Homeಅಂಕಣಗಳುಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

ಬಹುಜನ ಭಾರತ; ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

- Advertisement -
- Advertisement -

ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಅಧಿಕಾರ ಸೂತ್ರವನ್ನು ಇತ್ತೀಚೆಗೆ ಎರಡನೆಯ ಬಾರಿಗೆ ಹಿಡಿದರು ಯೋಗಿ ಆದಿತ್ಯನಾಥ. ತುಸು ಮುನ್ನ ನಡೆದ ಚುನಾವಣಾ ಪ್ರಚಾರದಲ್ಲಿ ಆದಿತ್ಯನಾಥರನ್ನು ಬುಲ್ಡೋಜರ್ ಬಾಬಾ ಎಂದು ಮೂದಲಿಸಿತ್ತು ಸಮಾಜವಾದಿ ಪಾರ್ಟಿ. ಈ ಮೂದಲಿಕೆಯನ್ನೇ ತನ್ನ ಅನುಕೂಲಕ್ಕೆ ತಿರುಗಿಸಿಕೊಂಡಿತು ಬಿಜೆಪಿ. ಪಾತಕಿಗಳ ಅಕ್ರಮ ಆಸ್ತಿಪಾಸ್ತಿಗಳ ಮೇಲೆ ಬುಲ್ಡೋಜರ್ ಚಲಾಯಿಸುವವರು ಎಂದು ಯೋಗಿಯನ್ನು ಬಣ್ಣಿಸಿ ಪ್ರಚಾರ ಮಾಡಿತು.

ಅವರ ಕೋಮುವಾದಿ ಮುಸ್ಲಿಮ್ ದ್ವೇಷೀ ಧ್ರುವೀಕರಣ ಆಡಳಿತ ವೈಖರಿಯ ಅನುಕರಣೆಗೆ ಇಳಿದಿದ್ದಾರೆ ಅವರದೇ ಪಕ್ಷದ ಹಲವು ಮುಖ್ಯಮಂತ್ರಿಗಳು. ಈ ಪೈಕಿ ಮಧ್ಯಪ್ರದೇಶದ ಶಿವರಾಜಸಿಂಗ್ ಚೌಹಾಣ್ ಪ್ರಮುಖರು.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆಂದು ದೇಣಿಗೆ ಸಂಗ್ರಹಿಸಲು ಉಜ್ಜಯಿನಿ ಮತ್ತು ಇಂದೋರಿನ ರ್‍ಯಾಲಿಗಳ ಮೇಲೆ ಮುಸಲ್ಮಾನ ಬಹುಳ ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆದಿತ್ತು. ಆನಂತರ, ಕಲ್ಲು ತೂರುವವರನ್ನು ಶಿಕ್ಷಿಸುವುದೇ ಅಲ್ಲದೆ ಅವರಿಂದ ನಷ್ಟ ಪರಿಹಾರವನ್ನೂ ವಸೂಲು ಮಾಡುವ ಉತ್ತರಪ್ರದೇಶ ಮಾದರಿಯ ಕಾಯಿದೆಯನ್ನು ಕಳೆದ ವರ್ಷ ಜಾರಿಗೆ ತರಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ದೀಪಾವಳಿಯಂದು ಉತ್ತರಪ್ರದೇಶದ ಯೋಗಿ ಸರ್ಕಾರ ಆಯೋಧ್ಯೆಯ ಸರಯೂ ನದೀ ತೀರದಲ್ಲಿ ಲಕ್ಷ ಲಕ್ಷ ದೀಪ ಬೆಳಗಿಸಿ ವಿಶ್ವದಾಖಲೆ ಸ್ಥಾಪಿಸಿತು. ಶಿವರಾಜಸಿಂಗ್ ಅವರು ತಮ್ಮ ರಾಜ್ಯದ ಉಜ್ಜಯಿನಿಯ ಶಿಪ್ರಾ ನದೀ ತೀರದಲ್ಲಿ ಇಂತಹುದೇ ಭವ್ಯ ದೀಪೋತ್ಸವವನ್ನು ನಡೆಸಿದರು. ತಾವು ಖುದ್ದು ಹಾಜರಿದ್ದರು.

ಆದಿತ್ಯನಾಥ್ ಸರ್ಕಾರ ಲವ್ ಜಿಹಾದ್ ಕಾಯಿದೆ ಎಂದೇ ಕರೆಯಲಾದ ಮತಾಂತರ ನಿಷೇಧ ಕಾಯಿದೆ ಜಾರಿಗೆ ತಂದಿತು. ಮಧ್ಯಪ್ರದೇಶ ಅದೇ ಹಾದಿಯಲ್ಲಿ ನಡೆಯಿತು. ಕರ್ನಾಟಕದ ಬಿಜೆಪಿ ಸರ್ಕಾರದ ದಿಕ್ಕು ದೆಸೆಗಳಲ್ಲೂ ಹೆಚ್ಚು ವ್ಯತ್ಯಾಸ ಇಲ್ಲ.

ಆದಿತ್ಯನಾಥ್ ’ಬುಲ್ಡೋಜರ್ ಬಾಬಾ’ ಎಂದು ಕರೆಯಿಸಿಕೊಂಡರೆ, ಶಿವರಾಜ್ ಬುಲ್ಡೋಜರ್ ಮಾಮಾ ಎಂಬ ಅಭಿದಾನ ತಮಗೆ ಗಟ್ಟಿಯಾಗಿ ಅಂಟಲೆಂದು ಬಯಸಿದ್ದಾರೆ. ಮುಸಲ್ಮಾನರ ’ಅಕ್ರಮ’ ಮನೆಗಳು ಮತ್ತು ಅಂಗಡಿಗಳ ಮೇಲೆ ಅವರ ಆಡಳಿತ ನಿರ್ದಯೆಯಿಂದ ಬುಲ್ಡೋಜರ್ ಹರಿಸುತ್ತಿದೆ. ಈ ಮಾತಿಗೆ ಖರ್ಗೋನ್ ಪ್ರಕರಣ ಇತ್ತೀಚಿನ ನಿದರ್ಶನ.

ಈ ಹಿಂದಿನ ತಮ್ಮ ಆಡಳಿತಾವಧಿಗಳಲ್ಲಿ ಅವರ ಆಡಳಿತ ವೈಖರಿ ಕೋಮು ಸಾಮರಸ್ಯವನ್ನು ಕದಡಿರಲಿಲ್ಲ. ಬದಲಾಗಿ ಮುಸಲ್ಮಾನರೂ ಈ ಬಿಜೆಪಿ ಮುಖ್ಯಮಂತ್ರಿಯನ್ನು ಇಷ್ಟಪಡುತ್ತಿದ್ದರು ಮತ್ತು ಅವರ ಪರವಾಗಿ ಮತ ಚಲಾಯಿಸುತ್ತಿದ್ದುದೂ ಉಂಟು. ಅದೊಂದು ಕಾಲವಿತ್ತು. ಮುಖ್ಯಮಂತ್ರಿ ಶಿವರಾಜ್ ಸರ್ಕಾರಿ ನಿವಾಸದಲ್ಲಿ ಕ್ರಿಸ್ಮಸ್ ಆಚರಿಸಲಾಗುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಏಕೈಕ ಮಹಿಳಾ ಮುಸಲ್ಮಾನ ಅಭ್ಯರ್ಥಿ ಫಾತಿಮಾ ಸಿದ್ದೀಖಿ ನಾಮಪತ್ರ ಸಲ್ಲಿಸಲು ತೆರಳಿದಾಗ ಖುದ್ದು ಮುಖ್ಯಮಂತ್ರಿಯೇ ಆಕೆಯ ಜೊತೆಗೆ ತೆರಳಿದ್ದರು.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಕೇವಲ ಒಂದೂವರೆ ವರ್ಷ ದೂರದಲ್ಲಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ತಮ್ಮ ಕುರ್ಚಿಯನ್ನೂ ಭದ್ರಪಡಿಸಿಕೊಳ್ಳಬೇಕಿದೆ ಶಿವರಾಜಸಿಂಗ್. ಉತ್ತರಪ್ರದೇಶದಲ್ಲಿ ಯೋಗಿಯವರ ಕಟ್ಟರ್ ಹಿಂದುತ್ವ ಫಲ ನೀಡಿದೆ ಎಂಬುದು ಅವರ ಗಟ್ಟಿ ನಂಬಿಕೆ. ಅದೇ ವರ್ಚಸ್ಸನ್ನು ಆಲಿಂಗಿಸಿ ಧರಿಸಿದ್ದಾರೆ. ಬುಲ್ಡೋಜರ್ ರೂಪಕವನ್ನು ಯೋಗಿಯವರಿಂದ ಎರವಲು ಪಡೆದಿದ್ದಾರೆ.

ಜ್ಯೋತಿರಾದಿತ್ಯ ಸಿಂಧ್ಯ ಅವರಂತಹ ಕಾಂಗ್ರೆಸ್ಸಿಗರ ನೆರವಿನಿಂದಲೇ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ಪುನಃ ಬಿಜೆಪಿಯನ್ನು ಅಧಿಕಾರಕ್ಕೆ ತಂದರು ಅಮಿತ್ ಶಾ. 2018ರಲ್ಲಿ ಸೋತ ಶಿವರಾಜ್ ಅವರಿಗೆ
ಮುಖ್ಯಮಂತ್ರಿಯಾಗಿ ಮತ್ತೊಂದು ಅವಕಾಶ ಸಿಕ್ಕಿತ್ತು. ಒಂದು ಕಾಲಕ್ಕೆ ನರೇಂದ್ರ ಮೋದಿ ಅವರಿಗೆ ಪೈಪೋಟಿ ಒಡ್ಡಿದ್ದ ಕಾರಣಕ್ಕೆ ಶಾ-ಮೋದಿ ಅವರ ಸರ್ವಶಕ್ತ ಜೋಡಿ ಶಿವರಾಜರನ್ನು ದೂರವೇ ಇರಿಸಿದೆ. 2023ರ ಡಿಸೆಂಬರ್ ಚುನಾವಣೆಯಲ್ಲಿ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಒಲ್ಲರು ಶಿವರಾಜ್. ಕಳೆದ ಮಾರ್ಚ್ 23ರಂದು ಎರಡು ವರ್ಷಗಳ ಆಡಳಿತಾವಧಿ ಪೂರೈಸಿದರು. ಬೆಂಬಲಿಗರು ಅವರನ್ನು ಬುಲ್ಡೋಜರ್ ಮಾಮಾ ಎಂದು ಕರೆದು ಸನ್ಮಾನಿಸಿದರು. ಈ ಬಿರುದಿನ ಭಿತ್ತಿಪತ್ರಗಳು ರಾಜ್ಯದ ತುಂಬೆಲ್ಲ ರಾರಾಜಿಸಿದವು.

ರಾಮೇಶ್ವರ ಶರ್ಮಾ ಎಂಬ ಬಿಜೆಪಿ ಶಾಸಕರೊಬ್ಬರು ತಮ್ಮ ಸರ್ಕಾರಿ ಬಂಗಲೆಯ ಮುಂದೆ ಸಾಲುಸಾಲಾಗಿ ಬುಲ್ಡೋಜರುಗಳನ್ನು ನಿಲ್ಲಿಸಿದರು. ನಮ್ಮ ಹೆಣ್ಣುಮಕ್ಕಳ ಮೇಲೆ ಕಣ್ಣು ಹಾಕುವವರನ್ನು ಹೊಸಕಿ ಹಾಕುವುದು ಮಾಮಾನ ಬುಲ್ಡೋಜರ್ ಎಂಬ ಅರ್ಥದ ದೊಡ್ಡ ಬಿತ್ತಿಪತ್ರವನ್ನು ಬರೆಯಿಸಿ ನಿಲ್ಲಿಸಿದರು.

ಈ ವಿದ್ಯಮಾನಕ್ಕೆ ತುಸು ಮುನ್ನ ಶಿವಪುರ, ಸಿಯೋನಿ ಹಾಗೂ ಶಾದೋಲ್ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳ ಮೂವರು ಅತ್ಯಾಚಾರ ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ಹರಿಸಿ ಕೆಡವಿದ್ದರು.

ತಮ್ಮನ್ನು ಬುಲ್ಡೋಜರ್ ಮಾಮಾ ಎಂದು ಕರೆದ ಶರ್ಮಾ ಅವರಿಗೆ ಧನ್ಯವಾದ ಹೇಳಿದರು ಶಿವರಾಜ್. ’ಎಲ್ಲ ಪಾತಕಿಗಳು ಕೊಚ್ಚಿ ಹೋಗುವತನಕ ನಿಲ್ಲದು ಮಾಮಾನ ಬುಲ್ಡೋಜರ್. ಸಮಾಜವಿರೋಧಿ ಶಕ್ತಿಗಳನ್ನು ಸುಮ್ಮನೆ ಬಿಡುವುದಿಲ್ಲ ನಾವು’ ಎಂಬುದಾಗಿ ಟ್ವೀಟ್ ಮಾಡಿದರು.

ಇತ್ತೀಚೆಗೆ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಿದ ಅಲ್ಪಸಂಖ್ಯಾತ ಆಪಾದಿತರ ಅಂಗಡಿಗಳು- ಮನೆಗಳ ಮೇಲೆ ಬುಲ್ಡೋಜರುಗಳನ್ನು ಹರಿಸಿ ಕೆಡವಿಸಿದ್ದಾರೆ. ಈ ಮನೆಗಳಲ್ಲಿ ವಾಸವಿದ್ದವರೇ ಕಲ್ಲು ತೂರಿದ ನಿಜ ಅಪರಾಧಿಗಳೆಂಬುದು ಇನ್ನು ಸಾಬೀತಾಗಿಲ್ಲ. ಕಾಯಿದೆ ಕಾನೂನುಗಳನ್ನು ಎತ್ತಿ ಹಿಡಿದು ಆಡಳಿತ ಮಾಡಬೇಕಿರುವ ಸರ್ಕಾರವೇ ಕಾನೂನು ಪ್ರಕ್ರಿಯೆಯನ್ನು ಗಾಳಿಗೆ ತೂರಿ ನ್ಯಾಯಾಂಗದ ಪಾತ್ರವನ್ನೂ ತಾನೇ ವಹಿಸಿರುವುದು ಸಂವಿಧಾನಬಾಹಿರ ನಡೆ. ಕಾನೂನಿನ ಆಡಳಿತಕ್ಕೆ ಮಾರಕವೇ ವಿನಾ ತಾರಕ ಅಲ್ಲ.

ಮೂರನೆಯ ದರ್ಜೆಯ ಪ್ರಜೆಗಳಂತೆ ಬಹುಸಂಖ್ಯಾತರಿಗೆ ಅಡಿಯಾಳುಗಳಾಗಿ ಬಾಳದೆ ಸಮಾನರೆಂದು ತಲೆಯೆತ್ತಿದರೆ ನಿಮ್ಮ ನೆರಳು, ಬದುಕು-ಬಾಳುವೆ, ಅನ್ನದ ದಾರಿಗಳನ್ನು ಹಾಳುಗೆಡವುತ್ತೇವೆ ಎಂಬ ನಿಚ್ಚಳ ಸಂದೇಶವನ್ನು ಅಲ್ಪಸಂಖ್ಯಾತರಿಗೆ ದಿನನಿತ್ಯ ಹತ್ತು ಹಲವು ಬಗೆಗಳಲ್ಲಿ ರವಾನಿಸಲಾಗುತ್ತಿದೆ.

ಅಲ್ಪಸಂಖ್ಯಾತರ ನಡೆ ನುಡಿ ಉಡುಪು, ಉಣಿಸು ತಿನಿಸು, ಆರಾಧನೆ ಎಲ್ಲವನ್ನೂ ಖಳ-ಖೂಳಗೊಳಿಸಿ ಮುಸಲ್ಮಾನರ ಜನಾಂಗೀಯ ಹತ್ಯೆಯತ್ತ ಹೆಜ್ಜೆಯಿಟ್ಟಿದೆ ಭಾರತದ ರಾಜ್ಯಾಡಳಿತ ಕ್ರಮ. ನರೇಂದ್ರ ಮೋದಿ-ಅಮಿತ್ ಶಾ- ಸಂಘಪರಿವಾರ ಈ ಕ್ರಮದ ರೂವಾರಿಗಳು.

ವಾಸ್ತವವಾಗಿ ಬುಲ್ಡೋಜರುಗಳು ಹರಿದು ಕದಲಿರುವುದು ಭಾರತದ ಬಹುತ್ವದ ಅಡಿಪಾಯವೇ ವಿನಾ ಅಲ್ಪಸಂಖ್ಯಾತರ ಮನೆ ಮನಗಳು ಮಾತ್ರವೇ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಪ್ರಾಚೀನ ಕಲಾಕೃತಿಗಳು-ಕೊಳ್ಳೆಯೇಕೆ ನಿಂತಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...