Homeಕರ್ನಾಟಕ‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌...

‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌ ಮಾಡಿರುವ ದುಷ್ಕರ್ಮಿಗಳು

- Advertisement -
- Advertisement -

ಕರಾವಳಿ ನಗರವಾದ ಮಂಗಳೂರಿನಲ್ಲಿ ಮಸೀದಿಯಾಗಿ ಪರಿವರ್ತನೆಯಾಗಿರುವ ಪುರಾತನ ದೇವಾಲಯದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವಾರು ಬಿಜೆಪಿಯನ್ನು ಬೆಂಬಲಿಸುವ ಬಲಪಂಥೀಯ ವ್ಯಕ್ತಿಗಳು ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ.

ಝೀನತ್‌ ಭಕ್ಷ್‌ ಮಸೀದಿಯ ಬಗ್ಗೆಗಿನ ಸುಳ್ಳು ಪೋಸ್ಟ್‌‌

ವಿಡಿಯೊದಲ್ಲಿ, ಮಸೀದಿಯಲ್ಲಿರುವ ಕೆರೆ, ಮಸೀದಿಯ ಸುಂದರವಾದ ಕೆತ್ತನೆಗಳು, ಮಸೀದಿಯ ರಚನೆಗಳನ್ನು ಕಾಣಬಹುದಾಗಿದೆ.


ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ವೀಡಿಯೊದ ಮೇಲಿನ ಎಡ ಭಾಗದಲ್ಲಿ “Thousands  shades of India” ಎಂಬ ಸಾಲಿನ ವಾಟರ್‌ಮಾರ್ಕ್ ಅನ್ನು ನೋಡಬಹುದು. ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊವನ್ನು ಹುಡುಕಿದಾಗ, ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವಿಡಿಯೊವನ್ನು 20 ಡಿಸೆಂಬರ್ 2021 ರಂದು ‘ದಿ ಥೌಸಂಡ್ ಶೇಡ್ಸ್ ಆಫ್ ಇಂಡಿಯಾ’ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಅವರು ಅದನ್ನು ಮಂಗಳೂರು ಬಂದರು ಪ್ರದೇಶದಲ್ಲಿ ಇರುವ ಪುರಾತನ ಝೀನತ್ ಬಕ್ಷ್ ಮಸೀದಿಯ ವಿಡಿಯೊ ಎಂದು ಉಲ್ಲೇಖಿಸಿದ್ದಾರೆ. ಇದನ್ನು ಕರ್ನಾಟಕದದಲ್ಲಿ ನಿರ್ಮಿಸಲಾದ ಮೂರನೇ ಅತ್ಯಂತ ಹಳೆಯ ಮಸೀದಿ ಎಂದು ಇತಿಹಾಸ ಹೇಳುತ್ತದೆ.

ಜೀನತ್ ಬಕ್ಷ್ ಮಸೀದಿಯ ಇತಿಹಾಸವು ‘ಕರ್ನಾಟಕ ಪ್ರವಾಸೋದ್ಯಮ’ ವೆಬ್‌ಸೈಟ್ ಮತ್ತು ಝೀನತ್ ಬಕ್ಷ್ ಮಸೀದಿ ಫೇಸ್‌ಬುಕ್ ಪೇಜ್‍ನಲ್ಲಿ ಲಭ್ಯವಿದೆ. ‘ಬೆಲಿಯೊ ಪಲ್ಲಿ’ ಅಥವಾ ‘ಝೀನತ್‌‌ ಭಕ್ಷ್‌ ಜಮ್ಮಾ ಮಸೀದಿ’ ಎಂದೂ ಕರೆಯಲ್ಪಡುವ ಮಸೀದಿಯನ್ನು ಅರಬ್ ವ್ಯಾಪಾರಿಗಳು, ಕಿತ್ ಮತ್ತು ಸಹಬಾಸ್ (ಪ್ರವಾದಿ ಮೊಹಮ್ಮದ್ ಅವರ ಸಹಚರರು) ಸ್ಥಾಪಿಸಿದರು ಎಂದು ನಂಬಲಾಗಿದೆ.

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ಝೀನತ್ ಬಕ್ಷ್ ಮಸೀದಿಯು ಸಂಪೂರ್ಣ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಕ್ರಿಸ್ತ ಶಕ 7 ನೇ ಶತಮಾನದ ಅವಧಿಯಲ್ಲಿ, ಅರಬ್ ಮುಸ್ಲಿಂ ವ್ಯಾಪಾರಿಗಳು ಸ್ಥಳೀಯ ಜನಸಂಖ್ಯೆ ಮತ್ತು ಪಶ್ಚಿಮ ಕರಾವಳಿಯ ಆಡಳಿತಗಾರರೊಂದಿಗೆ ಅತ್ಯಂತ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದ್ದರು.

ವಿವರಗಳ ಪ್ರಕಾರ, ಮಲಬಾರ್‌ನ ರಾಜಾ ಚೆರುಮಾನ್ ಪೆರುಮಾಳ್ ಅರಬ್ ವ್ಯಾಪಾರಿಗಳಿಗೆ ಸೂಕ್ತವಾದ ವಸತಿ ಮತ್ತು ವ್ಯಾಪಾರ ಮಾಡುವ ಸ್ಥಳವನ್ನು ನೀಡಿದ್ದರು ಮತ್ತು ಅವರ ಮಸೀದಿಗಳನ್ನು ನಿರ್ಮಿಸಲು ಭೂಮಿಯನ್ನು ಸಹ ಒದಗಿಸಿದ್ದರು.

ನಂತರ, 17 ನೇ ಶತಮಾನದಲ್ಲಿ, ಟಿಪ್ಪು ಸುಲ್ತಾನ್ ಈ ಮಸೀದಿಯನ್ನು ಸುಂದರವಾದ ಮರದ ಕೆತ್ತನೆಗಳೊಂದಿಗೆ ನವೀಕರಿಸಿದ್ದರು. ನಂತರ ತನ್ನ ಮಗಳ ಹೆಸರನ್ನು ಮಸೀದಿಗೆ ಇಟ್ಟು ಝೀನತ್ ಬಕ್ಷ್ ಎಂದು ಹೆಸರಿಸಿದ್ದರು. ಮಸೀದಿ ಜೀನತ್ ಬಕ್ಷ್ ರೋಸ್‌ವುಡ್ ಮತ್ತು ತೇಗದ ಮರದಗಳಿಂದ ವಿನ್ಯಾಸಗೊಳಿಸಲಾಗಿದೆ. ಉತ್ಕೃಷ್ಟ ಬಗೆಯ ಗೋಡೆಗಳು, ಬಾಗಿಲುಗಳು ಮತ್ತು ಮಹಡಿಗಳನ್ನು ಒಳಗೊಂಡಿದೆ. ಬಂದರ್‌ನಲ್ಲಿರುವ ಜೀನತ್ ಬಕ್ಷ್ ಮಸೀದಿಯನ್ನು ಹಿಂದೂ ದೇವಾಲಯವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಒಟ್ಟಾರೆಯಾಗಿ ಹೇಳುವುದಾದರೆ, ರಾಜ್ಯದ ಮಂಗಳೂರಿನ ಜೀನತ್ ಬಕ್ಷ್ ಮಸೀದಿಯು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಲಾಗುತ್ತಿರುವ ಪೋಸ್ಟ್‌‌ನಲ್ಲಿ ಮಾಡಿರುವ ಪ್ರತಿಪಾದನೆ ಸುಳ್ಳಾಗಿದೆ. ಕೃಪೆ:ಫ್ಯಾಕ್ಟ್‌ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...