HomeಮುಖಪುಟUP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

UP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

- Advertisement -
- Advertisement -

ಶಾಲಾ ಬಸ್ಸಿನಲ್ಲಿ ಸಂಭವಿಸಿದ ಅಪಘಾತದಲ್ಲಿ ತನ್ನ 10 ವರ್ಷದ ಮಗುವನ್ನು ಕಳೆದುಕೊಂಡ ತಾಯಿಯೊಬ್ಬರು ರೋದಿಸುತ್ತಿದ್ದಾಗ, ಬಾಯಿ ಮುಚ್ಚುವಂತೆ ಮಹಿಳಾ ಅಧಿಕಾರಿಯೊಬ್ಬರು ಗದರಿಸಿದ್ದಾರೆ. “ಬಸ್! ಚುಪ್” (ಸಾಕು! ಮುಚ್ಚು) ಎಂದು ಅಧಿಕಾರಿ ಕಿರುಚಿದ್ದಾರೆ. ಈ ಘಟನೆಯು ಉತ್ತರ ಪ್ರದೇಶದ ಮೋದಿನಗರದಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಅಸೂಕ್ಷ್ಮತೆಯಿಂದ ನಡೆದುಕೊಂಡಿರುವ ವಿಡಿಯೊ, ದೆಹಲಿಯಿಂದ ಸುಮಾರು 40 ಕಿಮೀ ದೂರದಲ್ಲಿರುವ ಮೋದಿನಗರದ ಪೊಲೀಸ್ ಠಾಣೆಯಿಂದ ಹೊರಬಿದ್ದಿದೆ. ಅಪಘಾತದಲ್ಲಿ ಸಾವಿಗೀಡಾದ 4ನೇ ತರಗತಿಯ ವಿದ್ಯಾರ್ಥಿ ಅನುರಾಗ್ ಭಾರದ್ವಾಜ್‌ನ ಪೋಷಕರು ಗುರುವಾರ ಪ್ರತಿಭಟನೆ ಕುಳಿತ್ತಿದ್ದರು. ಮಗುವಿನ ಸಾವಿಗೆ ನಿರ್ಲಕ್ಷ್ಯವೇ ಕಾರಣವಾಗಿದ್ದು, ಶಾಲೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ ಬೆಳಿಗ್ಗೆ ಅನುರಾಗ್ ಬಸ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ವಾಕರಿಕೆ ಬಂದಿದೆ. ಕಿಟಕಿಯಿಂದ ಹೊರಗೆ ಒರಗಿದ್ದನು. ಈ ವೇಳೆ ಚಾಲಕ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದು, ಬಾಲಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಚಾಲಕ ಮತ್ತು ಮತ್ತೊಬ್ಬ ಬಸ್ ಸಿಬ್ಬಂದಿಯನ್ನು ಬಂಧಿಸಿದ್ದರೂ ಶಾಲೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿನಗರದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಾಂಗಿ ಶುಕ್ಲಾ ಅವರು, ಅನುರಾಗ್ ಅವರ ತಾಯಿ ನೇಹಾ ಭಾರದ್ವಾಜ್ ಅವರ ಮೇಲೆ ಕಿರುಚಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ನೇಹಾ ಅವರು ತನ್ನ ಪತಿ, ಮಗಳು ಮತ್ತು ಇತರ ಕೆಲವು ಪೋಷಕರೊಂದಿಗೆ ನೆಲದ ಮೇಲೆ ಕೂತು ಧರಣಿ ನಡೆಸುತ್ತಿದ್ದರು.

“ನಿಮಗೇಕೆ ಅರ್ಥವಾಗುತ್ತಿಲ್ಲ? ಸುಮ್ಮನಿರಲು ನಾನು ಹೇಳುತ್ತಿದ್ದೇನೆ” ಎಂದು ಶುಭಾಂಗಿ ಶುಕ್ಲಾ ಅವರು ನೋವುಂಡ ತಾಯಿಯ ಮೇಲೆ ವಾಕ್ ಪ್ರಹಾರ ನಡೆಸುತ್ತಾರೆ.

“ಅದು ನಿನ್ನ ಮಗನೇ?” ಎಂದು ನೇಹಾ ಭಾರದ್ವಾಜ್ ಅಳುತ್ತಾ ಪ್ರತಿಕ್ರಿಯಿಸಿದ್ದಾರೆ.

“ನಾನು ಎಷ್ಟು ಬಾರಿ ಪ್ರಯತ್ನಿಸಬೇಕು. ನಿಮಗೆ ಅರ್ಥ ಮಾಡಿಸಬೇಕು” ಎಂದು ಮತ್ತೆ ಅಧಿಕಾರಿ ಶುಭಾಂಗಿ ಕಿರುಚುತ್ತಾರೆ.

“ನನಗೆ ಸಾಕಷ್ಟು ಅರ್ಥವಾಗಿದೆ. ಅವರು ಈಗ ಮೌನವಾಗಿದ್ದಾರೆ” ಎಂದು ನೇಹಾ ಉತ್ತರಿಸುತ್ತಾರೆ. ಮೃತಪಟ್ಟಿರುವ ತನ್ನ ಮಗುವನ್ನು ಉಲ್ಲೇಖಿಸಿ ಮಾತನಾಡುತ್ತಾರೆ.

ಘಟನೆಯ ಆಘಾತದ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಧ್ಯ ಪ್ರವೇಶಿಸಿ ವರದಿ ಕೇಳಿದ್ದಾರೆ. ಶಾಲೆ, ಬಸ್‌ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ ಶಾಲಾ ಬಸ್‌ಗಳ ಫಿಟ್‌ನೆಸ್‌ ತಪಾಸಣೆಗೆ ಆದೇಶಿಸಿದ್ದಾರೆ.

ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿರಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಬಸ್‌ನಲ್ಲಿ ಗುಣಮಟ್ಟದ ಮುನ್ನೆಚ್ಚರಿಕೆಗಳನ್ನು ಶಾಲಾ ಮಂಡಲಿ ತೆಗೆದುಕೊಂಡಿಲ್ಲ ಎಂದು ಅನುರಾಗ್ ಪೋಷಕರು ಆರೋಪಿಸಿದ್ದಾರೆ. ಯಾರೂ ಮೇಲ್ವಿಚಾರಣೆ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಅನುರಾಗ್ ಅವರ ತಾಯಿ ಚಾಲಕನಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಏಪ್ರಿಲ್ 1 ರಂದು ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ಚಾಲಕರೊಂದಿಗೆ ಜಗಳವಾಡಿರುವುದಾಗಿ ಪೋಷಕರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಅಧಿಕಾರಿ ಶುಕ್ಲಾ ತನ್ನ ವರದಿಯಲ್ಲಿ ಬೇರೆಯದ್ದನ್ನೇ ಹೇಳುತ್ತಿದ್ದಾರೆ. “ಬಸ್‌ನಲ್ಲಿಯೇ ಇದ್ದ ಶಿಕ್ಷಕರಲ್ಲಿ ಈ ಬಾಲಕ ಏನನ್ನು ಹೇಳಿಕೊಳ್ಳಲಿಲ್ಲ. ಬಸ್‌ನಲ್ಲಿದ್ದ ಸೀಟ್‌ಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದರು” ಎಂದಿದ್ದಾರೆ ಶುಕ್ಲಾ. ಆದರೆ, ಬಸ್‌ಗೆ ಫಿಟ್‌ನೆಸ್ ಪ್ರಮಾಣಪತ್ರ ಇರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...