Homeಕರ್ನಾಟಕಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರಿಗೆ ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ಪೆದ್ದನಹಳ್ಳಿ ಗ್ರಾಮದ ಗಿರೀಶ್ ಮೂಡಲಗಿರಿಯಪ್ಪ (30) ಮತ್ತು ಚೇಳೂರು ಹೋಬಳಿ ಮಂಚಲದೊರೆ ಗ್ರಾಮದ ಗಿರೀಶ್ (32) ಎಂದು ಗುರುತಿಸಲಾಗಿದೆ.

ಗಿರೀಶ್ ಮೂಡಲಗಿರಿಯಪ್ಪ ಅವರ ವಿರೂಪಗೊಂಡ ಮೃತದೇಹ ಜಮೀನಿನಲ್ಲಿ ಪತ್ತೆಯಾಗಿದ್ದರೆ, ಮಂಚಲದೊರೆ ಗಿರೀಶ್ ಮೃತದೇಹ ಗ್ರಾಮದ ಹೊರವಲಯದ ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುರುವಾರ ರಾತ್ರಿ, ಗ್ರಾಮಸ್ಥರು ಸ್ಥಳೀಯ ದೇವಸ್ಥಾನದ ಉತ್ಸವವನ್ನು ಆಚರಿಸುತ್ತಿದ್ದಾಗ, ಪ್ರಕರಣದ ಪ್ರಮುಖ ಆರೋಪಿ ನಂದೀಶ್, ಗಿರೀಶ್ ಅವರ ಮನೆಗೆ ತೆರಳಿ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ಈ ಯುವಕರನ್ನು ಬೇರೆಡೆಗೆ ಕರೆದೊಯ್ದು, ಅಲ್ಲಿ ಸೇರಿದ್ದ ಗುಂಪು ಕೊಲೆ ಮಾಡಿದೆ ಎಂದು ಆರೋಪ ಕೇಳಿಬಂದಿದೆ.

ಕೂಡಲೇ ದಾಳಿಕೋರರು ದಲಿತ ಯುವಕರಿಗೆ ಓಡಿ ಹೋಗಲು ಸಾಧ್ಯವಾಗದಂತೆ ತೆಂಗಿನ ಗರಿಗಳಿಂದ ಕಟ್ಟಿದರು. ಕಾಲುಗಳನ್ನು ಸುಟ್ಟು ಚಿತ್ರಹಿಂಸೆ ನೀಡಿದರು ಎಂದು ವರದಿಯಾಗಿದೆ.

ನಂತರ ಈ ಯುವಕರ ಭೀಕರವಾಗಿ ಥಳಿಸಲಾಗಿದೆ. ಗಿರೀಶ್ ಮೂಡಲಗಿರಿಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಯುವ ಮೊದಲು ಗಿರೀಶ್ ತಪ್ಪಿಸಿಕೊಳ್ಳಲು ವ್ಯರ್ಥ ಪ್ರಯತ್ನ ಮಾಡಿದ್ದಾರೆ. ಆಗ ದುಷ್ಕರ್ಮಿಗಳು ಗಿರೀಶ್‌ರ ನ್ನು ಕೊಂದು ನೀರಿಗೆ ತಳ್ಳಿದ್ದಾರೆ ಎಂದು ವರದಿಯಾಗಿದೆ.

ದಾಳಿಗೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಕೊಲೆಯಾದ ಯುವಕರ ಮೇಲೆ ಕಳ್ಳತನ ಮಾಡಿದ ಆರೋಪಗಳಿದ್ದವು ಎನ್ನಲಾಗಿದೆ.

ಖೈರ್ಲಾಂಜಿ ಮಾದರಿ ಹತ್ಯೆ ಆರೋಪ: ಪೆದ್ದನಹಳ್ಳಿ ಗ್ರಾಮದಲ್ಲಿ ದಲಿತರು, ತಿಗಳರು ಹಾಗೂ ಲಿಂಗಾಯತರು ಬಹುಸಂಖ್ಯೆಯಲ್ಲಿದ್ದು, ಪ್ಲಾನಿಂಗ್ ಮಾಡಿಕೊಂಡೇ ಈ ಯುವಕರನ್ನು ಕೊಂದಿರುವ ಸಾಧ್ಯತೆ ಇದೆ ಎಂದು ಹೆಸರು ಹೇಳಲಿಚ್ಛಿಸದ ದಲಿತ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಖೈರ್ಲಾಂಜಿಯಂತೆಯೇ ಇಲ್ಲಿಯೂ ಜಾತಿವಾದಿಗಳು ಗುಂಪುಗೂಡಿ ಹತ್ಯೆ ಮಾಡಿರುವ ಶಂಕೆ ಇದೆ. ಸರಿಯಾಗಿ ತನಿಖೆಯಾದಲ್ಲಿ ಆರೋಪಿಗಳು ಸಿಕ್ಕಿ ಬೀಳುತ್ತಾರೆ. ಇಲ್ಲವಾದರೆ ನೂರರಲ್ಲಿ ಇದು ಒಂದು ಎಂಬಂತಾಗುತ್ತದೆ ಎಂದು ಮುಖಂಡರೊಬ್ಬರು ತಿಳಿಸಿದ್ದಾರೆ.

“ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು. ಹೆಚ್ಚಿನ ಹೆಚ್ಚಿನ ಜನರು ಕೊಲೆಯಲ್ಲಿ ಭಾಗಿಯಾಗಿರುವ ಸಾಧ್ಯತೆಗಳಿವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಾಪುರವಾಡ್ ತಿಳಿಸಿದ್ದಾರೆ.

‘ಆರೋಪಿಗಳ ಪತ್ತೆಗೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಇದೇ ವೇಳೆ ದಲಿತ ಸಂಘಟನೆಗಳು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಮನವಿ ಸಲ್ಲಿಸಿವೆ. ಆರೋಪಿಗಳ ವಿರುದ್ಧ ಗುಬ್ಬಿ ಪೊಲೀಸರು ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ದಲಿತ ಮುಖಂಡರಾದ ಕೊಟ್ಟ ಶಂಕರ್‌, “ಕಳ್ಳತನ ಆರೋಪ ನೆಪ ಮಾಡಿ ಇಬ್ಬರು ದಲಿತ ಯುವಕರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ತಾಯಿ ಮತ್ತು ಅವರ ಸಹೋದರಿಯನ್ನು ಗುಬ್ಬಿಯ ಪೊಲೀಸ್‌ ಠಾಣೆಯ ಮುಂದೆ ಭೇಟಿ ಮಾಡಿ ಧೈರ್ಯ ಹೇಳಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಿ ವಿಚಾರಣೆ ಮಾಡುತ್ತಿರುವ ಪೊಲೀಸರು ಯಾವುದೇ ಒತ್ತಡಕ್ಕೆ ಒಳಗಾಗದೆ ತನಿಖೆ ಮಾಡಬೇಕು ಎಂದು ಡಿವೈಎಸ್‌ಪಿ ಮತ್ತು ಎಸ್‌ಪಿಯವರನ್ನು ಭೇಟಿ ಮಾಡಿ ಆಗ್ರಹಿಸುತ್ತೇವೆ. ದಸಂಸದ ಹಿರಿಯರು ಜೊತೆಗಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...