Homeರಾಷ್ಟ್ರೀಯಕೋರ್ಟ್‌ ತಡೆ ಆದೇಶ ನೀಡಿದ ನಂತರವೂ ಮನೆಗಳನ್ನು ಒಡೆದ ದೆಹಲಿ ಪಾಲಿಕೆ: ಗಂಭೀರವಾಗಿ ಪರಿಗಣಿಸಲಾಗುವುದು ಎಂದ...

ಕೋರ್ಟ್‌ ತಡೆ ಆದೇಶ ನೀಡಿದ ನಂತರವೂ ಮನೆಗಳನ್ನು ಒಡೆದ ದೆಹಲಿ ಪಾಲಿಕೆ: ಗಂಭೀರವಾಗಿ ಪರಿಗಣಿಸಲಾಗುವುದು ಎಂದ ಸುಪ್ರೀಂ

ಎರಡು ವಾರಗಳ ನಂತರ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಳ್ಳುವುದಾಗಿ ನ್ಯಾಯಾಲಯ ಹೇಳಿದೆ

- Advertisement -
- Advertisement -

ಬುಧವಾರ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ನಡೆದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. “ನಮ್ಮ ಆದೇಶದ ನಂತರ ನಡೆದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು” ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ

ಕಳೆದ ಶನಿವಾರದಂದು ಕೋಮುಗಲಭೆ ಭುಗಿಲೆದ್ದ ದೆಹಲಿಯ ಜಹಾಂಗೀರ್‌‌ಪುರಿಗೆ ಬುಲ್ಡೋಜರ್‌ಗಳನ್ನು ಕಳುಹಿಸಲ್ಪಟ್ಟ ಒಂದು ದಿನದ ನಂತರ, ಸುಪ್ರೀಂಕೋರ್ಟ್ ತನ್ನ ಆದೇಶದ ನಂತರ ನಡೆದ ಧ್ವಂಸಗಳ ಬಗ್ಗೆ ‘ಗಂಭೀರ’ವಾಗಿ ಪರಿಗಣಿಸುವುದಾಗಿ ಹೇಳಿದೆ. ಮುಂದಿನ ಆದೇಶದವರೆಗೆ ಜಹಾಂಗೀರ್‌ಪುರಿಯಲ್ಲಿ ಯಾವುದೇ ನೆಲಸಮಗೊಳಿಸುವ ಕಾರ್ಯಾಚರಣೆ ಮಾಡಬಾರದು ಎಂದು ನ್ಯಾಯಾಲಯವು ದೆಹಲಿ ಮುನ್ಸಿಪಲ್‌ಗೆ ನೋಟಿಸ್ ಜಾರಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸುಪ್ರೀಂಕೋರ್ಟ್ ತೀರ್ಪನ್ನು ಮೇಯರ್‌ಗೆ ತಿಳಿಸಿದ ನಂತರವೂ ನಡೆದ ಎಲ್ಲಾ ಉರುಳಿಸುವಿಕೆ ಕಾರ್ಯಾಚರಣೆಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎರಡು ವಾರಗಳ ನಂತರ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ವಿಚಾರಣೆಯ ಸಂದರ್ಭದಲ್ಲಿ, “ಸಮಾಜದ ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಲಾಗುತ್ತಿದೆ” ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ.

ಜಹಾಂಗೀರ್‌ಪುರಿ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, “ದೆಹಲಿ ಬಿಜೆಪಿ ಮುಖ್ಯಸ್ಥರು ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್‌ಗೆ ದೂರು ನೀಡಿದ ನಂತರ ಹಿಂಸಾಚಾರ ಪೀಡಿತ ಪ್ರದೇಶದಿಂದ ಅತಿಕ್ರಮಣಗಳನ್ನು ತೆಗೆದುಹಾಕಲು ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಯಾವುದೆ ಸೂಚನೆಯಿಲ್ಲದೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು” ಎಂದು ಹೇಳಿದ್ದಾರೆ.

ದೆಹಲಿ ಮುನ್ಸಿಪಲ್‌‌‌ ಬಿಜೆಪಿ ನಾಯಕರ ಆಶಯವನ್ನು “ತಮ್ಮ ಆಜ್ಞೆಯಂತೆ” ಆಗಲಿ ಎಂಬಂತೆ ವರ್ತಿಸಿದೆ ಎಂದು ವಕೀಲರು ಆರೋಪಿಸಿದ್ದಾರೆ.

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ದೆಹಲಿಯಂತಹ ರಾಜ್ಯಗಳಲ್ಲಿ ಮುಸ್ಲಿಂ ಗಲಭೆ ಆರೋಪಿಗಳ ಕಟ್ಟಡಗಳನ್ನು ನೆಲಸಮಗೊಳಿಸಲಾಗುತ್ತಿದೆ ಎಂದು ಜಮಿಯತ್ ಉಲಾಮಾ-ಇ-ಹಿಂದ್ ಸಲ್ಲಿಸಿದ ಮನವಿಯನ್ನು ಗಮನಿಸಿದ ಸುಪ್ರೀಂಕೋರ್ಟ್ ಬುಧವಾರ ಅತಿಕ್ರಮಣ ವಿರೋಧಿ ಅಭಿಯಾನವನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ ಬದಲಾಯಿಸಿದ ಪೊಲೀಸರು

ಸುಪ್ರೀಂಕೋರ್ಟ್ ಆದೇಶ ಇದ್ದರೂ ಬುಲ್ಡೋಜರ್‌ಗಳು ಮಸೀದಿ ಹೊರಗಿನ ಅಂಗಡಿಗಳು, ಕಟ್ಟಡಗಳನ್ನು ಸುಪ್ರೀಂಕೋರ್ಟ್‌ ಎರಡನೇ ಬಾರಿಗೆ ಹಸ್ತಕ್ಷೇಪ ಮಾಡುವವರೆಗೂ ಧ್ವಂಸಗೊಳಿಸಲಾಗಿದೆ.  ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಅಂತಿಮವಾಗಿ ಕಾರ್ಯಚರಣೆಯನ್ನು ನಿಲ್ಲಿಸುವಂತೆ ಆದೇಶ ನೀಡಿದ್ದಾರೆ.

ಬುಲ್ಡೋಝರ್‌ಗಳು ಧ್ವಂಸಗೊಳಿಸುತ್ತಿರುವ ಪ್ರದೇಶಕ್ಕೆ ತೆರಳಿದ್ದ ಸಿಪಿಐಎಂ ನಾಯಕಿ ಬೃಂದಾ ಕಾರಟ್‌ ಹಾಗೂ ಅವರ ತಂಡ ಬುಲ್ಡೋಝರ್‌ ಮುಂದೆ ನಿಂತು ಪ್ರತಿಭಟಿಸಿದ್ದಾರೆ. ಅವರು ಸುಪ್ರೀಂಕೋರ್ಟ್‌ನ ತಡೆ ಆದೇಶವಿರುವ ಪ್ರತಿಯನ್ನು ಅಲ್ಲಿನ ಅಧಿಕಾರಿಗಳಿಗೆ ತೋರಿಸಿದ್ದರು. ಇದರ ನಂತರ ಅಧಿಕಾರಿಗಳು ಕಾರ್ಯಾಚರಣೆಯನ್ನು ನಿಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...