Homeರಾಷ್ಟ್ರೀಯಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ...

ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

- Advertisement -
- Advertisement -

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಗುಜರಾತ್‌ನ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ್ದಾರೆ ಎಂದು ಶಾಸಕರ ತಂಡದ ಹೇಳಿಕೆ ತಿಳಿಸಿದೆ. ಬಂಧನದ ನಂತರ ಅವರನ್ನು ಅಸ್ಸಾಂಗೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ್ದಾರೆ. ಪೊಲೀಸರು ಇನ್ನೂ ಎಫ್‌ಐಆರ್ ಪ್ರತಿಯನ್ನು ನಮಗೆ ನೀಡಿಲ್ಲ. ಅವರ ವಿರುದ್ಧ ಅಸ್ಸಾಂನಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳ ಬಗ್ಗೆ ನಮಗೆ ತಿಳಿಸಲಾಗಿದೆ. ಇಂದು ರಾತ್ರಿ ಅವರನ್ನು ಅಸ್ಸಾಂಗೆ ಕರೆದೊಯ್ಯವ ಸಾಧ್ಯತೆಯಿದೆ” ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

“ಮೇವಾನಿ ಅವರನ್ನು ಬುಧವಾರ ರಾತ್ರಿ 11.30ರ ಸುಮಾರಿಗೆ ಪಾಲನ್‌ಪುರದ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿ ಅಹಮದಾಬಾದ್‌ಗೆ ಕರೆದೊಯ್ಯಲಾಗಿದೆ. ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿದ್ದಕ್ಕೆ ಅಸ್ಸಾಂನ ಬಿಜೆಪಿ ನಾಯಕರೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇಲೆ ಅವರನ್ನು ಬಂಧಿಸಲಾಗಿದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸ್ಸಾಂನ ಕೊಕ್ರಜಾರ್‌ನ ಬಿಜೆಪಿ ನಾಯಕ ಅರೂಪ್ ಕುಮಾರ್ ಡೇ ಎಂಬವರು ಮೇವಾನಿ ವಿರುದ್ಧ ದೂರು ದಾಖಲಿಸಿದ್ದರು. ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಸಂಬಂಧಿಸಿದ ಅಪರಾಧ ಮಾಡಿದ್ದಾರೆ ಎಂದು ಎಫ್‌ಐಆರ್‌‌ ಆರೋಪಿಸಿದೆ ಎಂದು ವರದಿ ಹೇಳಿದೆ.

“ಅಸ್ಸಾಂ ಪೊಲೀಸ್ ಅಧಿಕಾರಿಗಳು ಹಂಚಿಕೊಂಡ ದಾಖಲೆಯ ಪ್ರಕಾರ, ಕೆಲವು ದಿನಗಳ ಹಿಂದೆ ಮೇವಾನಿ ಅವರು ನಾಥುರಾಮ್ ಗೋಡ್ಸೆ ಬಗ್ಗೆ ಮಾಡಿದ ಟ್ವೀಟ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಟ್ವೀಟ್ ಅನ್ನು ಟ್ವಿಟರ್ ತಡೆಹಿಡಿದಿದೆ. ಮೇವಾನಿ ಅವರನ್ನು ಮೊದಲು ರಸ್ತೆಯ ಮೂಲಕ ಅಹಮದಾಬಾದ್‌ಗೆ ಕರೆತರಲಾಯಿತು. ನಂತರ ಇಂದು ಮುಂಜಾನೆ ವಿಮಾನದ ಮೂಲಕ ಅಸ್ಸಾಂಗೆ ಕರೆದೊಯ್ಯಲಾಯಿತು” ಎಂದು ಮೇವಾನಿ ಅವರ ಆಪ್ತ ಸುರೇಶ್ ಜಾಟ್ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ 8 ವರ್ಷಗಳ ಅಧಿಕಾರಾವಧಿಯಲ್ಲಿ ವಿಫಲರಾಗಿದ್ದಾರೆ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ಬಂಧನದ ವಿಚಾರ ತಿಳಿಯುತ್ತಿದ್ದಂತೆ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಮತ್ತು ಇತರ ಕಾಂಗ್ರೆಸ್ ನಾಯಕರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಧಾವಿಸಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಗುಜರಾತ್‌ನ ವಡ್ಗಾಮ್‌ನ ಶಾಸಕರಾಗಿರುವ ಜಿಗ್ನೇಶ್‌ ಮೇವಾನಿ ದಲಿತ ಹಕ್ಕುಗಳ ಹೋರಾಟಗಾರ ಮತ್ತು ರಾಷ್ಟ್ರೀಯ ದಲಿತ ಅಧಿಕಾರ ಮಂಚ್‌ನ ಸಂಚಾಲಕರೂ ಆಗಿದ್ದಾರೆ. ಅವರು ಕಳೆದ ವರ್ಷ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....