Homeಮುಖಪುಟ'ಗಾಂಧಿ ಕೊಲೆಗೆ RSS ಕಾರಣ' ಮಾನಹಾನಿ ಪ್ರಕರಣ: ರಾಹುಲ್‌ಗೆ 1,000 ರೂ. ನೀಡುವಂತೆ RSS ಮುಖಂಡನಿಗೆ...

‘ಗಾಂಧಿ ಕೊಲೆಗೆ RSS ಕಾರಣ’ ಮಾನಹಾನಿ ಪ್ರಕರಣ: ರಾಹುಲ್‌ಗೆ 1,000 ರೂ. ನೀಡುವಂತೆ RSS ಮುಖಂಡನಿಗೆ ಕೋರ್ಟ್ ಸೂಚನೆ

- Advertisement -
- Advertisement -

“ಗಾಂಧಿ ಕೊಲೆಗೆ ಆರ್‌ಎಸ್‌ಎಸ್‌ ಕಾರಣ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿಕೆ ನೀಡಿದ್ದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಆರ್‌ಎಸ್‌ಎಸ್‌ ಮುಖಂಡನಿಗೆ ಕೋರ್ಟ್ ದಂಡ ವಿಧಿಸಿದೆ.

ರಾಹುಲ್‌ ಗಾಂಧಿ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಆರ್‌ಎಸ್‌ಸ್‌ ಮುಖಂಡ ರಾಜೇಶ್‌ ಕುಂಟೆ ಮನವಿ ಸಲ್ಲಿಸಿದ್ದನ್ನು ಕೋರ್ಟ್ ಆಕ್ಷೇಪಿಸಿದೆ.

ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯವು ₹1,000 ದಂಡ ವಿಧಿಸಿದ್ದು, ಈ ಮೊತ್ತವನ್ನು ರಾಹುಲ್‌ಗಾಂಧಿಯವರಿಗೆ ಪಾವತಿಸಬೇಕೆಂದು ಸೂಚಿಸಿರುವುದಾಗಿ ಕಾನೂನು ವಿಚಾರಗಳ ವೆಬ್‌ಸೈಟ್‌ ‘ಬಾರ್‌ ಅಂಡ್‌ ಬೆಂಚ್‌’ ವರದಿ ಮಾಡಿದೆ.

“ಮ್ಯಾಜಿಸ್ಟ್ರೇಟ್‌ ಆದೇಶವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿರುವುದರಿಂದ ಪ್ರಕರಣ ಮುಂದೂಡುವಂತೆ ಕುಂಟೆ ಕೋರಿದ್ದಕ್ಕೆ ಮ್ಯಾಜಿಸ್ಟ್ರೇಟ್‌ ಅವರು ಕುಂಟೆಗೆ ದಂಡ ಹಾಕಿದ್ದಾರೆ” ಎಂದು ವರದಿ ತಿಳಿಸಿದೆ.

ಮಾನಹಾನಿ ಪ್ರಕರಣಗಳಲ್ಲಿ ದೂರುದಾರರು ಮೊದಲಿಗೆ ಸಾಕ್ಷಿಯಾಗಿ ವಿವರಣೆ ನೀಡುತ್ತಾರೆ. ಆದರೆ, ಸಾಕ್ಷಿಯಾಗಿ ಪರಿಶೀಲಿಸಲು ನೋಟರಿ ವಕೀಲರಿಗೆ ಸಮನ್ಸ್‌ ಜಾರಿ ಮಾಡುವಂತೆ ಕೋರಿದ್ದ ಕುಂಟೆ ಮನವಿಯನ್ನು ಮ್ಯಾಜಿಸ್ಟ್ರೇಟ್‌ ತಿರಸ್ಕರಿಸಿದ್ದರು. ಇದನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ವಿಚಾರಣೆ ಮುಂದೂಡುವಂತೆ ಮನವಿ ಮಾಡಲಾಗಿತ್ತು.

ಮ್ಯಾಜಿಸ್ಟ್ರೇಟ್‌ ನಿರ್ದೇಶನದಂತೆ ಸಿಆರ್‌ಪಿಸಿ ಸೆಕ್ಷನ್‌ 202ರ ಅಡಿ ಮಾನಹಾನಿ ದೂರಿನ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗೂ ಸಮನ್ಸ್‌ ಜಾರಿ ಮಾಡಬೇಕು ಎಂದು ಕುಂಟೆ ಮನವಿ ಮಾಡಿರುವುದನ್ನು ರಾಹುಲ್‌ ಗಾಂಧಿಯವರ ವಕೀಲ ಎನ್‌.ವಿ.ಐಯ್ಯರ್‌ ವಿರೋಧಿಸಿದ್ದಾರೆ.

ಮತ್ತೊಂದು ಸಾಕ್ಷಿಯನ್ನು ಆಲಿಸುವುದಕ್ಕೂ ಮುನ್ನ ತಮ್ಮ ವಾದವನ್ನು ಸಾಬೀತುಪಡಿಸಬೇಕು ಎಂದು ಹೇಳಿರುವ ಮ್ಯಾಜಿಸ್ಟ್ರೇಟ್‌ ಡಾ. ಜೆ ವಿ ಪಾಲಿವಾಲ್‌ ಅವರು ಕುಂಟೆ ಸಮನ್ಸ್‌ ಜಾರಿ ಮಾಡಲು ಕೋರಿರುವ ಎರಡನೇ ಮನವಿಗೆ ನಿರಾಕರಿಸಿದ್ದಾರೆ. ಮುಂದಿನ ವಿಚಾರಣೆಯಲ್ಲಿ ತಪ್ಪದೇ ಸಾಕ್ಷಿ ನುಡಿಯುವಂತೆ ಕುಂಟೆಗೆ ಕೋರ್ಟ್ ಸೂಚನೆ ನೀಡಿದೆ ಎಂದು ‘ಬಾರ್‌ ಅಂಡ್‌ ಬೆಂಚ್‌’ ವರದಿ ತಿಳಿಸಿದೆ.

ಏನಿದು ಪ್ರಕರಣ?

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹತ್ಯೆಗೆ ಆರ್‌ಎಸ್‌ಎಸ್‌ ಕಾರಣ ಎಂದು ಭಾಷಣವೊಂದರಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು. ಇದನ್ನು ವಿರೋಧಿಸಿ ಆರ್‌ಎಸ್‌ಎಸ್‌ ನಾಯಕ ಕುಂಟೆ ಅವರು ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. 2014ರಿಂದಲೂ ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯದ ಮುಂದೆ ಪ್ರಕರಣವಿದೆ.

ಇದನ್ನೂ ಓದಿರಿ: ‘gandhi’s assassin’: ಇತಿಹಾಸದ ತಾಯಿ ಸತ್ಯದ ಶೋಧನೆಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...