Homeರಾಷ್ಟ್ರೀಯಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

- Advertisement -
- Advertisement -

ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಸಂಘಟನೆಯು ಕಳೆದ ಡಿಸೆಂಬರ್‌ನಲ್ಲಿ ಕಾರ್ಯಕ್ರಮವೊಂದನ್ನು ಸಂಘಟಿಸಿ, ‘ಹಿಂದೂ ರಾಷ್ಟ್ರ ಕೊಲೆ ಮಾಡುವುದ’ಕ್ಕಾಗಿ ಕರೆ ನೀಡಿತ್ತು. ಆದರೆ ದೆಹಲಿ ಪೊಲೀಸರು ಈ ಕರೆ ‘ದ್ವೇಷ ಭಾಷಣವಲ್ಲ’ ಎಂದು ಕಳೆದ ವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದರು. ದೆಹಲಿ ಪೊಲೀಸರ ಈ ಹೇಳಿಕೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅತೃಪ್ತಿ ವ್ಯಕ್ತಪಡಿಸಿದ್ದು, ‘ಉತ್ತಮ ಅಫಿಡವಿಟ್’ ಸಲ್ಲಿಸುವಂತೆ ಹೇಳಿದೆ.

ಡಿಸೆಂಬರ್ 19 ರಂದು ದೇಶದ ರಾಜಧಾನಿಯಲ್ಲಿ ನಡೆದ ‘ಧರ್ಮ ಸಂಸದ್’ನಲ್ಲಿ ಯಾವುದೇ ದ್ವೇಷದ ಭಾಷಣ ಮಾಡಲಾಗಿಲ್ಲ ಎಂದು ಹೇಳುವ ತನ್ನ ಅಫಿಡವಿಟ್ ಅನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ ಮುಂದೆ ಇಂದು ಒಪ್ಪಿಕೊಂಡಿದ್ದು, ಉತ್ತಮವಾದ ಅಫಿಡವಿಟ್‌‌‌ ಸಲ್ಲಿಸುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದಲ್ಲಿ ಸುದರ್ಶನ ಸುದ್ದಿ ಟಿವಿ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ, “ಈ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ನಾವೆಲ್ಲರೂ ಪ್ರತಿಜ್ಞೆ ಮಾಡುತ್ತೇವೆ. ಅದಕ್ಕಾಗಿ ನಾವು ಹೋರಾಡುತ್ತೇವೆ. ಅದಕ್ಕಾಗಿ ಸಾಯುತ್ತೇವೆ ಮತ್ತು ಅಗತ್ಯವಿದ್ದರೆ ಕೊಲ್ಲುತ್ತೇವೆ” ಎಂದು ಜನರಿಗೆ ಪ್ರತಿಜ್ಞೆ ಮಾಡಿಸಿದ್ದರು.

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ಈ ಕಾರ್ಯಕ್ರಮವನ್ನು ಬಲಪಂಥೀಯ ಗುಂಪು ಹಿಂದೂ ಯುವ ವಾಹಿನಿ ಆಯೋಜಿಸಿತ್ತು.

“ಪ್ರತಿಜ್ಞೆ ಸ್ವೀಕರಿಸಿದವರ ಉದ್ದೇಶವು ಸಮುದಾಯದ ನೈತಿಕತೆಯನ್ನು ಉಳಿಸುವುದಾಗಿತ್ತು” ಎಂಬ ದೆಹಲಿ ಪೊಲೀಸರ ಅಫಿಡವಿಟ್‌ ಅನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಇಂದು ಉಲ್ಲೇಖಿಸಿದ್ದು, ಇದರ ಅರ್ಥವೇನು ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ಅಫಿಡವಿಟ್ ಅನ್ನು ಡೆಪ್ಯುಟಿ ಕಮಿಷನರ್ ಆಫ್ ಪೋಲಿಸ್ ಸಲ್ಲಿಸಿದ್ದಾರೆ. ಅವರು ಈ ನಿಲುವನ್ನು ಅನುಮೋದಿಸುತ್ತಾರೆಯೇ? ಅಥವಾ ಅವರು ಸಬ್ ಇನ್ಸ್‌ಪೆಕ್ಟರ್ ಮಟ್ಟದ ತನಿಖಾ ವರದಿಯನ್ನು ಮತ್ತೆ ತಯಾರಿಸುತ್ತಾರೆಯೆ” ಎಂದು ನ್ಯಾಯಮೂರ್ತಿ ಎ.ಎಮ್. ಖಾನ್ವಿಲ್ಕರ್ ಕೇಳಿದ್ದಾರೆ.

ಮೇ 4 ರೊಳಗೆ ದೆಹಲಿ ಪೊಲೀಸರ ಹೊಸ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಜನಾಂಗೀಯ ಹತ್ಯೆಗೆ ಮುಕ್ತವಾಗಿ ಕರೆ ನೀಡಲಾಗುತ್ತಿದೆ ಎಂದು ಅರ್ಥೈಸುವ ಅಥವಾ ಅರ್ಥೈಸಬಹುದಾದ ಯಾವುದೇ ಪದಗಳ ಬಳಕೆ ಇದರಲ್ಲಿ ಇಲ್ಲ ಎಂದು ಕಂಡುಕೊಂಡಿದ್ದೇವೆ” ಎಂದು ಕಳೆದ ವಾರ ನಡೆದ ಆಪಾದಿತ ದ್ವೇಷ ಭಾಷಣದ ವೀಡಿಯೊ ಪ್ರಕರಣದ ವಿಚಾರಣೆಯಲ್ಲಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಪೊಲೀಸರು ತಮ್ಮ ಹೇಳಿಕೆಯಲ್ಲಿ, “ವೀಡಿಯೊ ಮತ್ತು ಇತರ ವಿಷಯಗಳ ಬಗ್ಗೆ ನಡೆದ ತೀವ್ರ ತನಿಖೆಯಲ್ಲಿ ಯಾವುದೇ ಸಮುದಾಯದ ವಿರುದ್ಧ ಯಾವುದೇ ದ್ವೇಷ ಭಾಷಣವನ್ನು ನೀಡಿಲ್ಲ ಎಂದು ಕಂಡುಬಂದಿದೆ. ಆದ್ದರಿಂದ, ಉದ್ದೇಶಿತ ವೀಡಿಯೊದ ತನಿಖೆ ಮತ್ತು ಮೌಲ್ಯಮಾಪನದ ನಂತರ, ಆಪಾದಿತ ಭಾಷಣವು ನಿರ್ದಿಷ್ಟ ಸಮುದಾಯದ ವಿರುದ್ಧ ಯಾವುದೇ ದ್ವೇಷದ ಭಾಷಣವನ್ನು ಹೊಂದಿಲ್ಲ ಎಂದು ತೀರ್ಮಾನಿಸಲಾಗಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಮತ್ತು ದೆಹಲಿಯಲ್ಲಿ ನಡೆದ ಧರ್ಮ ಸಂಸದ್‌ಗಳಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆದ ದ್ವೇಷ ಭಾಷಣಗಳ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಹೈಕೋರ್ಟ್‌ನ ಮಾಜಿ ನ್ಯಾಯಾಧೀಶೆ ಮತ್ತು ಹಿರಿಯ ವಕೀಲೆ ಅಂಜನಾ ಪ್ರಕಾಶ್ ಮತ್ತು ಪತ್ರಕರ್ತ ಕುರ್ಬಾನ್ ಅಲಿ ಈ ಅರ್ಜಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

ಡಿಸೆಂಬರ್ 17 ಮತ್ತು 19 ರ ನಡುವೆ, ದೆಹಲಿಯಲ್ಲಿ (ಹಿಂದೂ ಯುವ ವಾಹಿನಿಯಿಂದ) ಮತ್ತು ಹರಿದ್ವಾರದಲ್ಲಿ (ಯತಿ ನರಸಿಂಹಾನಂದರಿಂದ) ಆಯೋಜಿಸಲಾದ ಎರಡು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕಾಗಿ ಬಹಿರಂಗ ಕರೆಗಳನ್ನು ಒಳಗೊಂಡಂತೆ ದ್ವೇಷದ ಭಾಷಣಗಳನ್ನು ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...