Homeಕರ್ನಾಟಕಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಕೊಲೆಯಾಗಿದ್ದು ಲಿಂಗಾಯತ ಸಮುದಾಯದ ಆರೋಪಿ ಸೇರಿದಂತೆ ಕೆಲವರನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.

ಪೆದ್ದನಹಳ್ಳಿಯ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಪಿ.ಎಂ.ಗಿರೀಶ್‌ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡ ನಾಯಕ ಸಮುದಾಯಕ್ಕೆ ಸೇರಿದ ಗಿರೀಶ್‌ ಅವರನ್ನು ಕೊಲೆ ಮಾಡಿರುವ ಸಂಬಂಧ ದೂರು ಸಲ್ಲಿಕೆಯಾಗಿದ್ದು, ಪೆದ್ದನಹಳ್ಳಿ ಗ್ರಾಮದ ಲಿಂಗಾಯತ ಜಾತಿಗೆ ಸೇರಿದ ನಂದೀಶ್‌ ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ನಂದೀಶ್ ಹೆಸರು ಮಾತ್ರ ಉಲ್ಲೇಖವಾಗಿದ್ದು, ಇತರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಐಪಿಸಿ ಸೆಕ್ಷನ್‌ 302, 201 ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ಹಿಂದಿನ ರಾತ್ರಿ ಆರೋಪಿ ನಂದೀಶ್‌, ಪೆದ್ದನಹಳ್ಳಿಯ ಪಿ.ಎಂ.ಗಿರೀಶ್‌ ಮನೆಗೆ ಬಂದು ಅವರನ್ನು ಕರೆದುಕೊಂಡು ಹೋಗಿದ್ದಾನೆ. ಆದರೆ ಶುಕ್ರವಾರ ಬೆಳಿಗ್ಗೆ ಗ್ರಾಮದ ನೀರಿನ ಕಟ್ಟೆಯಲ್ಲಿ ಗಿರೀಶ್ ಶವ ಪತ್ತೆಯಾಗಿದ್ದು, ದಾರಿಹೋಕರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ದೂರದಲ್ಲಿ ಹಾಗಲವಾಡಿ ಹೋಬಳಿಯ ಮಂಚಲದೊರೆ ಗ್ರಾಮದ ಮತ್ತೊಬ್ಬ ಯುವಕ ಗಿರೀಶ್‌ ಶವ ದೊರೆತಿದೆ. ಇಬ್ಬರ ದೇಹದ ಮೇಲೂ ಗಾಯದ ಗುರುತುಗಳು ಕಂಡು ಬಂದಿವೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೆದ್ದನಹಳ್ಳಿಯ ಗಿರೀಶ್ ಸಹೋದರ ಪಿ.ಎಂ.ಶ್ರೀಧರ್‌ ದೂರು ನೀಡಿದ್ದು, “ನಂದೀಶ್‌ ಹಾಗೂ ಇತರರು ಸೇರಿಕೊಂಡು ಈ ಇಬ್ಬರನ್ನೂ ಕೊಂದಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಲೇಟ್‌ ಮೂಡ್ಲಗಿರಿಯಪ್ಪ ದಂಪತಿಗೆ ಐವರು ಮಕ್ಕಳಿದ್ದು, ಮೊದಲನೆಯವರು ಶ್ರೀಧರ್‌ ಪಿ.ಎಂ., ಕೊಲೆಯಾಗಿರುವ ಗಿರೀಶ್ ಅವಿವಾಹಿತರಾಗಿದ್ದರು. ತಾಯಿ ಗೌರಮ್ಮ ಕೂಲಿ ಮಾಡಿಕೊಂಡು ಊರಿನಲ್ಲಿ ವಾಸವಿದ್ದಾರೆ.

ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಅಜ್ಜಿಯ ಮನೆಯಲ್ಲಿ ಸಂಸಾರ ಸಮೇತ ಪಿ.ಎಂ.ಶ್ರೀಧರ್‌ ವಾಸವಿದ್ದು, ದಿನಾಂಕ 22.04.2022ರಂದು ತಾಯಿ ಗೌರಮ್ಮನವರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಶ್ರೀಧರ್‌ಗೆ ಕರೆ ವಿಷಯ ತಿಳಿಸಿದ್ದಾರೆ.

“ದಿನಾಂಕ 21.04.2022ರಂದು ರಾತ್ರಿ 8.30ರಿಂದ 9 ಗಂಟೆ ಸಮಯದಲ್ಲಿ ಮನೆಯ ಬಳಿ ಬಂದ ಪೆದ್ದನಹಳ್ಳಿ ನಿವಾಸಿ, ಲಿಂಗಾಯತ ಜಾತಿಗೆ ಸೇರಿದ ಪರಮೇಶ್ವರಪ್ಪನವರ ಮಗ ನಂದೀಶ್‌ ಮತ್ತು ಇತರರು ಗಿರೀಶ್‌ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವಾಪಸ್ ಮನೆಗೆ ಬಂದಿರಲಿಲ್ಲ. ಸಹೋದರ ಗಿರೀಶ್‌ ಶವ ಶಿರಾ- ನೆಲ್ಲಿಗೆರೆ ರಸ್ತೆಯಲ್ಲಿನ ಪೆದ್ದನಹಳ್ಳಿ ಗ್ರಾಮ ಸಮೀಪದ ಗುಂಡಿಯ ನೀರಿನಲ್ಲಿ ಪತ್ತೆಯಾದರೆ, ಇಲ್ಲಿಂದ ಸುಮಾರು ದೂರದಲ್ಲಿ ಮತ್ತೊಬ್ಬರನ್ನು ಕೊಲೆ ಮಾಡಿ ಕಾಲುವೆ ದಂಡೆಗೆ ಹೋಗುವ ಮಣ್ಣಿನ ರಸ್ತೆಯಲ್ಲಿ ಹಾಕಿದ್ದಾರೆ” ಎಂದು ಎಫ್‌ಆರ್‌ಐನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

“ಈ ಇಬ್ಬರನ್ನು ನಂದೀಶ್‌ ಮತ್ತು ಇತರರು ದಿನಾಂಕ 21.04.2022ರಂದು ರಾತ್ರಿ ಯಾವುದೋ ಸಮಯದಲ್ಲಿ ಯಾವುದೋ ಉದ್ದೇಶದಿಂದ ಯಾವುದೋ ಆಯುಧಗಳಿಂದ ಎಲ್ಲಿಯೋ ಹೊಡೆದು ಕೊಲೆ ಮಾಡಿ ಸತ್ಯ ಸಂಗತಿಯನ್ನು ಮರೆಮಾಚಲು ಪಿ.ಎಂ.ಗಿರೀಶ್ ಅವರ ಶವವನ್ನು ಮಟ್ಟದ ಗುಂಡಿಯ ನೀರಿನ ಅಂಚಿಗೆ ಹಾಕಿರುತ್ತಾರೆ. ಮಂಚಲಗೆರೆ ಗಿರೀಶ್‌ ಅವರನ್ನು ಮಟ್ಟದ ಗುಂಡಿಯಿಂದ ಸುಮಾರು 150 ಅಡಿ ದೂರದ ಬಂಡಿ ರಸ್ತೆಯ ಮೇಲೆ ಕೊಲೆ ಮಾಡಿ ಹಾಕಿರುತ್ತಾರೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಗ್ರಾಮಕ್ಕೆ ಶ್ವಾನದಳ ಕರೆಸಿದ್ದಾಗ, ಶ್ವಾನಗಳು ಹಲವು ಮನೆಗಳ ಬಳಿ ಹೋಗಿದ್ದವು. ಇದರಿಂದ ಕೆಲವರು ಪರಾರಿಯಾಗಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಯಾದವರ ಮೇಲೆ ಕಳ್ಳತನದ ಆರೋಪ ಹೊರಿಸಿ ಪ್ರಕರಣವನ್ನು ತಿರುಚುವ ಯತ್ನ ಮಾಡಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...