Homeಕರ್ನಾಟಕಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

ಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

- Advertisement -
- Advertisement -

ಮೈಸೂರಿನ ಸೌಹಾರ್ದ ಪ್ರಿಯ ನಾಗರಿಕರು ತಮ್ಮ ಆಸುಪಾಸು ಕೆಲಸ ಮಾಡುತ್ತಿದ್ದ ಶ್ರಮಜೀವಿ ಮುಸ್ಲಿಮರಿಗೆ ಇಫ್ತಾರ್‌ ಕೂಟ ಆಯೋಜಿಸಿ ಶುಕ್ರವಾರ ಸೌಹಾರ್ದತೆ ಮರೆದಿದ್ದಾರೆ. ಈ ವೇಳೆ ಇಫ್ತಾರಿಗೆ ಆಗಮಿಸಿದ್ದ ಅಥಿತಿಯೊಬ್ಬರು, ‘ಇದು ಹಿಂದೂ ಮುಸ್ಲಿಮರ ಇಫ್ತಾರ್‌‌ ಕೂಟವಲ್ಲ, ದ್ರಾವಿಡ ಮಕ್ಕಳ ಇಫ್ತಾರ್‌‌ ಕೂಟ’ ಎಂದು ಬಣ್ಣಿಸಿದ್ದಾರೆ.

ಸೌಹಾರ್ದ ಪ್ರಿಯ ನಾಗರಿಕರ ಈ ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’ ಮೈಸೂರು ಬಸ್‌ ನಿಲ್ದಾಣದ ಮುಂದೆ ಇರುವ ‘ಹೋಟೆಲ್‌ ಮಹಾರಾಜಾ’ದಲ್ಲಿ ಆಯೋಜಿಸಲಾಗಿತ್ತು. ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿ ಸುತ್ತಮುತ್ತ ಇರುವ ಶ್ರಮಜೀವಿ ಮುಸ್ಲಿಮರು ಈ ಇಪ್ತಾರ್‌ ಕೂಟದ ಅಥಿತಿಗಳಾಗಿದ್ದರು. ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುವವರು, ಪಂಚರ್‌ ಅಂಗಡಿಗಳಲ್ಲಿ ಇರುವವರು ಹಾಗೂ ಹಣ್ಣಿನ ಅಂಗಡಿಗಳನ್ನು ನಡೆಸುವವರು ಸೇರಿದಂತೆ ಹಲವು ಶ್ರಮ ಜೀವಿ ಮುಸ್ಲಿಮರಿಗೆ ಆಹ್ವಾನ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯೋಜಕರು ಅಥಿಗಳಿಗೆ ಹೂವು ನೀಡಿ ಸ್ವಾಗತಿಸಿದರು. ಈ ವೇಳೆ ಆಯೋಜಕರಲ್ಲೊಬ್ಬರಾಗಿರುವ ಅಂಕಣಕಾರ ಕೆ.ಪಿ. ಸುರೇಶ್‌, ದೇಶದ ಪರಂಪರೆ, ಸ್ವಾತಂತ್ರ್ಯ ಹೋರಾಟದ ಕಷ್ಟ ಸುಖವನ್ನು ವಿವರಿಸಿದರು. ಸರಳವಾಗಿ ನಾವೆಲ್ಲರೂ ಜೊತೆಯಾಗಿ ಉಣ್ಣಬೇಕಾದ ಊಟವೆಂಬ ಸಾಮಾನ್ಯ ಸಂಗತಿಯೂ ಅಸೀಮ ಸಾಹಸದ ಸಂಗತಿಯಾಗಿರುವುದು ನಮ್ಮ ದುರಂತ ಎಂದು ಬೇಸರ ವ್ಯಕ್ತಪಡಿಸಿ, ಅಥಿತಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಾ ಭಕ್ತರು

ಬಳಿಕ ಮಾತನಾಡಿದ ಮಹೇಶ್ ಅವರು, “ವ್ಯಾವಹಾರಿಕವಾಗಿ ನಾವೆಲ್ಲ ಪರಸ್ಪರ ಸ್ನೇಹದಲ್ಲಿದ್ದರೂ ನಮಗೆ ನೆರೆಮನೆಯ ಊಟ ಹಬ್ಬದ ಬಗ್ಗೆ ಗೊತ್ತಿಲ್ಲ. ಪರಸ್ಪರ ಊಟ, ಹಬ್ಬದ ಬಗ್ಗೆ ಕುತೂಹಲ, ಮೆಚ್ಚುಗೆ ಇದ್ದರಾಯಿತಲ್ಲ, ವ್ಯತ್ಯಾಸವೇ ಮುಖ್ಯವಾದರೆ ಹೇಗೆ? ಬಾಗಿಲು ಸರಿಸಿ ನಾವು ಒಳ ನುಗ್ಗಬೇಕಿದೆ, ಇದು ಅಂಥಾ ಒಂದು ವಿನೀತ ಪ್ರಯತ್ನ” ಎಂದು ಹೇಳಿದರು.

ಅಥಿತಿಗಳಲ್ಲೊಬ್ಬರಾದ ಮೈಸೂರಿನ ಕನ್ನಡ ಪ್ರೇಮಿ, ಮೆಡಿಕಲ್‌‌ ಅಂಗಡಿಯ ಮಾಲಿಕ ಮನ್ಸೂರ್ ಅಹ್ಮದ್ ಖಾನ್‌ ಅವರು ಮಾತನಾಡಿ, “ಇದು ಹಿಂದೂ-ಮುಸ್ಲಿಂ ಭೋಜನ ಕೂಟವಲ್ಲ. ನಾವೆಲ್ಲರೂ ದ್ರಾವಿಡ ಮಕ್ಕಳು, ಹಾಗಾಗಿ ಇದು ದ್ರಾವಿಡ ಮಕ್ಕಳ ಭೋಜನ ಕೂಟ. ಇದು ಹೆಚ್ಚಿದಷ್ಟೂ ನಮ್ಮ ಬಾಂಧವ್ಯ ಹೆಚ್ಚುತ್ತದೆ” ಎಂದರು.

ಕಾರ್ಯಕ್ರಮದಲ್ಲಿ, “ಕಟ್ಟುತ್ತೇವೆ ನಾವು, ಕಟ್ಟುತ್ತೇವೆ ನಾವು, ಕಟ್ಟೇ ಕಟ್ಟುತ್ತೇವಾ. ಒಡೆದ ಮನಸುಗಳ, ಕಂಡ ಕನಸುಗಳು ಮತ್ತೆ ಕಟ್ಟುತ್ತೇವೆ” ಹಾಡನ್ನು ಹಾಡಲಾಯಿತು. ಊಟವಾದ ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯ ಭಾವಚಿತ್ರಕ್ಕೆ ಹೂ ಹಾಕಿ ಗೌರವಿಸಲಾಯಿತು.

ಇದನ್ನೂ ಓದಿ: ಬಿಹಾರ: ತೇಜಸ್ವಿ ಯಾದವ್‌‌ ಆಯೋಜಿಸಿದ್ದ ಇಫ್ತಾರ್‌‌ ಕೂಟದಲ್ಲಿ ಸಿಎಂ ನಿತೀಶ್‌ ಕುಮಾರ್‌ ಭಾಗಿ!; ಮತ್ತೊಮ್ಮೆ ‘ಮಹಾಘಟಬಂಧನ್‌’?

ಪ್ರಭು, ಗಣೇಶ, ಬೆಟ್ಟೇಗೌಡ, ಚಂದ್ರಶೇಖರ ಐಜೂರ್, ಉಮೇಶ್, ಕುಮಾರ್, ಲೆಕ್ಕ ಪರಿಶೋಧಕ ಆರಾಧ್ಯ ಮತ್ತು ಗೆಳೆಯರು ಸೌಹಾರ್ದ ಇಫ್ತಾರ್‌ ಕೂಟದ ಆಯೋಜನೆಗೆ ಕೈಜೋಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...