Homeರಾಷ್ಟ್ರೀಯಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ...

ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

- Advertisement -
- Advertisement -

ಉಕ್ರೇನ್-ರಷ್ಯಾ ಸಂಘರ್ಷ ಮತ್ತು ದೆಹಲಿ ಗಲಭೆಗಳ ಬಗ್ಗೆ ದೂರದರ್ಶನದ ಪ್ರಸಾರವನ್ನು ಉಲ್ಲೇಖಿಸಿರುವ ಒಕ್ಕೂಟ ಸರ್ಕಾರವು, ಸುದ್ದಿ ವಾಹಿನಿಗಳಲ್ಲಿ ನಿಗದಿಪಡಿಸಿದ ಕಾರ್ಯಕ್ರಮಗಳು ಸಂಬಂಧಿತ ಕಾನೂನು ಸಂಹಿತೆಗೆ ಬದ್ಧವಾಗಿರಬೇಕು ಎಂದು ‘ಬಲವಾದ ಸಲಹೆ’ಯನ್ನು ಶನಿವಾರದಂದು ನೀಡಿದೆ.

ಸಲಹೆಯಲ್ಲಿ, ಉಕ್ರೇನ್-ರಷ್ಯಾ ಸಂಘರ್ಷದ ಕುರಿತು ವರದಿ ಮಾಡುವಾಗ ಸುದ್ದಿ ನಿರೂಪಕರ ‘ಉತ್ಪ್ರೇಕ್ಷೆ’ಯ ಹೇಳಿಕೆಗಳು ಮತ್ತು ‘ಹತ್ಯಾಕಾಂಡದ ಮುಖ್ಯಾಂಶಗಳು/ಟ್ಯಾಗ್‌ಲೈನ್‌ಗಳು’, ‘ಪರಿಶೀಲಿಸದ ಸಿಸಿಟಿವಿ ದೃಶ್ಯಗಳನ್ನು’ ಪ್ರಸಾರ ಮಾಡುವ ಮೂಲಕ ವಾಯುವ್ಯ ದೆಹಲಿಯಲ್ಲಿನ ‘ಘಟನೆಗಳ’ ತನಿಖೆಯ ಪ್ರಕ್ರಿಯೆಯನ್ನು ಅಡ್ಡಿಪಡಿಸುವ ನಿರ್ದಿಷ್ಟ ನಿದರ್ಶನಗಳನ್ನು ಸರ್ಕಾರ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾಯವ್ಯ ದೆಹಲಿಯಲ್ಲಿನ ಘಟನೆಗಳ ಕುರಿತು ದೂರದರ್ಶನ ಚಾನೆಲ್‌ಗಳಲ್ಲಿ ಕೆಲವು ಚರ್ಚೆಗಳು ‘ಅಸಂಸದೀಯ, ಪ್ರಚೋದನಕಾರಿ ಮತ್ತು ಸಾಮಾಜಿಕವಾಗಿ ಸ್ವೀಕಾರಾರ್ಹವಲ್ಲದ ಭಾಷೆಯನ್ನು’ ಹೊಂದಿದ್ದವು ಎಂದು ಒಕ್ಕೂಟ ಸರ್ಕಾರವು ಹೇಳಿದೆ.

ಕಳೆದ ವಾರ, ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆಗಳು ನಡೆದಿದ್ದವು.

ಇದನ್ನೂ ಓದಿ: ರೈಲಿನಲ್ಲಿ ದ್ವೇಷ ಹರಡುವ ಪತ್ರಿಕೆ ವಿತರಣೆ: ತನಿಖೆ ಪ್ರಾರಂಭಿಸಿದ ರೈಲ್ವೇ ಇಲಾಖೆ

“ಮೇಲಿನ ವಿಷಯಗಳಿಗೆ ಸಂಬಂಧಿಸಿದಂತೆ, ಟೆಲಿವಿಷನ್ ಚಾನೆಲ್‌ಗಳು ವಿಷಯವನ್ನು ರವಾನಿಸುವ ರೀತಿಯಲ್ಲಿ ತಮ್ಮ ಕಾರ್ಯಾಚರಣೆಗಳ ಬಗ್ಗೆ ಸರ್ಕಾರವು ಗಂಭೀರ ಕಳವಳವನ್ನು ವ್ಯಕ್ತಪಡಿಸುತ್ತದೆ…” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿದ ಸಲಹೆಯು ಹೇಳಿದೆ.

ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ 1995 ರ ಮೇಲೆ ತಿಳಿಸಲಾದ ನಿಬಂಧನೆಗಳು ಮತ್ತು ಅದರ ಅಡಿಯಲ್ಲಿನ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ವಿಷಯವನ್ನು ಪ್ರಕಟಿಸುವುದನ್ನು ಮತ್ತು ಪ್ರಸಾರ ಮಾಡುವುದನ್ನು ತಕ್ಷಣವೇ ತಡೆ ಹಿಡಿಯಲು ದೂರದರ್ಶನ ಚಾನೆಲ್‌ಗಳಿಗೆ ಅದು ‘ಬಲವಾಗಿ ಸಲಹೆ’ಯನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...