Homeಮುಖಪುಟ'ಗಾಂಧಿ ಕೊಲೆಗೆ RSS ಕಾರಣ' ಮಾನಹಾನಿ ಪ್ರಕರಣ: ರಾಹುಲ್‌ಗೆ 1,000 ರೂ. ನೀಡುವಂತೆ RSS ಮುಖಂಡನಿಗೆ...

‘ಗಾಂಧಿ ಕೊಲೆಗೆ RSS ಕಾರಣ’ ಮಾನಹಾನಿ ಪ್ರಕರಣ: ರಾಹುಲ್‌ಗೆ 1,000 ರೂ. ನೀಡುವಂತೆ RSS ಮುಖಂಡನಿಗೆ ಕೋರ್ಟ್ ಸೂಚನೆ

- Advertisement -
- Advertisement -

“ಗಾಂಧಿ ಕೊಲೆಗೆ ಆರ್‌ಎಸ್‌ಎಸ್‌ ಕಾರಣ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿಕೆ ನೀಡಿದ್ದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಆರ್‌ಎಸ್‌ಎಸ್‌ ಮುಖಂಡನಿಗೆ ಕೋರ್ಟ್ ದಂಡ ವಿಧಿಸಿದೆ.

ರಾಹುಲ್‌ ಗಾಂಧಿ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಆರ್‌ಎಸ್‌ಸ್‌ ಮುಖಂಡ ರಾಜೇಶ್‌ ಕುಂಟೆ ಮನವಿ ಸಲ್ಲಿಸಿದ್ದನ್ನು ಕೋರ್ಟ್ ಆಕ್ಷೇಪಿಸಿದೆ.

ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯವು ₹1,000 ದಂಡ ವಿಧಿಸಿದ್ದು, ಈ ಮೊತ್ತವನ್ನು ರಾಹುಲ್‌ಗಾಂಧಿಯವರಿಗೆ ಪಾವತಿಸಬೇಕೆಂದು ಸೂಚಿಸಿರುವುದಾಗಿ ಕಾನೂನು ವಿಚಾರಗಳ ವೆಬ್‌ಸೈಟ್‌ ‘ಬಾರ್‌ ಅಂಡ್‌ ಬೆಂಚ್‌’ ವರದಿ ಮಾಡಿದೆ.

“ಮ್ಯಾಜಿಸ್ಟ್ರೇಟ್‌ ಆದೇಶವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿರುವುದರಿಂದ ಪ್ರಕರಣ ಮುಂದೂಡುವಂತೆ ಕುಂಟೆ ಕೋರಿದ್ದಕ್ಕೆ ಮ್ಯಾಜಿಸ್ಟ್ರೇಟ್‌ ಅವರು ಕುಂಟೆಗೆ ದಂಡ ಹಾಕಿದ್ದಾರೆ” ಎಂದು ವರದಿ ತಿಳಿಸಿದೆ.

ಮಾನಹಾನಿ ಪ್ರಕರಣಗಳಲ್ಲಿ ದೂರುದಾರರು ಮೊದಲಿಗೆ ಸಾಕ್ಷಿಯಾಗಿ ವಿವರಣೆ ನೀಡುತ್ತಾರೆ. ಆದರೆ, ಸಾಕ್ಷಿಯಾಗಿ ಪರಿಶೀಲಿಸಲು ನೋಟರಿ ವಕೀಲರಿಗೆ ಸಮನ್ಸ್‌ ಜಾರಿ ಮಾಡುವಂತೆ ಕೋರಿದ್ದ ಕುಂಟೆ ಮನವಿಯನ್ನು ಮ್ಯಾಜಿಸ್ಟ್ರೇಟ್‌ ತಿರಸ್ಕರಿಸಿದ್ದರು. ಇದನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ವಿಚಾರಣೆ ಮುಂದೂಡುವಂತೆ ಮನವಿ ಮಾಡಲಾಗಿತ್ತು.

ಮ್ಯಾಜಿಸ್ಟ್ರೇಟ್‌ ನಿರ್ದೇಶನದಂತೆ ಸಿಆರ್‌ಪಿಸಿ ಸೆಕ್ಷನ್‌ 202ರ ಅಡಿ ಮಾನಹಾನಿ ದೂರಿನ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗೂ ಸಮನ್ಸ್‌ ಜಾರಿ ಮಾಡಬೇಕು ಎಂದು ಕುಂಟೆ ಮನವಿ ಮಾಡಿರುವುದನ್ನು ರಾಹುಲ್‌ ಗಾಂಧಿಯವರ ವಕೀಲ ಎನ್‌.ವಿ.ಐಯ್ಯರ್‌ ವಿರೋಧಿಸಿದ್ದಾರೆ.

ಮತ್ತೊಂದು ಸಾಕ್ಷಿಯನ್ನು ಆಲಿಸುವುದಕ್ಕೂ ಮುನ್ನ ತಮ್ಮ ವಾದವನ್ನು ಸಾಬೀತುಪಡಿಸಬೇಕು ಎಂದು ಹೇಳಿರುವ ಮ್ಯಾಜಿಸ್ಟ್ರೇಟ್‌ ಡಾ. ಜೆ ವಿ ಪಾಲಿವಾಲ್‌ ಅವರು ಕುಂಟೆ ಸಮನ್ಸ್‌ ಜಾರಿ ಮಾಡಲು ಕೋರಿರುವ ಎರಡನೇ ಮನವಿಗೆ ನಿರಾಕರಿಸಿದ್ದಾರೆ. ಮುಂದಿನ ವಿಚಾರಣೆಯಲ್ಲಿ ತಪ್ಪದೇ ಸಾಕ್ಷಿ ನುಡಿಯುವಂತೆ ಕುಂಟೆಗೆ ಕೋರ್ಟ್ ಸೂಚನೆ ನೀಡಿದೆ ಎಂದು ‘ಬಾರ್‌ ಅಂಡ್‌ ಬೆಂಚ್‌’ ವರದಿ ತಿಳಿಸಿದೆ.

ಏನಿದು ಪ್ರಕರಣ?

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹತ್ಯೆಗೆ ಆರ್‌ಎಸ್‌ಎಸ್‌ ಕಾರಣ ಎಂದು ಭಾಷಣವೊಂದರಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು. ಇದನ್ನು ವಿರೋಧಿಸಿ ಆರ್‌ಎಸ್‌ಎಸ್‌ ನಾಯಕ ಕುಂಟೆ ಅವರು ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. 2014ರಿಂದಲೂ ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯದ ಮುಂದೆ ಪ್ರಕರಣವಿದೆ.

ಇದನ್ನೂ ಓದಿರಿ: ‘gandhi’s assassin’: ಇತಿಹಾಸದ ತಾಯಿ ಸತ್ಯದ ಶೋಧನೆಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...