Homeರಾಷ್ಟ್ರೀಯಯುಪಿ: ಅಂತರ್ಧರ್ಮೀಯ ವಿವಾಹ ತಡೆದ ಹಿಂದೂ ಯುವ ವಾಹಿನಿ; ಯುವಕನ ವಿರುದ್ಧವೆ ‘ಮತಾಂತರ ಕಾನೂನಿ’ನ ಅಡಿಯಲ್ಲಿ...

ಯುಪಿ: ಅಂತರ್ಧರ್ಮೀಯ ವಿವಾಹ ತಡೆದ ಹಿಂದೂ ಯುವ ವಾಹಿನಿ; ಯುವಕನ ವಿರುದ್ಧವೆ ‘ಮತಾಂತರ ಕಾನೂನಿ’ನ ಅಡಿಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಬಲಪಂಥೀಯ ಹಿಂದೂ ಯುವ ವಾಹಿನಿಯ ಸದಸ್ಯರು ಮೊರಾದಾಬಾದ್‌ನಲ್ಲಿ ಅಂತರ್‌ಧರ್ಮೀಯ ಜೋಡಿಯ ವಿವಾಹವನ್ನು ಬಲವಂತವಾಗಿ ನಿಲ್ಲಿಸಿದ ಕೆಲವೇ ದಿನಗಳ ಅಂತರದಲ್ಲಿ, ಉತ್ತರ ಪ್ರದೇಶದ ವಿವಾದಾತ್ಮಕ ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಯುವಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಲುಧಿಯಾನದಿಂದ ಯುವತಿಯನ್ನು ಅಪಹರಿಸಿದ ಆರೋಪದ ಮೇಲೆ ಯುವಕನ ಮೇಲೆ ಆರೋಪ ಹೊರಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಾವು ಯುವಕನ ವಿರುದ್ಧ ಐಪಿಸಿ ಸೆಕ್ಷನ್ 363 (ಅಪಹರಣಕ್ಕೆ ಶಿಕ್ಷೆ), 366 (ಅಪಹರಣ ಅಥವಾ ಮದುವೆಗೆ ಒತ್ತಾಯಿಸಲು ಮಹಿಳೆಯನ್ನು ಪ್ರೇರೇಪಿಸುವುದು) ಮತ್ತು ಯುಪಿ ಕಾನೂನುಬಾಹಿರ ಧರ್ಮ ಪರಿವರ್ತನೆ ಕಾಯಿದೆ-2021 ರ ಸೆಕ್ಷನ್ 3-5 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ಮೊರಾದಾಬಾದ್‌ನ ಸಿವಿಲ್ ಲೈನ್ಸ್ ಉಪ ಎಸ್ಪಿ ಸಾಗರ್ ಜೈನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರಕರಣದ ತನಿಖೆ ನಡೆಸುತ್ತಿರುವ ಸಮಯದಲ್ಲಿ ಯುವಕನಿಗೆ ತನ್ನ ಕುಟುಂಬದೊಂದಿಗೆ ವಾಸಿಸಲು ಅವಕಾಶ ನೀಡಲಾಗಿದೆ. ಯುವತಿಯನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ನಮ್ಮ ವಿಚಾರಣೆ ಪೂರ್ಣಗೊಂಡ ನಂತರ ನಾವು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಸಾಗರ್‌‌ ಹೇಳಿದ್ದಾರೆ.

ಇದನ್ನೂ ಓದಿ: ‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

ದಂಪತಿಗಳು ತಮ್ಮ ವಿವಾಹವನ್ನು ಕಾನೂನುಬದ್ಧವಾಗಿ ನೋಂದಾಯಿಸಲು ಸೋಮವಾರ ಜಿಲ್ಲಾ ನ್ಯಾಯಾಲಯದ ಕಛೇರಿಗೆ ಹೋಗಿದ್ದರು. ಆದರೆ ಹಿಂದೂ ಯುವ ವಾಹಿನಿಯ ಸದಸ್ಯರು ‘ಲವ್‌ ಜಿಹಾದ್‌’ ಆರೋಪ ಮಾಡಿ ಅವರನ್ನು ತಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಹಿಂದೂ ಬಲಪಂಥೀಯರು ಅಂತರ್ಧರ್ಮೀಯ ದಂಪತಿಗಳಿಗೆ, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಪುರುಷರಿಗೆ ಕಿರುಕುಳ ನೀಡಲು ಬಳಸುತ್ತಿರುವ ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುತ್ತಾ ದಂಪತಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ದಂಪತಿಗಳು ತಮ್ಮ ವಿವಾಹವನ್ನು ನ್ಯಾಯಾಲಯದಲ್ಲಿ ನೋಂದಾಯಿಸಲು ಪ್ರಯತ್ನಿಸುತ್ತಿದ್ದರು. ಅವರು ಬೇರೆ ಬೇರೆ ಧರ್ಮಗಳಿಗೆ ಸೇರಿದವರು ಎಂದು ನಾವು ತಿಳಿದುಕೊಂಡಿದ್ದೇವೆ. ಯುವತಿಯ ಪೋಷಕರಿಗೆ ಮತ್ತು ಲುಧಿಯಾನ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಯಾಕೆಂದರೆ ಅವರ ಕುಟುಂಬವು ಅಲ್ಲಿನ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರನ್ನು ದಾಖಲಿಸಿದೆ” ಎಂದು ಸಾಗರ್‌‌ ಜೈನ್ ಹೇಳಿದ್ದಾರೆ.

ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ಯುವತಿಯನ್ನು ಲೂಧಿಯಾನದಲ್ಲಿ ಆಕೆಯ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮೊರಾದಾಬಾದ್‌‌ ಮೂಲದ ಯುವಕ ಅದೇ ಊರಲ್ಲಿ ಕೆಲಸ ಮಾಡುತ್ತಿದ್ದಾಗ, ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಏಪ್ರಿಲ್ 14 ರಂದು ಇಬ್ಬರೂ ಕಾಣೆಯಾಗಿದ್ದರು ಎಂದು ವರದಿಯಾಗಿದೆ.

ವಿವಾದಾತ್ಮಕ ಮತಾಂತರ-ವಿರೋಧಿ ಕಾನೂನನ್ನು ಇತ್ತೀಚಿನ ದಿನಗಳಲ್ಲಿ ಅಂತರ್‌ಧರ್ಮೀಯ ಜೋಡಿಗಳು ಒಟ್ಟಿಗೆ ಇರುವುದನ್ನು ಮತ್ತು ಮದುವೆಯಾಗುವುದನ್ನು ತಡೆಯಲು ಹಲವು ಬಾರಿ ಬಳಸಲಾಗಿದೆ. ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಈ ವಿವಾಹಗಳನ್ನು ಅಡ್ಡಿಪಡಿಸುವಲ್ಲಿ ಮುಂಚೂಣಿಯಲ್ಲಿವೆ.

ಇದನ್ನೂ ಓದಿ: ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

ಇಬ್ಬರೂ ಒಪ್ಪಿಗೆಯಿಂದ ಮದುವೆಯಾಗಿದ್ದೇವೆ ಹಾಗೂ ಬಲವಂತವಾಗಿ ಮತಾಂತರಗೊಳ್ಳಲಿಲ್ಲ ಎಂದು ಯುವತಿಯರು ಹೇಳಿದ್ದರೂ ಹಲವಾರು ಮುಸ್ಲಿಂ ಯುವಕರು ಜೈಲು ಶಿಕ್ಷೆಯನ್ನು ಎದುರಿಸಿದ್ದಾರೆ. ಪ್ರಸ್ತುತ ಪ್ರಕರಣದಲ್ಲೂ ಅಂತರ್ಧರ್ಮೀಯ ವಿವಾಹದ ಸಂದರ್ಭದಲ್ಲಿ ಮತಾಂತರ ನಡೆದಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...