Homeಕರ್ನಾಟಕ‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌...

‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌ ಮಾಡಿರುವ ದುಷ್ಕರ್ಮಿಗಳು

- Advertisement -
- Advertisement -

ಕರಾವಳಿ ನಗರವಾದ ಮಂಗಳೂರಿನಲ್ಲಿ ಮಸೀದಿಯಾಗಿ ಪರಿವರ್ತನೆಯಾಗಿರುವ ಪುರಾತನ ದೇವಾಲಯದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವಾರು ಬಿಜೆಪಿಯನ್ನು ಬೆಂಬಲಿಸುವ ಬಲಪಂಥೀಯ ವ್ಯಕ್ತಿಗಳು ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ.

ಝೀನತ್‌ ಭಕ್ಷ್‌ ಮಸೀದಿಯ ಬಗ್ಗೆಗಿನ ಸುಳ್ಳು ಪೋಸ್ಟ್‌‌

ವಿಡಿಯೊದಲ್ಲಿ, ಮಸೀದಿಯಲ್ಲಿರುವ ಕೆರೆ, ಮಸೀದಿಯ ಸುಂದರವಾದ ಕೆತ್ತನೆಗಳು, ಮಸೀದಿಯ ರಚನೆಗಳನ್ನು ಕಾಣಬಹುದಾಗಿದೆ.


ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ವೀಡಿಯೊದ ಮೇಲಿನ ಎಡ ಭಾಗದಲ್ಲಿ “Thousands  shades of India” ಎಂಬ ಸಾಲಿನ ವಾಟರ್‌ಮಾರ್ಕ್ ಅನ್ನು ನೋಡಬಹುದು. ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊವನ್ನು ಹುಡುಕಿದಾಗ, ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವಿಡಿಯೊವನ್ನು 20 ಡಿಸೆಂಬರ್ 2021 ರಂದು ‘ದಿ ಥೌಸಂಡ್ ಶೇಡ್ಸ್ ಆಫ್ ಇಂಡಿಯಾ’ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಅವರು ಅದನ್ನು ಮಂಗಳೂರು ಬಂದರು ಪ್ರದೇಶದಲ್ಲಿ ಇರುವ ಪುರಾತನ ಝೀನತ್ ಬಕ್ಷ್ ಮಸೀದಿಯ ವಿಡಿಯೊ ಎಂದು ಉಲ್ಲೇಖಿಸಿದ್ದಾರೆ. ಇದನ್ನು ಕರ್ನಾಟಕದದಲ್ಲಿ ನಿರ್ಮಿಸಲಾದ ಮೂರನೇ ಅತ್ಯಂತ ಹಳೆಯ ಮಸೀದಿ ಎಂದು ಇತಿಹಾಸ ಹೇಳುತ್ತದೆ.

ಜೀನತ್ ಬಕ್ಷ್ ಮಸೀದಿಯ ಇತಿಹಾಸವು ‘ಕರ್ನಾಟಕ ಪ್ರವಾಸೋದ್ಯಮ’ ವೆಬ್‌ಸೈಟ್ ಮತ್ತು ಝೀನತ್ ಬಕ್ಷ್ ಮಸೀದಿ ಫೇಸ್‌ಬುಕ್ ಪೇಜ್‍ನಲ್ಲಿ ಲಭ್ಯವಿದೆ. ‘ಬೆಲಿಯೊ ಪಲ್ಲಿ’ ಅಥವಾ ‘ಝೀನತ್‌‌ ಭಕ್ಷ್‌ ಜಮ್ಮಾ ಮಸೀದಿ’ ಎಂದೂ ಕರೆಯಲ್ಪಡುವ ಮಸೀದಿಯನ್ನು ಅರಬ್ ವ್ಯಾಪಾರಿಗಳು, ಕಿತ್ ಮತ್ತು ಸಹಬಾಸ್ (ಪ್ರವಾದಿ ಮೊಹಮ್ಮದ್ ಅವರ ಸಹಚರರು) ಸ್ಥಾಪಿಸಿದರು ಎಂದು ನಂಬಲಾಗಿದೆ.

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ಝೀನತ್ ಬಕ್ಷ್ ಮಸೀದಿಯು ಸಂಪೂರ್ಣ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಕ್ರಿಸ್ತ ಶಕ 7 ನೇ ಶತಮಾನದ ಅವಧಿಯಲ್ಲಿ, ಅರಬ್ ಮುಸ್ಲಿಂ ವ್ಯಾಪಾರಿಗಳು ಸ್ಥಳೀಯ ಜನಸಂಖ್ಯೆ ಮತ್ತು ಪಶ್ಚಿಮ ಕರಾವಳಿಯ ಆಡಳಿತಗಾರರೊಂದಿಗೆ ಅತ್ಯಂತ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದ್ದರು.

ವಿವರಗಳ ಪ್ರಕಾರ, ಮಲಬಾರ್‌ನ ರಾಜಾ ಚೆರುಮಾನ್ ಪೆರುಮಾಳ್ ಅರಬ್ ವ್ಯಾಪಾರಿಗಳಿಗೆ ಸೂಕ್ತವಾದ ವಸತಿ ಮತ್ತು ವ್ಯಾಪಾರ ಮಾಡುವ ಸ್ಥಳವನ್ನು ನೀಡಿದ್ದರು ಮತ್ತು ಅವರ ಮಸೀದಿಗಳನ್ನು ನಿರ್ಮಿಸಲು ಭೂಮಿಯನ್ನು ಸಹ ಒದಗಿಸಿದ್ದರು.

ನಂತರ, 17 ನೇ ಶತಮಾನದಲ್ಲಿ, ಟಿಪ್ಪು ಸುಲ್ತಾನ್ ಈ ಮಸೀದಿಯನ್ನು ಸುಂದರವಾದ ಮರದ ಕೆತ್ತನೆಗಳೊಂದಿಗೆ ನವೀಕರಿಸಿದ್ದರು. ನಂತರ ತನ್ನ ಮಗಳ ಹೆಸರನ್ನು ಮಸೀದಿಗೆ ಇಟ್ಟು ಝೀನತ್ ಬಕ್ಷ್ ಎಂದು ಹೆಸರಿಸಿದ್ದರು. ಮಸೀದಿ ಜೀನತ್ ಬಕ್ಷ್ ರೋಸ್‌ವುಡ್ ಮತ್ತು ತೇಗದ ಮರದಗಳಿಂದ ವಿನ್ಯಾಸಗೊಳಿಸಲಾಗಿದೆ. ಉತ್ಕೃಷ್ಟ ಬಗೆಯ ಗೋಡೆಗಳು, ಬಾಗಿಲುಗಳು ಮತ್ತು ಮಹಡಿಗಳನ್ನು ಒಳಗೊಂಡಿದೆ. ಬಂದರ್‌ನಲ್ಲಿರುವ ಜೀನತ್ ಬಕ್ಷ್ ಮಸೀದಿಯನ್ನು ಹಿಂದೂ ದೇವಾಲಯವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಒಟ್ಟಾರೆಯಾಗಿ ಹೇಳುವುದಾದರೆ, ರಾಜ್ಯದ ಮಂಗಳೂರಿನ ಜೀನತ್ ಬಕ್ಷ್ ಮಸೀದಿಯು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಲಾಗುತ್ತಿರುವ ಪೋಸ್ಟ್‌‌ನಲ್ಲಿ ಮಾಡಿರುವ ಪ್ರತಿಪಾದನೆ ಸುಳ್ಳಾಗಿದೆ. ಕೃಪೆ:ಫ್ಯಾಕ್ಟ್‌ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....