HomeಮುಖಪುಟUP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

UP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

- Advertisement -
- Advertisement -

ಶಾಲಾ ಬಸ್ಸಿನಲ್ಲಿ ಸಂಭವಿಸಿದ ಅಪಘಾತದಲ್ಲಿ ತನ್ನ 10 ವರ್ಷದ ಮಗುವನ್ನು ಕಳೆದುಕೊಂಡ ತಾಯಿಯೊಬ್ಬರು ರೋದಿಸುತ್ತಿದ್ದಾಗ, ಬಾಯಿ ಮುಚ್ಚುವಂತೆ ಮಹಿಳಾ ಅಧಿಕಾರಿಯೊಬ್ಬರು ಗದರಿಸಿದ್ದಾರೆ. “ಬಸ್! ಚುಪ್” (ಸಾಕು! ಮುಚ್ಚು) ಎಂದು ಅಧಿಕಾರಿ ಕಿರುಚಿದ್ದಾರೆ. ಈ ಘಟನೆಯು ಉತ್ತರ ಪ್ರದೇಶದ ಮೋದಿನಗರದಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಅಸೂಕ್ಷ್ಮತೆಯಿಂದ ನಡೆದುಕೊಂಡಿರುವ ವಿಡಿಯೊ, ದೆಹಲಿಯಿಂದ ಸುಮಾರು 40 ಕಿಮೀ ದೂರದಲ್ಲಿರುವ ಮೋದಿನಗರದ ಪೊಲೀಸ್ ಠಾಣೆಯಿಂದ ಹೊರಬಿದ್ದಿದೆ. ಅಪಘಾತದಲ್ಲಿ ಸಾವಿಗೀಡಾದ 4ನೇ ತರಗತಿಯ ವಿದ್ಯಾರ್ಥಿ ಅನುರಾಗ್ ಭಾರದ್ವಾಜ್‌ನ ಪೋಷಕರು ಗುರುವಾರ ಪ್ರತಿಭಟನೆ ಕುಳಿತ್ತಿದ್ದರು. ಮಗುವಿನ ಸಾವಿಗೆ ನಿರ್ಲಕ್ಷ್ಯವೇ ಕಾರಣವಾಗಿದ್ದು, ಶಾಲೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ ಬೆಳಿಗ್ಗೆ ಅನುರಾಗ್ ಬಸ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ವಾಕರಿಕೆ ಬಂದಿದೆ. ಕಿಟಕಿಯಿಂದ ಹೊರಗೆ ಒರಗಿದ್ದನು. ಈ ವೇಳೆ ಚಾಲಕ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದು, ಬಾಲಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಚಾಲಕ ಮತ್ತು ಮತ್ತೊಬ್ಬ ಬಸ್ ಸಿಬ್ಬಂದಿಯನ್ನು ಬಂಧಿಸಿದ್ದರೂ ಶಾಲೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿನಗರದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಾಂಗಿ ಶುಕ್ಲಾ ಅವರು, ಅನುರಾಗ್ ಅವರ ತಾಯಿ ನೇಹಾ ಭಾರದ್ವಾಜ್ ಅವರ ಮೇಲೆ ಕಿರುಚಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ನೇಹಾ ಅವರು ತನ್ನ ಪತಿ, ಮಗಳು ಮತ್ತು ಇತರ ಕೆಲವು ಪೋಷಕರೊಂದಿಗೆ ನೆಲದ ಮೇಲೆ ಕೂತು ಧರಣಿ ನಡೆಸುತ್ತಿದ್ದರು.

“ನಿಮಗೇಕೆ ಅರ್ಥವಾಗುತ್ತಿಲ್ಲ? ಸುಮ್ಮನಿರಲು ನಾನು ಹೇಳುತ್ತಿದ್ದೇನೆ” ಎಂದು ಶುಭಾಂಗಿ ಶುಕ್ಲಾ ಅವರು ನೋವುಂಡ ತಾಯಿಯ ಮೇಲೆ ವಾಕ್ ಪ್ರಹಾರ ನಡೆಸುತ್ತಾರೆ.

“ಅದು ನಿನ್ನ ಮಗನೇ?” ಎಂದು ನೇಹಾ ಭಾರದ್ವಾಜ್ ಅಳುತ್ತಾ ಪ್ರತಿಕ್ರಿಯಿಸಿದ್ದಾರೆ.

“ನಾನು ಎಷ್ಟು ಬಾರಿ ಪ್ರಯತ್ನಿಸಬೇಕು. ನಿಮಗೆ ಅರ್ಥ ಮಾಡಿಸಬೇಕು” ಎಂದು ಮತ್ತೆ ಅಧಿಕಾರಿ ಶುಭಾಂಗಿ ಕಿರುಚುತ್ತಾರೆ.

“ನನಗೆ ಸಾಕಷ್ಟು ಅರ್ಥವಾಗಿದೆ. ಅವರು ಈಗ ಮೌನವಾಗಿದ್ದಾರೆ” ಎಂದು ನೇಹಾ ಉತ್ತರಿಸುತ್ತಾರೆ. ಮೃತಪಟ್ಟಿರುವ ತನ್ನ ಮಗುವನ್ನು ಉಲ್ಲೇಖಿಸಿ ಮಾತನಾಡುತ್ತಾರೆ.

ಘಟನೆಯ ಆಘಾತದ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಧ್ಯ ಪ್ರವೇಶಿಸಿ ವರದಿ ಕೇಳಿದ್ದಾರೆ. ಶಾಲೆ, ಬಸ್‌ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ ಶಾಲಾ ಬಸ್‌ಗಳ ಫಿಟ್‌ನೆಸ್‌ ತಪಾಸಣೆಗೆ ಆದೇಶಿಸಿದ್ದಾರೆ.

ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿರಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಬಸ್‌ನಲ್ಲಿ ಗುಣಮಟ್ಟದ ಮುನ್ನೆಚ್ಚರಿಕೆಗಳನ್ನು ಶಾಲಾ ಮಂಡಲಿ ತೆಗೆದುಕೊಂಡಿಲ್ಲ ಎಂದು ಅನುರಾಗ್ ಪೋಷಕರು ಆರೋಪಿಸಿದ್ದಾರೆ. ಯಾರೂ ಮೇಲ್ವಿಚಾರಣೆ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಅನುರಾಗ್ ಅವರ ತಾಯಿ ಚಾಲಕನಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಏಪ್ರಿಲ್ 1 ರಂದು ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ಚಾಲಕರೊಂದಿಗೆ ಜಗಳವಾಡಿರುವುದಾಗಿ ಪೋಷಕರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಅಧಿಕಾರಿ ಶುಕ್ಲಾ ತನ್ನ ವರದಿಯಲ್ಲಿ ಬೇರೆಯದ್ದನ್ನೇ ಹೇಳುತ್ತಿದ್ದಾರೆ. “ಬಸ್‌ನಲ್ಲಿಯೇ ಇದ್ದ ಶಿಕ್ಷಕರಲ್ಲಿ ಈ ಬಾಲಕ ಏನನ್ನು ಹೇಳಿಕೊಳ್ಳಲಿಲ್ಲ. ಬಸ್‌ನಲ್ಲಿದ್ದ ಸೀಟ್‌ಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದರು” ಎಂದಿದ್ದಾರೆ ಶುಕ್ಲಾ. ಆದರೆ, ಬಸ್‌ಗೆ ಫಿಟ್‌ನೆಸ್ ಪ್ರಮಾಣಪತ್ರ ಇರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...