Homeರಾಷ್ಟ್ರೀಯಅಕ್ರಮ ದನಸಾಗಾಟ ಆರೋಪದಲ್ಲಿ ಬಂಧಸಿದ್ದ ಆರೋಪಿಗಳನ್ನು ಹತ್ಯೆ ಮಾಡಿದ ಅಪರಿಚಿತರು!

ಅಕ್ರಮ ದನಸಾಗಾಟ ಆರೋಪದಲ್ಲಿ ಬಂಧಸಿದ್ದ ಆರೋಪಿಗಳನ್ನು ಹತ್ಯೆ ಮಾಡಿದ ಅಪರಿಚಿತರು!

- Advertisement -
- Advertisement -

ಜಾನುವಾರುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಕಳೆದ ವಾರ ಉತ್ತರ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು. ಆದರೆ ಇಬ್ಬರು ಆರೋಪಿಗಳನ್ನು ತನಿಖೆಯಾಗಿ ಅಸ್ಸಾಂಗೆ ಕರೆದೊಯ್ಯುತ್ತಿದ್ದಾಗ ಅಪರಿಚಿತರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಮಾರ್ಗಗಳನ್ನು ಪತ್ತೆಹಚ್ಚಲು ಮಂಗಳವಾರದಂದು ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಕರೆದೊಯ್ಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಪೊಲೀಸ್ ವಾಹನಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಕೋಶ್ ನದಿಯುದ್ದಕ್ಕೂ ಸಾಗಾಣಿಕೆ ಮಾರ್ಗಗಳನ್ನು ಗುರುತಿಸಲು ಆರೋಪಿಗಳನ್ನು ಕೊಕ್ರಜಾರ್‌ ಜಿಲ್ಲೆಯ ಜಮ್ದುವಾರ್‌ ಪ್ರದೇಶಕ್ಕೆ ಕರೆದೊಯ್ಯುತ್ತಿದ್ದಾಗ ಮಧ್ಯರಾತ್ರಿ 1:15 ರ ಸುಮಾರಿಗೆ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ: ಆದಿತ್ಯನಾಥ್‌‌ ವಿರುದ್ದ ಹೇಳಿಕೆ ನೀಡಿದ್ದಾರೆಂದು ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಎಸ್‌ಪಿ ಶಾಸಕರ ಪೆಟ್ರೋಲ್ ಪಂಪ್ ಕೆಡವಿದ ಅಧಿಕಾರಿಗಳು

“ಇಬ್ಬರನ್ನು ಕರೆದೊಯ್ಯತ್ತಿದ್ದ ವಾಹನವು ಜಮ್ದುವಾರ್ ಬಳಿ ‘ಉಗ್ರರ ಹೊಂಚುದಾಳಿಗೆ ಒಳಗಾಯಿತು’. ಹೀಗಾಗಿ ಪೊಲೀಸ್‌ ಸಿಬ್ಬಂದಿ ‘ಉಗ್ರರ’ ಮೇಲೆ ಪ್ರತಿದಾಳಿ ನಡೆಸಲು ಸುರಕ್ಷಿತ ಸ್ಥಳಕ್ಕಾಗಿ ಕಾರಿನಿಂದ ಜಿಗಿದಿದ್ದಾರೆ. ಆದರೆ, ಬಂಧಿತ ಆರೋಪಿಗಳು ಕಾರಿನಿಂದ ಹೊರಬರಲು ವಿಫಲರಾಗಿದ್ದು, ಅವರ ಮೇಲೆ ಗುಂಡಿನ ದಾಳಿಯಾಗಿದೆ” ಎಂದು ಪೋಲೀಸರು ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ಮರಗಳನ್ನು ಕಡಿದು ರಸ್ತೆ ತಡೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣೆ ಪಡೆದ ನಂತರ, ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿದರು ಮತ್ತು ಎರಡು ಕಡೆಯವರ ನಡುವೆ 10-12 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ.

ಮೃತರಾದ ಅಕ್ಬರ್ ಬಂಜಾರಾ ಮತ್ತು ಸಲ್ಮಾನ್ ಅವರನ್ನು ಮೀರತ್ ಪೊಲೀಸರು ಏಪ್ರಿಲ್ 13 ರಂದು ಬಂಧಿಸಿ ಅಸ್ಸಾಂ ಪೊಲೀಸರಿಗೆ ಹಸ್ತಾಂತರಿಸಿದ್ದರು. ಆರೋಪಿಗಳಿಬ್ಬರು ಮೀರತ್‌ನ ಫಲವಾಡ ಪ್ರದೇಶದ ನಿವಾಸಿಗಳಾಗಿದ್ದು, ಅವರ ವಿರುದ್ದ ಮೀರತ್ ಮತ್ತು ಕೊಕ್ರಜಾರ್ ಜಿಲ್ಲೆಗಳಲ್ಲಿ ಜಾನುವಾರು ಕಳ್ಳಸಾಗಣೆ ಪ್ರಕರಣಗಳನ್ನು ದಾಖಲಾಗಿತ್ತು. ಅಸ್ಸಾಂ ಪೊಲೀಸರ ತುಕಡಿ ಮೀರತ್‌ಗೆ ಬಂದು ವಾರಂಟ್ ಸಲ್ಲಿಸಿದ ನಂತರ ಅವರನ್ನು ಕಸ್ಟಡಿಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಅಕ್ಬರ್ ಬಂಧನಕ್ಕೆ ಅಸ್ಸಾಂ ಪೊಲೀಸರು 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು. ಬಹುಮಾನದ ಹಣವನ್ನು ಮೀರತ್ ಪೊಲೀಸರಿಗೆ ಅವರ ಅಸ್ಸಾಂ ಸಹವರ್ತಿಗಳಿಂದ ಹಸ್ತಾಂತರಿಸಲಾಗಿದೆ ಎಂದು ಯುಪಿ ಪೊಲೀಸರು ಏಪ್ರಿಲ್ 15 ರಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಕೊಕ್ರಜಾರ್ ಜಿಲ್ಲೆಯ ಗೊಸ್ಸೈಗಾಂವ್ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಜಾನುವಾರು ಕಳ್ಳಸಾಗಣೆದಾರರು ಸಾವನ್ನಪ್ಪಿದ್ದಾರೆ. ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ನಾವು ಸ್ಥಳದಿಂದ ಒಂದು ಎಕೆ ಸಿರೀಸ್ ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದೇವೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಕೊಕ್ರಜಾರ್‌ ಎಸ್ಪಿ ತುಬೆ ಪ್ರತೀಕ್ ವಿಜಯ್ಕುಮಾರ್ ತಿಳಿಸಿದ್ದಾರೆ.

“ಯಾವುದೇ ಅಪಾಯವಿಲ್ಲ ಎಂದು ಗ್ರಹಿಸಿದ ನಂತರ, ಪೊಲೀಸರು ಗಾಯಗೊಂಡ ಆರೋಪಿಗಳನ್ನು ವಾಹನದಿಂದ ಹೊರತೆಗೆದು ಮತ್ತೊಂದು ವಾಹನದಲ್ಲಿ ಸರೈಬಿಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ಸಾವಿಗೀಡಾಗಿದ್ದಾರೆ ಎಂದು ಅಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಘೋಷಿಸಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ಗಳ ಪ್ರಯಾಣಕ್ಕೆ ಆಂಬುಲೆನ್ಸ್ ಬಳಕೆ: ಯುಪಿ ಬಿಜೆಪಿ ನಾಯಕಿಯ ಬಂಧನ

ಸ್ಥಳದಿಂದ ಒಂದು ಎಕೆ-47 ರೈಫಲ್, ಎರಡು ಮ್ಯಾಗಜೀನ್‌ಗಳು, 35 ಸುತ್ತಿನ ಜೀವಂತ ಮದ್ದುಗುಂಡುಗಳು ಮತ್ತು 28 ಸುತ್ತುಗಳ ಖಾಲಿ ಬುಲೆಟ್ ಶೆಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Yes. It looks like a fake encounter and framed a story. Any unrighteous act will not go unpunished. For that need to observe that person or his family for some time, you can see how they are punished by God. Most of the people do not observe this truth. 🙄

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...