Homeಕರ್ನಾಟಕಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

- Advertisement -
- Advertisement -

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಯೋಜನೆಗಳು, ಒಳಚರಂಡಿ ದುರಸ್ತಿ, ನೀರಾವರಿ ಮತ್ತು ಇತರ ಸಿವಿಲ್ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಅಧಿಕೃತ ಅಂಕಿ-ಅಂಶಗಳು ತೆರೆದಿಟ್ಟಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ನಿಗದಿಯಾದ ಹಣ ಇದಾಗಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕಡ್ಡಾಯವಾಗಿ ಖರ್ಚು ಮಾಡಬೇಕಾದ ಹಣ, ಇತರ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಬಳಸಿದೆ. 2018 ಮತ್ತು 2021ರ ನಡುವೆ, ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ತಮ್ಮ ಯೋಜನೆಗಳಿಗೆ SCSP-TSP ನಿಧಿಯನ್ನು ಬಳಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯಿದೆಯಡಿಯಲ್ಲಿ ಶೇ. 14.84 ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಕಾನೂನಿನ ಸಮಸ್ಯಾತ್ಮಕ ಭಾಗವೆಂದರೆ ಸೆಕ್ಷನ್ 7 (ಡಿ). ಇದರ ಅಡಿಯಲ್ಲಿ ಬೇರೆ ಬೇರೆ ಕಾಮಗಾರಿಗಳಿಗೆ ಹಣ ಹೋಗುತ್ತಿದೆ.

“ಕಾಯ್ದೆಯ ಸೆಕ್ಷನ್‌ 7ಡಿ ಕಾಲಂ ತೆಗೆದು ಹಾಕಬೇಕಿದೆ ಎಂಬ ಆಗ್ರಹ ಮೊದಲಿನಿಂದಲೂ ಇದೆ. ನೀರಾವರಿ ಯೋಜನೆಗಳಿಗೆ ಪರಿಶಿಷ್ಟರ ಹಣ ವಿನಿಯೋಗಿಸುವಾಗ ಏನು ಹೇಳುತ್ತಾರೆ? ಈ ನೀರು ಎಸ್‌ಟಿ, ಎಸ್‌ಟಿಗಳ ಹೊಲಗಳಿಗೂ ಹೋಗುತ್ತದೆ ಎಂದಲ್ಲವೇ? ಎಸ್‌ಸಿ, ಎಸ್‌ಟಿಗಳ ಹೊಲಗಳನ್ನು ಸುಲಭವಾಗಿ ಗುರುತಿಸಬಹುದಲ್ಲ? ಸಾವಿರ ಎಕರೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಜಮೀನು ಸುಮಾರು 40 ಎಕರೆ ಇದ್ದರೆ, ಅಷ್ಟು ಜಾಗಕ್ಕೆ ಎಷ್ಟು ಹಣ ಬೇಕಾಗುತ್ತದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕಲ್ಲವೇ?” ಎಂಬುದು ದಲಿತ ನಾಯಕರ ಆಗ್ರಹ.

ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸೆಕ್ಷನ್‌ 7 (ಡಿ) ಅಡಿಯಲ್ಲಿ ಎಷ್ಟು ಹಣ ಹೋಗುತ್ತಿದೆ ಎಂಬ ಸ್ಪಷ್ಟತೆ ಇಲ್ಲ. ಉಪಯೋಜನೆಯ ಹಣದಲ್ಲಿ ನಾವು ಕುಡಿಯುವ ನೀರು ಅಥವಾ ರಸ್ತೆಗಳನ್ನು ಒದಗಿಸಿದರೆ, ಅದು ಎಲ್ಲರಿಗೂ ಉಪಯೋಗವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಡೆಕ್ಕನ್‌ ಹೆರಾಲ್ಡ್‌ಗೆ ತಿಳಿಸಿದ್ದಾರೆ.

ಸೆಕ್ಷನ್‌ 7(ಡಿ) ನಿಬಂಧನೆಯು ಸಮಸ್ಯಾತ್ಮಕವಾಗಿದೆ. ಬಿಜೆಪಿಯ ಸ್ವಂತ ಎಸ್‌ಸಿ, ಎಸ್‌ಟಿ ಶಾಸಕರಾದ ಪಿ ರಾಜೀವ್, ಎನ್‌ವೈ ಗೋಪಾಲಕೃಷ್ಣ, ಎಂಪಿ ಕುಮಾರಸ್ವಾಮಿ ಮತ್ತು ಇತರರು ವಿರೋಧಿಸಿದ್ದಾರೆ ಎಂದು ಕಾರಜೋಳ ತಿಳಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆರ್ಥಿಕ ವರ್ಷದಲ್ಲಿ ಉಪಯೋಜನೆಯಡಿ 28,234 ಕೋಟಿ ರೂ.ಗಳನ್ನು ನೀಡಿದ್ದಾರೆ.

“ಉಪಯೋಜನೆ ಹಣದಲ್ಲಿ ಸಂಪೂರ್ಣ ಮೇಲ್ಸೇತುವೆ ನಿರ್ಮಿಸಿ ನಂತರ ಎಸ್‌ಸಿ/ಎಸ್‌ಟಿಗಳು ಸಹ ಅದನ್ನು ಬಳಸುತ್ತಾರೆ ಎಂದು ಹೇಳುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸಿ ಎಸ್ಟಿ ಅನುದಾನ ಎಲ್ಲರಿಗೂ ಬಳಕೆ ಯಾಗುತ್ತದೆ ಎಂದಾಗ ಕೇವಲ ನಾಮಕಾವಸ್ಥೆಗಾಗಿ ಯಾಕೆ ಎಸಿ, ಎಸ್ಟಿ ಹೆಸರಲ್ಲಿ ಅನುದಾನವನ್ನು ಮೀಸಲು ಇಡ್ತೀರಿ…. ಈ ರೀತಿ ಮಾಡಿದಾಗ ಅಷ್ಪ್ರಶ್ಯರು ಬಡತನ ರೇಖೆಯಿಂದ ಮೇಲೆ ಬರೋದು ಯಾವಾಗ…? ಕಾನೂನಿನ ದುರ್ಬಳಕೆಯಾಗಿಲ್ಲವೇ…ವಿರೋಧ ಪಕ್ಷಗಳು ಸಹ ಹೊಣೆಯಲ್ಲವೇ…?

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...