Homeರಾಷ್ಟ್ರೀಯ2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

- Advertisement -
- Advertisement -

ಜಮ್ಮು ಕಾಶ್ಮೀರ ಪೊಲೀಸರು ಇತ್ತೀಚೆಗೆ ರಚಿಸಿದ ರಾಜ್ಯ ತನಿಖಾ ಸಂಸ್ಥೆ(SIA)ಯು ಭಾನುವಾರದಂದು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಪಿಎಚ್‌ಡಿ ವಿದ್ಯಾರ್ಥಿಯನ್ನು ಬಂಧಿಸಿದೆ. 11 ವರ್ಷಗಳ ಹಿಂದೆ ಆನ್‌ಲೈನ್ ಸುದ್ದಿ ನಿಯತಕಾಲಿಕದಲ್ಲಿ ಪ್ರಕಟವಾದ ಲೇಖನಕ್ಕಾಗಿ ವಿದ್ಯಾರ್ಥಿಯನ್ನು ಬಂಧನ ನಡೆದಿದೆ.

2011ರ ನವೆಂಬರ್ 6 ರಂದು ಆನ್‌ಲೈನ್ ಮ್ಯಾಗಜೀನ್ ‘ದಿ ಕಾಶ್ಮೀರ್ ವಾಲಾ’ದಲ್ಲಿ ಪ್ರಕಟವಾದ ಲೇಖನವು ‘ಅತ್ಯಂತ ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ’ ಎಂದು SIA ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಧನಕ್ಕೆ ಒಳಗಾಗಿರುವ ವಿದ್ಯಾರ್ಥಿಯನ್ನು ಅಬ್ದುಲ್ ಆಲಾ ಫಾಜಿಲಿ ಎಂದು ಗುರುತಿಸಲಾಗಿದ್ದು, ಅವರು ಕಾಶ್ಮೀರ ವಿಶ್ವವಿದ್ಯಾನಿಲಯದ ಔಷಧೀಯ ವಿಜ್ಞಾನದಲ್ಲಿ ಡಾಕ್ಟರೇಟ್ ಅಧ್ಯಯನವನ್ನು ನಡೆಸುತ್ತಿದ್ದಾರೆ. ಅವರು ಇನ್ನು ಹದಿನೈದು ದಿನದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಅಲ್ಲದೆ ಅವರು ಮಾರ್ಚ್ 2021 ರವರೆಗೆ ಐದು ವರ್ಷಗಳ ಕಾಲ UGC ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಅನ್ನು ಪಡೆದಿದ್ದರು.

ಇದನ್ನೂ ಓದಿ: 180 ಪದಗಳಲ್ಲಿ; ಮೇಲೇಳದ ಟ್ರುಥ್ ಸೋಶಿಯಲ್; ಶರಣನಾದ ಕಾಶ್ಮೀರಿ ಅರಸ; ಗಾಂಧಿ ಮೇಲಿನ ದೇಶದ್ರೋಹಕ್ಕೆ 100

SIA ಅಧಿಕಾರಿಗಳು ಪಿಎಚ್‌ಡಿ ವಿದ್ಯಾರ್ಥಿ ಫಾಜಿಲಿ ಮತ್ತು ಈಗಾಗಲೇ ಜೈಲಿನಲ್ಲಿರುವ ‘ದಿ ಕಾಶ್ಮೀರ್ ವಾಲಾ’ ಸಂಪಾದಕ ಫಹಾದ್ ಶಾ ಅವರ ನಿವಾಸಗಳು ಮತ್ತು ಮ್ಯಾಗಜೀನ್‌ನ ಕಚೇರಿ ಆವರಣದ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ. ಆಪಾದಿತ ‘ದೇಶದ್ರೋಹಿ’ ಲೇಖನಕ್ಕಾಗಿ ಫಾಜಿಲಿ, ಫಹದ್‌‌ ಮತ್ತು ಇತರ ಸಹಚರರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಈ ಹುಡುಕಾಟಗಳು ನಡೆದಿವೆ ಎಂದು SIA ತಿಳಿಸಿದೆ.

ಫಹದ್‌ ಅವರನ್ನು ಮಾರ್ಚ್ 14 ರಂದು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿತ್ತು‌. ಅವರು ಇದಕ್ಕೂ ಮೊದಲು ನ್ಯಾಯಾಲಯಗಳಿಂದ ಎರಡು ಬಾರಿ ಜಾಮೀನು ಪಡೆದು ಹೊರಬಂದಿದ್ದರು. ಫೆಬ್ರವರಿ 4 ರಂದು ದಕ್ಷಿಣ ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯ ಕುರಿತು ಅವರ ವೆಬ್‌ಸೈಟ್‌ನಲ್ಲಿ ವರದಿ ಮಾಡಿದ್ದಕ್ಕಾಗಿ ಅವರನ್ನು ಮೊದಲ ಬಾರಿಗೆ ಬಂಧಿಸಲಾಗಿತ್ತು.

ಈ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ತಮ್ಮ ಮಗ ಉಗ್ರಗಾಮಿ ಅಲ್ಲ ಎಂದು ಕುಟುಂಬ ಸದಸ್ಯರು ಹೇಳಿರುವುದನ್ನು ಉಲ್ಲೇಖಿಸಿತ್ತು. ಪ್ರಕರಣದಲ್ಲಿ ಅವರು ನ್ಯಾಯಾಲಯದಿಂದ ಜಾಮೀನು ಹೊರ ಬಂದಾಗ, ಮ್ಯಾಗಜೀನ್‌ನಲ್ಲಿ ಮಾಡಿದ್ದ ಮತ್ತೊಂದು ವರದಿಗಾಗಿ ಶೋಪಿಯಾನ್‌ನಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿ, ಅವರನ್ನು ಮತ್ತೊಮ್ಮೆ ಬಂಧಿಸಲಾಯಿತು. ಎರಡನೇ ಬಾರಿಯು ಅವರು ಜಾಮೀನು ಪಡೆದಾಗ, ಪೊಲೀಸರು ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

‘ಗುಲಾಮಗಿರಿಯ ಸಂಕೋಲೆಗಳು ಒಡೆಯುತ್ತವೆ’ ಎಂಬ ಶೀರ್ಷಿಕೆಯ ಲೇಖನವು ಒಂದು ಕಡೆ ಹೆಚ್ಚು ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದ್ದು, ಭಯೋತ್ಪಾದನೆಯನ್ನು ವೈಭವೀಕರಿಸುವ ಮೂಲಕ ಹಿಂಸಾಚಾರದ ಹಾದಿಯನ್ನು ಹಿಡಿಯಲು ಯುವಕರನ್ನು ಪ್ರೇರೇಪಿಸುವ ಉದ್ದೇಶದಿಂದ ಬರೆಯಲಾಗಿದೆ. ಮತ್ತೊಂದೆಡೆ, ಈ ಬರಹವು ಸುಳ್ಳು ನಿರೂಪಣೆಯನ್ನು ಪ್ರೇರೇಪಿಸಿ ಪ್ರಚಾರ ಮಾಡಿದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಮುರಿಯುವ ಉದ್ದೇಶದಿಂದ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಅಭಿಯಾನವನ್ನು ಪ್ರಚೋದಿಸಿದೆ ಎಂದು” ಎಂದು SIA ಹೇಳಿಕೆಯಲ್ಲಿ ತಿಳಿಸಿದೆ.

ನಾಗರಿಕ ಪ್ರತಿಭಟನಾಕಾರರ ಮೇಲೆ ನಡೆದ ಬಲಪ್ರಯೋಗವನ್ನು ಖಂಡಿಸಿ ಹಲವಾರು ದೂರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 2016 ರ ಬೀದಿ ಪ್ರತಿಭಟನೆಯ ಸಮಯದಲ್ಲಿ ಫಾಜಿಲಿ ಬೆಳಕಿಗೆ ಬಂದರು. ಐದು ವರ್ಷಗಳ ಹಿಂದೆಯೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅವರನ್ನು ವಿಚಾರಣೆಗೆ ಕರೆದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...