Homeಮುಖಪುಟದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

ದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

- Advertisement -
- Advertisement -

ಹೈದರಾಬಾದ್‌: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ದೇವಾಲಯದ ಹಿಂದಿನ ಪೊದೆಯಲ್ಲಿ ಪತ್ತೆಯಾದ ಬಳಿಕ, ಪೊಲೀಸರು ಆರೋಪಿಯನ್ನು ಹಿಡಿದಿದ್ದಾರೆ. ಮಹಿಳೆ ಆಗಾಗ್ಗೆ ಭೇಟಿ ನೀಡುತ್ತಿದ್ದ ದೇವಾಲಯವೊಂದರ ಅರ್ಚಕನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

57 ವರ್ಷದ ಉಮಾದೇವಿ ಕೊಲೆಯಾದವರು. ಏಪ್ರಿಲ್ 18ರಂದು ಸಂಜೆ 6.30ಕ್ಕೆ ಎಂದಿನಂತೆ ಮಲ್ಕಾಜ್‌ಗಿರಿಯ ವಿಷ್ಣುಪುರ ಕಾಲೋನಿಯಲ್ಲಿರುವ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಹೋಗಿದ್ದರು. ಆದರೆ ವಾಪಸ್‌ ಮನೆಗೆ ಬಂದಿರಲಿಲ್ಲ. ನಂತರ ಉಮಾದೇವಿಯವರ ಕುಟುಂಬವು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿತ್ತು. ನಾಪತ್ತೆಯಾಗಿರುವ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿಯೂ ಪೋಸ್ಟ್‌ ಮಾಡಲಾಗಿತ್ತು. ತದನಂತರ ದೇವಸ್ಥಾನದ ಹಿಂಭಾಗದಲ್ಲಿನ ಪೊದೆಯಲ್ಲಿ ಶವ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಯನ್ನು 42 ವರ್ಷದ ಅನುಮುಲ ಮುರಳಿ ಕೃಷ್ಣ ಎಂದು ಗುರುತಿಸಲಾಗಿದ್ದು, ಚಿನ್ನಾಭರಣಗಳನ್ನು ಕದ್ದು ಮಾರಾಟ ಮಾಡುವ ಉದ್ದೇಶದಿಂದ ಮಹಿಳೆಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಚರಹೆಯಲ್ಲಿ “ಕಡು ಹಸಿರು ಸೀರೆ, ಕೈಗೆ ಮೂರು ಚಿನ್ನದ ಬಳೆಗಳು ಮತ್ತು ಸಣ್ಣ ಕಿವಿಯೋಲೆಗಳನ್ನು ಮಹಿಳೆ ಧರಿಸಿದ್ದಾರೆ” ತಿಳಿಸಲಾಗಿತ್ತು.

ಅರ್ಚಕನಿಂದ ಚಿನ್ನ ಖರೀದಿಸಿದ ಜೋಶಿ ನಂದ ಕಿಶೋರ್ ಎಂಬ ಆಭರಣ ವ್ಯಾಪಾರಿಯನ್ನೂ ಗುರುತಿಸಿ ಬಂಧಿಸಲಾಗಿದೆ. ಮುರಳಿ ಕೃಷ್ಣನಿಂದ ಪಡೆದ ಎರಡು ಚಿನ್ನದ ಬಳೆಗಳು, 1 ಲಕ್ಷ ರೂಪಾಯಿ ನಗದು, ಉಳಿದ ಬಳೆಗಳಿಂದ ತಯಾರಿಸಿದ 35 ಚಿನ್ನಾಭರಣಗಳನ್ನು ವ್ಯಾಪಾರಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು ಹಾಗೂ ಚಿನ್ನದ ಆಭರಣಗಳನ್ನು ಧರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅರ್ಚಕನಿಗೆ ಹಣಕಾಸಿನ ಸಮಸ್ಯೆ ಇದ್ದ ಕಾರಣ ಈ ಆಭರಣಗಳನ್ನು ಕದಿಯಲು ಯೋಜಿಸಿದ. ಮುರಳಿಕೃಷ್ಣ ಮಹಿಳೆಯ ತಲೆಗೆ ಕಬ್ಬಿಣದ ರಾಡ್‌ನಿಂದ ಪದೇ ಪದೇ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇದಲ್ಲದೆ ಮಹಿಳೆ ಸಾವನ್ನಪ್ಪಿದ್ದ ಬಳಿಕ ಆಕೆಯ ದೇಹವನ್ನು ಪ್ಲಾಸ್ಟಿಕ್ ಡ್ರಮ್‌ನಲ್ಲಿ ತುರುಕಿ, ಅದನ್ನು ಮುಚ್ಚಳದಿಂದ ಮುಚ್ಚಿದನು. ದೇವಾಲಯದಲ್ಲಿ ತಂದು ಇರಿಸಿದ್ದ ನೀರಿನಿಂದ ನೆಲವನ್ನು ಸ್ವಚ್ಛಗೊಳಿಸಿದ್ದಾನೆ. ನಂತರ ಮುರಳಿ, ಮಹಿಳೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಮಾರಾಟ ಮಾಡಿದ್ದಾನೆ. ಆತ ಟ್ರಾಲಿಯಲ್ಲಿ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯುವ ಮೂಲಕ ಶವವನ್ನು ವಿಲೇವಾರಿ ಮಾಡಲು ಪ್ರಯತ್ನಿಸಿದ್ದಾನೆ. ಆದರೆ ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಮಹಿಳೆಗಾಗಿ ಹುಡುಕಾಟ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಒಂದೇ ಕುಟುಂಬದ ಐವರ ಕೊಲೆ

“ಎರಡು ದಿನಗಳ ನಂತರ ದೇಹವು ಕೆಟ್ಟ ವಾಸನೆ ಬರಲಾರಂಭಿಸಿತು. ಆರೋಪಿಯು ಡ್ರಮ್ ಅನ್ನು ಮತ್ತೆ ದೇವಸ್ಥಾನದತ್ತ ತಂದು, ಹಿಂದಿನ ಪೊದೆಗಳಲ್ಲಿ ಬಿಸಾಡಿದನು” ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ. ಖಾಲಿ ಇದ್ದ ಡ್ರಮ್ ಅನ್ನು ಮತ್ತೆ ದೇವಸ್ಥಾನದೊಳಗೆ ತಂದು ಶುಚಿಗೊಳಿಸಿ ಮೊದಲಿನ ಜಾಗದಲ್ಲಿ ಇರಿಸಿದ್ದನು ಎನ್ನಲಾಗಿದೆ. ದುರ್ವಾಸನೆ ಬರುತ್ತಿದ್ದರಿಂದ ಮತ್ತೆ ದೇವಸ್ಥಾನದ ಒಳಭಾಗವನ್ನು ಸ್ವಚ್ಛಗೊಳಿಸಿ ಅಗರಬತ್ತಿ ಹಚ್ಚಿದ್ದಾನೆ ಎಂದು ಪೊಲೀಸ್ ಪತ್ರಿಕಾ ಹೇಳಿಕೆ ತಿಳಿಸಿದೆ.

ಎರಡು ಕಬ್ಬಿಣದ ಸರಳುಗಳು, ಒಂದು ಪ್ಲಾಸ್ಟಿಕ್ ಡ್ರಮ್ ಮತ್ತು ದೇವಾಲಯದ ನೆಲಕ್ಕೆ ಅಂಟಿದ ರಕ್ತದ ಕಲೆಗಳ ಗುರುತುಗಳನ್ನು ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಸಾಕ್ಷಿಯಾಗಿ ಸಲ್ಲಿಸಿದ್ದಾರೆ.

ಏಪ್ರಿಲ್ 18 ರಂದು ಉಮಾದೇವಿ ಹಿಂತಿರುಗದ ಕಾರಣ, ಆಕೆಯ ಕುಟುಂಬವು ದೇವಸ್ಥಾನದ ಅರ್ಚಕರನ್ನು ವಿಚಾರಿಸಿದಾಗ ಅವರು ಸ್ಥಳಕ್ಕೆ ಭೇಟಿ ನೀಡಿರುವುದನ್ನು ಖಚಿತಪಡಿಸಿದ್ದರು. ಆದರೆ, ಸಿಸಿಟಿವಿ ಫೂಟೇಜ್ ನಲ್ಲಿ ಮಹಿಳೆ ದೇವಸ್ಥಾನದಿಂದ ವಾಪಸಾಗಿರುವುದು ಕಂಡುಬಂದಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...