Homeರಾಷ್ಟ್ರೀಯಯುಪಿ: ಅಂತರ್ಧರ್ಮೀಯ ವಿವಾಹ ತಡೆದ ಹಿಂದೂ ಯುವ ವಾಹಿನಿ; ಯುವಕನ ವಿರುದ್ಧವೆ ‘ಮತಾಂತರ ಕಾನೂನಿ’ನ ಅಡಿಯಲ್ಲಿ...

ಯುಪಿ: ಅಂತರ್ಧರ್ಮೀಯ ವಿವಾಹ ತಡೆದ ಹಿಂದೂ ಯುವ ವಾಹಿನಿ; ಯುವಕನ ವಿರುದ್ಧವೆ ‘ಮತಾಂತರ ಕಾನೂನಿ’ನ ಅಡಿಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಬಲಪಂಥೀಯ ಹಿಂದೂ ಯುವ ವಾಹಿನಿಯ ಸದಸ್ಯರು ಮೊರಾದಾಬಾದ್‌ನಲ್ಲಿ ಅಂತರ್‌ಧರ್ಮೀಯ ಜೋಡಿಯ ವಿವಾಹವನ್ನು ಬಲವಂತವಾಗಿ ನಿಲ್ಲಿಸಿದ ಕೆಲವೇ ದಿನಗಳ ಅಂತರದಲ್ಲಿ, ಉತ್ತರ ಪ್ರದೇಶದ ವಿವಾದಾತ್ಮಕ ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಯುವಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಲುಧಿಯಾನದಿಂದ ಯುವತಿಯನ್ನು ಅಪಹರಿಸಿದ ಆರೋಪದ ಮೇಲೆ ಯುವಕನ ಮೇಲೆ ಆರೋಪ ಹೊರಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಾವು ಯುವಕನ ವಿರುದ್ಧ ಐಪಿಸಿ ಸೆಕ್ಷನ್ 363 (ಅಪಹರಣಕ್ಕೆ ಶಿಕ್ಷೆ), 366 (ಅಪಹರಣ ಅಥವಾ ಮದುವೆಗೆ ಒತ್ತಾಯಿಸಲು ಮಹಿಳೆಯನ್ನು ಪ್ರೇರೇಪಿಸುವುದು) ಮತ್ತು ಯುಪಿ ಕಾನೂನುಬಾಹಿರ ಧರ್ಮ ಪರಿವರ್ತನೆ ಕಾಯಿದೆ-2021 ರ ಸೆಕ್ಷನ್ 3-5 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ಮೊರಾದಾಬಾದ್‌ನ ಸಿವಿಲ್ ಲೈನ್ಸ್ ಉಪ ಎಸ್ಪಿ ಸಾಗರ್ ಜೈನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರಕರಣದ ತನಿಖೆ ನಡೆಸುತ್ತಿರುವ ಸಮಯದಲ್ಲಿ ಯುವಕನಿಗೆ ತನ್ನ ಕುಟುಂಬದೊಂದಿಗೆ ವಾಸಿಸಲು ಅವಕಾಶ ನೀಡಲಾಗಿದೆ. ಯುವತಿಯನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ನಮ್ಮ ವಿಚಾರಣೆ ಪೂರ್ಣಗೊಂಡ ನಂತರ ನಾವು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಸಾಗರ್‌‌ ಹೇಳಿದ್ದಾರೆ.

ಇದನ್ನೂ ಓದಿ: ‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

ದಂಪತಿಗಳು ತಮ್ಮ ವಿವಾಹವನ್ನು ಕಾನೂನುಬದ್ಧವಾಗಿ ನೋಂದಾಯಿಸಲು ಸೋಮವಾರ ಜಿಲ್ಲಾ ನ್ಯಾಯಾಲಯದ ಕಛೇರಿಗೆ ಹೋಗಿದ್ದರು. ಆದರೆ ಹಿಂದೂ ಯುವ ವಾಹಿನಿಯ ಸದಸ್ಯರು ‘ಲವ್‌ ಜಿಹಾದ್‌’ ಆರೋಪ ಮಾಡಿ ಅವರನ್ನು ತಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಹಿಂದೂ ಬಲಪಂಥೀಯರು ಅಂತರ್ಧರ್ಮೀಯ ದಂಪತಿಗಳಿಗೆ, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಪುರುಷರಿಗೆ ಕಿರುಕುಳ ನೀಡಲು ಬಳಸುತ್ತಿರುವ ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುತ್ತಾ ದಂಪತಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ದಂಪತಿಗಳು ತಮ್ಮ ವಿವಾಹವನ್ನು ನ್ಯಾಯಾಲಯದಲ್ಲಿ ನೋಂದಾಯಿಸಲು ಪ್ರಯತ್ನಿಸುತ್ತಿದ್ದರು. ಅವರು ಬೇರೆ ಬೇರೆ ಧರ್ಮಗಳಿಗೆ ಸೇರಿದವರು ಎಂದು ನಾವು ತಿಳಿದುಕೊಂಡಿದ್ದೇವೆ. ಯುವತಿಯ ಪೋಷಕರಿಗೆ ಮತ್ತು ಲುಧಿಯಾನ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಯಾಕೆಂದರೆ ಅವರ ಕುಟುಂಬವು ಅಲ್ಲಿನ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರನ್ನು ದಾಖಲಿಸಿದೆ” ಎಂದು ಸಾಗರ್‌‌ ಜೈನ್ ಹೇಳಿದ್ದಾರೆ.

ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ಯುವತಿಯನ್ನು ಲೂಧಿಯಾನದಲ್ಲಿ ಆಕೆಯ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮೊರಾದಾಬಾದ್‌‌ ಮೂಲದ ಯುವಕ ಅದೇ ಊರಲ್ಲಿ ಕೆಲಸ ಮಾಡುತ್ತಿದ್ದಾಗ, ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಏಪ್ರಿಲ್ 14 ರಂದು ಇಬ್ಬರೂ ಕಾಣೆಯಾಗಿದ್ದರು ಎಂದು ವರದಿಯಾಗಿದೆ.

ವಿವಾದಾತ್ಮಕ ಮತಾಂತರ-ವಿರೋಧಿ ಕಾನೂನನ್ನು ಇತ್ತೀಚಿನ ದಿನಗಳಲ್ಲಿ ಅಂತರ್‌ಧರ್ಮೀಯ ಜೋಡಿಗಳು ಒಟ್ಟಿಗೆ ಇರುವುದನ್ನು ಮತ್ತು ಮದುವೆಯಾಗುವುದನ್ನು ತಡೆಯಲು ಹಲವು ಬಾರಿ ಬಳಸಲಾಗಿದೆ. ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಈ ವಿವಾಹಗಳನ್ನು ಅಡ್ಡಿಪಡಿಸುವಲ್ಲಿ ಮುಂಚೂಣಿಯಲ್ಲಿವೆ.

ಇದನ್ನೂ ಓದಿ: ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

ಇಬ್ಬರೂ ಒಪ್ಪಿಗೆಯಿಂದ ಮದುವೆಯಾಗಿದ್ದೇವೆ ಹಾಗೂ ಬಲವಂತವಾಗಿ ಮತಾಂತರಗೊಳ್ಳಲಿಲ್ಲ ಎಂದು ಯುವತಿಯರು ಹೇಳಿದ್ದರೂ ಹಲವಾರು ಮುಸ್ಲಿಂ ಯುವಕರು ಜೈಲು ಶಿಕ್ಷೆಯನ್ನು ಎದುರಿಸಿದ್ದಾರೆ. ಪ್ರಸ್ತುತ ಪ್ರಕರಣದಲ್ಲೂ ಅಂತರ್ಧರ್ಮೀಯ ವಿವಾಹದ ಸಂದರ್ಭದಲ್ಲಿ ಮತಾಂತರ ನಡೆದಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...