದು ಯಾವಾಗ?” ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....