Homeರಾಜಕೀಯಮೋದಿಗೆ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ, ಮೇವಾನಿ ಬಂಧನ ಪ್ರಜಾಪ್ರಭುತ್ವ ವಿರೋಧಿ: ರಾಹುಲ್ ಗಾಂಧಿ ಆಕ್ರೋಶ

ಮೋದಿಗೆ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ, ಮೇವಾನಿ ಬಂಧನ ಪ್ರಜಾಪ್ರಭುತ್ವ ವಿರೋಧಿ: ರಾಹುಲ್ ಗಾಂಧಿ ಆಕ್ರೋಶ

- Advertisement -
- Advertisement -

ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನವನ್ನು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಬಣ್ಣಿಸಿದ್ದಾರೆ. ಭಿನ್ನಾಭಿಪ್ರಾಯವನ್ನು ಒಡೆದು ಹಾಕಲು ಪ್ರಯತ್ನಿಸುವ ಮೂಲಕ ಸತ್ಯವನ್ನು ಬಂಧಿಸಲು ಪ್ರಧಾನಿ ಮೋದಿಗೆ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಬುಧವಾರ ರಾತ್ರಿ ಗುಜರಾತ್‌ನ ಪಾಲನ್‌ಪುರ ಪಟ್ಟಣದಿಂದ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು, ಟ್ವೀಟ್‌ ವಿಚಾರವಾಗಿ ಬಂಧಿಸಿ ಮುಂಜಾನೆ ವಿಮಾನದ ಮೂಲಕ ಅಸ್ಸಾಂಗೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೇವಾನಿ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಅವರನ್ನು ಜನಪ್ರತಿನಿಧಿಯಾಗಿ ಆಯ್ಕೆ ಮಾಡಿದ ಜನರಿಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

“ಮೋದಿ ಅವರೇ, ನೀವು ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಯತ್ನಿಸಬಹುದು. ಆದರೆ ನಿಮಗೆ ಎಂದಿಗೂ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ‘#DaroMat’ (ಹೆದರಬೇಡಿ) ಮತ್ತು ‘#SatyamevaJayate’(ಸತ್ಯವೇ ಗೆಲ್ಲುತ್ತದೆ) ಎಂಬ ಹ್ಯಾಶ್ಟ್ಯಾಗ್ ಬಳಸಿ ಬರೆದಿದ್ದಾರೆ.

ಪ್ರಧಾನಿ ಮೋದಿ ಕುರಿತು ಟ್ವೀಟ್ ಮಾಡಿದ್ದ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಪತ್ರಿಕಾ ವರದಿಯ ಚಿತ್ರವನ್ನು ಅವರು ತನ್ನ ಟ್ವೀಟ್‌ನಲ್ಲಿ ಬಳಿಸಿಕೊಂಡಿದ್ದಾರೆ.

“ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿರುವುದು ಅಪ್ರಜಾಸತ್ತಾತ್ಮಕ ವಿಧಾನವಾಗಿದ್ದು, ಸಂವಿಧಾನ ವಿರೋಧಿ ಕ್ರಮವಾಗಿದೆ. ಇದು ಅವರನ್ನು ಸಾರ್ವಜನಿಕ ಪ್ರತಿನಿಧಿಯಾಗಿ ಆಯ್ಕೆ ಮಾಡಿದ ಜನರಿಗೆ ಅವಮಾನವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಲಿದ್ದಾರೆ” ಎಂದು ಕಾಂಗ್ರೆಸ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತನ್ನ ಹಳ್ಳಿಗೆ ಉತ್ತಮ ರಸ್ತೆ ಕೇಳಿದ ಯುವಕನ ಮೇಲೆ ಹಲ್ಲೆ ನಡೆಸಿದ ಪಾವಗಡ ಕಾಂಗ್ರೆಸ್‌ ಶಾಸಕ ವೆಂಕಟರಮಣಪ್ಪ

ಅಸ್ಸಾಂ ಪೊಲೀಸ್ ಅಧಿಕಾರಿಗಳು ಹಂಚಿಕೊಂಡ ದಾಖಲೆಯ ಪ್ರಕಾರ, ಕೆಲವು ದಿನಗಳ ಹಿಂದೆ ಮೇವಾನಿ ನಾಥೂರಾಂ ಗೋಡ್ಸೆಯ ಬಗ್ಗೆ ಮಾಡಿದ ಟ್ವೀಟ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಟ್ವೀಟ್ ಅನ್ನು ಟ್ವಿಟರ್ ಇಗ ತಡೆಹಿಡಿದಿದೆ. ಮೇವಾನಿ ಗುಜರಾತ್‌ನ ಬನಸ್ಕಾಂತದ ವಡ್ಗಾಮ್ ಕ್ಷೇತ್ರದಿಂದ ಸ್ವತಂತ್ರ ಶಾಸಕರಾಗಿದ್ದು, ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...