Homeಕರ್ನಾಟಕಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಅಂಬೇಡ್ಕರ್‌ರವರ ಜನ್ಮದಿನದಂದು ಮಾತನಾಡಿದ್ದ ವಿದ್ಯಾರ್ಥಿಗೆ ಶಿಕ್ಷಕ ಧರ್ಮರಾಜ್‌ ಕೊಲೆ ಬೆದರಿಕೆ ಹಾಕಿದ್ದ ಆಡಿಯೊ ವೈರಲ್ ಆಗಿದೆ.

- Advertisement -
- Advertisement -

ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕಿ ಅಂಬೇಡ್ಕರ್‌ರವರ ವಿಚಾರಗಳಿಗೆ ಅವಮಾನ ಮಾಡಿದ್ದ ಶಿಕ್ಷಕನನ್ನು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಅಮಾನತು ಮಾಡಿದೆ.

ಕುಶಾಲನಗರದ ಅಂತಿಮ ವರ್ಷದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ವಿದ್ಯಾರ್ಥಿ ಅಭಿಲಾಷ್ ಅವರು ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ನಡೆದ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ತಾಲ್ಲೂಕು ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಧರ್ಮರಾಜ್‌ ಕೊಲೆ ಬೆದರಿಕೆ ಹಾಕಿದ್ದು, ವೈರಲ್ ಆಗಿದೆ. ಬಳಿಕ ಶಿಕ್ಷಣ ಇಲಾಖೆ ಕ್ರಮ ಜರುಗಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಭಿಲಾಷ್ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಆಡಿಯೊ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಜೀವ ಭಯದಲ್ಲಿ ಇರುವಂತಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸ್ಥಳ ಮಹಜರು ಮಾಡಿಸಿ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಸಂದರ್ಭದಲ್ಲಿ ವಿದ್ಯಾರ್ಥಿಯು ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರು ನೀಡಲು ನಿರಾಕರಿಸಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಧರ್ಮರಾಜ್‌ ಸರ್ಕಾರಿ ನೌಕರರಾಗಿದ್ದು ಅನುಚಿತ ವರ್ತನೆ ತೋರಿರುವುದರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಧರ್ಮರಾಜ್‌ ಮಾತನಾಡಿರುವುದೇನು?

ಸುಮಾರು ಇಪ್ಪತ್ತು ನಿಮಿಷಗಳ ಕಾಲ ವಿದ್ಯಾರ್ಥಿ ಅಭಿಲಾಷ್‌ ಜೊತೆ ಮಾತನಾಡಿದ್ದ ಧರ್ಮರಾಜ್‌, ಗೌರಿ ಲಂಕೇಶ್‌, ನರೇಂದ್ರ ದಾಬೋಲ್ಕರ್‌, ಎಂ.ಎಂ.ಕಲ್ಬುರ್ಗಿ ಹಾಗೂ ಗೋವಿಂದ ಪಾನ್ಸರೆಯವರು ಹತ್ಯೆಯಾದಂತೆ ನಿನ್ನನ್ನೂ ಹತ್ಯೆ ಮಾಡಲಾಗುತ್ತದೆ ಎಂದು ಹೆದರಿಸಿದ್ದರು.

ಅನಾಮಧೇಯನಾಗಿ ಧಾರವಾಡದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದ ಧರ್ಮರಾಜ್‌, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಚಾರಗಳನ್ನು ಮಾತನಾಡಬೇಡ ಎಂದು ವಿದ್ಯಾರ್ಥಿಗೆ ತಾಕೀತು ಮಾಡಿದ್ದರು. ಜೊತೆಗೆ ‘ನಾನೊಬ್ಬ ಆರ್‌ಎಸ್‌ಎಸ್ ಕಾರ್ಯಕರ್ತ’ ಎಂದು ಒಪ್ಪಿಕೊಂಡಿದ್ದರು.

ಇದನ್ನೂ ಓದಿರಿ: 2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

ಅಂಬೇಡ್ಕರ್‌ ಬೌದ್ಧಕ್ಕೆ ಹೋದರು. ಹಿಂದೂ ಧರ್ಮವನ್ನು ತ್ಯಜಿಸಿದರು. ಅವರ ಬಗ್ಗೆ ಮಾತನಾಡಬಾರದು. ಮುಸ್ಲಿಮರು ಮತ್ತು ದಲಿತರು ದೇಶಕ್ಕೆ ಅಪಾಯಕಾರಿ ಎಂದು ಬೆದರಿಸಿದ್ದರು. ವಿದ್ಯಾರ್ಥಿಯ ವೈಯಕ್ತಿಕ ವಿವರಗಳನ್ನು ಕಲೆಹಾಕಿಕೊಳ್ಳುವಂತೆ ಮಾತನಾಡಿ, ‘ತಾಕತ್ತಿದ್ದರೆ ನೀನು ಇರುವಲ್ಲಿ ನಾಲ್ಕು ಜನ ನಿನ್ನಂಥವರನ್ನು ಹುಟ್ಟಿ ಹಾಕು ನೋಡೋಣ, ಜೈ ಭೀಮ್ ಎಂದು ಕೂಗು ನೋಡೋಣ’ ಎಂದೆಲ್ಲ ಬೆದರಿಸಿದ್ದರು. ಅಭಿಲಾಷ್ ಧೈರ್ಯದಿಂದಲೇ ಮಾತನಾಡಿ, ಅಂಬೇಡ್ಕರ್‌ ಕುರಿತು ನಿಮಗೇಕೆ ಬೇಸರ ಎಂದು ಪ್ರಶ್ನಿಸಿದ್ದರು. ಆಡಿಯೊ ವೈರಲ್ ಆದ ಬಳಿಕ ಧರ್ಮರಾಜ್ ಸಿಕ್ಕಿ ಬಿದ್ದಿದ್ದಾರೆ.

ಎಸ್‌ಸಿ ಸಮುದಾಯಕ್ಕೆ ಸೇರಿದ ಧರ್ಮರಾಜ್‌

ದಲಿತ ಮುಖಂಡರು ಧರ್ಮರಾಜ್ ಅವರಿಂದ ಕ್ಷಮೆ ಯಾಚಿಸಿದ್ದಾರೆ. “ನನ್ನಿಂದ ತಪ್ಪಾಗಿದೆ. ಮತ್ತೆಂದೂ ಈ ರೀತಿಯ ತಪ್ಪು ಮಾಡುವುದಿಲ್ಲ. ನಾನು ಕೂಡ ಪರಿಶಿಷ್ಟ ಜಾತಿಗೆ ಸೇರಿದವನು. ವಿದ್ಯಾರ್ಥಿ ಅಭಿಲಾಷ್ ಅವರಲ್ಲೂ ಕ್ಷಮೆ ಕೋರುತ್ತೇನೆ” ಎಂದು ಧರ್ಮರಾಜ್ ಹೇಳಿದ್ದಾರೆ.

ದಲಿತ ಮುಖಂಡರು ಧರ್ಮರಾಜ್‌ಗೆ ಬುದ್ಧಿ ಹೇಳಿ ಕಳಿಸಿದ್ದಾರೆ. ಶಿಕ್ಷಕನಾಗಿ ಮಾಡಿದ ಅತಾರ್ಚುಕ್ಕೆ ಶಿಕ್ಷಣ ಇಲಾಖೆ ಈಗ ಕ್ರಮ ಜರುಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...