Homeಕರ್ನಾಟಕ‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌...

‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌ ಮಾಡಿರುವ ದುಷ್ಕರ್ಮಿಗಳು

- Advertisement -
- Advertisement -

ಕರಾವಳಿ ನಗರವಾದ ಮಂಗಳೂರಿನಲ್ಲಿ ಮಸೀದಿಯಾಗಿ ಪರಿವರ್ತನೆಯಾಗಿರುವ ಪುರಾತನ ದೇವಾಲಯದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವಾರು ಬಿಜೆಪಿಯನ್ನು ಬೆಂಬಲಿಸುವ ಬಲಪಂಥೀಯ ವ್ಯಕ್ತಿಗಳು ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ.

ಝೀನತ್‌ ಭಕ್ಷ್‌ ಮಸೀದಿಯ ಬಗ್ಗೆಗಿನ ಸುಳ್ಳು ಪೋಸ್ಟ್‌‌

ವಿಡಿಯೊದಲ್ಲಿ, ಮಸೀದಿಯಲ್ಲಿರುವ ಕೆರೆ, ಮಸೀದಿಯ ಸುಂದರವಾದ ಕೆತ್ತನೆಗಳು, ಮಸೀದಿಯ ರಚನೆಗಳನ್ನು ಕಾಣಬಹುದಾಗಿದೆ.


ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ವೀಡಿಯೊದ ಮೇಲಿನ ಎಡ ಭಾಗದಲ್ಲಿ “Thousands  shades of India” ಎಂಬ ಸಾಲಿನ ವಾಟರ್‌ಮಾರ್ಕ್ ಅನ್ನು ನೋಡಬಹುದು. ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊವನ್ನು ಹುಡುಕಿದಾಗ, ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವಿಡಿಯೊವನ್ನು 20 ಡಿಸೆಂಬರ್ 2021 ರಂದು ‘ದಿ ಥೌಸಂಡ್ ಶೇಡ್ಸ್ ಆಫ್ ಇಂಡಿಯಾ’ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಅವರು ಅದನ್ನು ಮಂಗಳೂರು ಬಂದರು ಪ್ರದೇಶದಲ್ಲಿ ಇರುವ ಪುರಾತನ ಝೀನತ್ ಬಕ್ಷ್ ಮಸೀದಿಯ ವಿಡಿಯೊ ಎಂದು ಉಲ್ಲೇಖಿಸಿದ್ದಾರೆ. ಇದನ್ನು ಕರ್ನಾಟಕದದಲ್ಲಿ ನಿರ್ಮಿಸಲಾದ ಮೂರನೇ ಅತ್ಯಂತ ಹಳೆಯ ಮಸೀದಿ ಎಂದು ಇತಿಹಾಸ ಹೇಳುತ್ತದೆ.

ಜೀನತ್ ಬಕ್ಷ್ ಮಸೀದಿಯ ಇತಿಹಾಸವು ‘ಕರ್ನಾಟಕ ಪ್ರವಾಸೋದ್ಯಮ’ ವೆಬ್‌ಸೈಟ್ ಮತ್ತು ಝೀನತ್ ಬಕ್ಷ್ ಮಸೀದಿ ಫೇಸ್‌ಬುಕ್ ಪೇಜ್‍ನಲ್ಲಿ ಲಭ್ಯವಿದೆ. ‘ಬೆಲಿಯೊ ಪಲ್ಲಿ’ ಅಥವಾ ‘ಝೀನತ್‌‌ ಭಕ್ಷ್‌ ಜಮ್ಮಾ ಮಸೀದಿ’ ಎಂದೂ ಕರೆಯಲ್ಪಡುವ ಮಸೀದಿಯನ್ನು ಅರಬ್ ವ್ಯಾಪಾರಿಗಳು, ಕಿತ್ ಮತ್ತು ಸಹಬಾಸ್ (ಪ್ರವಾದಿ ಮೊಹಮ್ಮದ್ ಅವರ ಸಹಚರರು) ಸ್ಥಾಪಿಸಿದರು ಎಂದು ನಂಬಲಾಗಿದೆ.

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ಝೀನತ್ ಬಕ್ಷ್ ಮಸೀದಿಯು ಸಂಪೂರ್ಣ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಕ್ರಿಸ್ತ ಶಕ 7 ನೇ ಶತಮಾನದ ಅವಧಿಯಲ್ಲಿ, ಅರಬ್ ಮುಸ್ಲಿಂ ವ್ಯಾಪಾರಿಗಳು ಸ್ಥಳೀಯ ಜನಸಂಖ್ಯೆ ಮತ್ತು ಪಶ್ಚಿಮ ಕರಾವಳಿಯ ಆಡಳಿತಗಾರರೊಂದಿಗೆ ಅತ್ಯಂತ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದ್ದರು.

ವಿವರಗಳ ಪ್ರಕಾರ, ಮಲಬಾರ್‌ನ ರಾಜಾ ಚೆರುಮಾನ್ ಪೆರುಮಾಳ್ ಅರಬ್ ವ್ಯಾಪಾರಿಗಳಿಗೆ ಸೂಕ್ತವಾದ ವಸತಿ ಮತ್ತು ವ್ಯಾಪಾರ ಮಾಡುವ ಸ್ಥಳವನ್ನು ನೀಡಿದ್ದರು ಮತ್ತು ಅವರ ಮಸೀದಿಗಳನ್ನು ನಿರ್ಮಿಸಲು ಭೂಮಿಯನ್ನು ಸಹ ಒದಗಿಸಿದ್ದರು.

ನಂತರ, 17 ನೇ ಶತಮಾನದಲ್ಲಿ, ಟಿಪ್ಪು ಸುಲ್ತಾನ್ ಈ ಮಸೀದಿಯನ್ನು ಸುಂದರವಾದ ಮರದ ಕೆತ್ತನೆಗಳೊಂದಿಗೆ ನವೀಕರಿಸಿದ್ದರು. ನಂತರ ತನ್ನ ಮಗಳ ಹೆಸರನ್ನು ಮಸೀದಿಗೆ ಇಟ್ಟು ಝೀನತ್ ಬಕ್ಷ್ ಎಂದು ಹೆಸರಿಸಿದ್ದರು. ಮಸೀದಿ ಜೀನತ್ ಬಕ್ಷ್ ರೋಸ್‌ವುಡ್ ಮತ್ತು ತೇಗದ ಮರದಗಳಿಂದ ವಿನ್ಯಾಸಗೊಳಿಸಲಾಗಿದೆ. ಉತ್ಕೃಷ್ಟ ಬಗೆಯ ಗೋಡೆಗಳು, ಬಾಗಿಲುಗಳು ಮತ್ತು ಮಹಡಿಗಳನ್ನು ಒಳಗೊಂಡಿದೆ. ಬಂದರ್‌ನಲ್ಲಿರುವ ಜೀನತ್ ಬಕ್ಷ್ ಮಸೀದಿಯನ್ನು ಹಿಂದೂ ದೇವಾಲಯವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಒಟ್ಟಾರೆಯಾಗಿ ಹೇಳುವುದಾದರೆ, ರಾಜ್ಯದ ಮಂಗಳೂರಿನ ಜೀನತ್ ಬಕ್ಷ್ ಮಸೀದಿಯು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಲಾಗುತ್ತಿರುವ ಪೋಸ್ಟ್‌‌ನಲ್ಲಿ ಮಾಡಿರುವ ಪ್ರತಿಪಾದನೆ ಸುಳ್ಳಾಗಿದೆ. ಕೃಪೆ:ಫ್ಯಾಕ್ಟ್‌ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....